Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಮುಖದ ಸೌಂದರ್ಯ ಹೆಚ್ಚಿಸಲು-ತಾಜಾ 'ಹಣ್ಣುಗಳ ಫೇಸ್' ಪ್ಯಾಕ್!
ಮುಖದ ಸೌಂದರ್ಯವನ್ನು ಹೆಚ್ಚಿಸಲು, ಚರ್ಮದ ಕಾಂತಿ ಬೆಳಗಿಸಲು ಹಾಗೂ ಕಲೆಗಳನ್ನು ನಿವಾರಿಸಲು ಇಂದು ಹಲವು ಬಗೆಯ ಫೇಸ್ ಪ್ಯಾಕ್ಗಳು ಮಾರುಕಟ್ಟೆಯಲ್ಲಿ ಲಗ್ಗೆ ಇಟ್ಟಿವೆ. ಅಲ್ಲದೇ ಈ ಫೇಸ್ ಪ್ಯಾಕ್ ಅನ್ನು ಹಚ್ಚುವ ಪರಿಣಿತರೂ ಇದ್ದಾರೆ. ಆದರೆ ಇವೆಲ್ಲಾ ಕೊಂಚ ದುಬಾರಿಯೂ, ಇದಕ್ಕಾಗಿ ಸಮಯವನ್ನು ವ್ಯಯಿಸಬೇಕಾಗಿ ಬರುವಂತಹದ್ದೂ ಆದುದರಿಂದ ಎಲ್ಲರಿಗೂ ಇವುಗಳನ್ನು ಬಳಸಲು ಸಾಧ್ಯವಿಲ್ಲ, ಆದರೆ ಇದಕ್ಕೂ ಉತ್ತಮವಾದ ಮುಖಲೇಪವನ್ನು (ಫೇಸ್ಪ್ಯಾಕ್) ಅನ್ನು ಮನೆಯಲ್ಲಿಯೇ ತಯಾರಿಸಿಕೊಳ್ಳಬಹುದು, ಅದೂ ಕೂಡ ಕೇವಲ ನೈಸರ್ಗಿಕವಾಗಿ ದೊರೆಯುವ ಹಣ್ಣುಗಳಿಂದ!
ಹೌದು, ಹಣ್ಣುಗಳ ತಿರುಳು ಹೇಗೆ ಆಹಾರದ ರೂಪದಲ್ಲಿ ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ನೀಡುತ್ತವೆಯೋ, ಇದೇ ಪೋಷಕಾಂಶಗಳು ಚರ್ಮದ ಹೊರಗಿನಿಂದಲೂ ಉತ್ತಮ ಆರೈಕೆ ನೀಡಬಲ್ಲವು, ಬನ್ನಿ ನೈಸರ್ಗಿಕವಾಗಿ ಹಾಗೂ ಕಡಿಮೆ ಬೆಲೆಯಲ್ಲಿ ದೊರೆಯುವಂತಹ ಕೆಲವೊಂದು ಹಣ್ಣುಗಳನ್ನು ನಿಮಗೆ ಪರಿಚಯಿಸುತ್ತಿದ್ದೇವೆ ಮುಂದೆ ಓದಿ......

ಚೆನ್ನಾಗಿ ಕಳಿತ ಪಚ್ಚಬಾಳೆ ಹಣ್ಣು
ಚೆನ್ನಾಗಿ ಕಳಿತ ಪಚ್ಚಬಾಳೆ ಹಣ್ಣು ಒಂದು ಕಳಿತ ಬಾಳೆಹಣ್ಣನ್ನು ಕಿವುಚಿ ಮೂರು ದೊಡ್ಡಚಮಚ ಲಿಂಬೆರಸವನ್ನು ಸೇರಿಸಿ ನಯವಾದ ಲೇಪನ ತಯಾರಿಸಿ. ಈ ಲೇಪನವನ್ನು ಈಗತಾನೇ ತೊಳೆದುಕೊಂಡ ಚರ್ಮದ ಮೇಲೆ ದಪ್ಪನಾಗಿ ಹಚ್ಚಿ ಒಣಗಲು ಬಿಡಿ. ಹತ್ತು ನಿಮಿಷಗಳ ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ.

ಪಪ್ಪಾಯಿ-ಜೇನಿನ ಫೇಸ್ ಪ್ಯಾಕ್
*ಒಂದು ತುಂಡು ಪಪ್ಪಾಯಿ (ಚೆನ್ನಾಗಿ ಹಣ್ಣಾಗಿ ಕಳಿತ ತಿರುಳು)
*ಜೇನು
*ಹಸಿ ಹಾಲು

ತಯಾರಿಕಾ ವಿಧಾನ
ಸಮಪ್ರಮಾಣದಲ್ಲಿ ಈ ಮೂರೂ ಸಾಮಾಗ್ರಿಗಳನ್ನು ಚೆನ್ನಾಗಿ ಅರೆದು ಈಗತಾನೇ ತಣ್ಣೀರಿನಲ್ಲಿ ತೊಳೆದ ಮುಖಕ್ಕೆ ತೆಳುವಾಗಿ ಲೇಪಿಸಿಕೊಳ್ಳಿ.
*ಸುಮಾರು ಇಪ್ಪತ್ತರಿಂದ ಇಪ್ಪತ್ತೈದು ನಿಮಿಷ ಬಿಟ್ಟು ಕೇವಲ ತಣ್ಣೀರಿನಿಂದ ತೊಳೆದುಕೊಳ್ಳಿ, ಸೋಪು ಬಳಸದಿರಿ.

ಹಲಸಿನ ಹಣ್ಣಿನ ಫೇಸ್ ಪ್ಯಾಕ್
ಬೇಕಾಗುವ ಸಾಮಾಗ್ರಿ
*ಅರ್ಧ ಕಪ್ ಹಲಸಿನ ಹಣ್ಣಿನ ತಿರುಳು
*1 ಬಾಳೆಹಣ್ಣು, 1 ಗ್ರಾಂ ಕಡಲೆಹಿಟ್ಟು,
* ಅರ್ಧ ಕಪ್ ಹಾಲು

ಹಲಸಿನ ಹಣ್ಣಿನ ಫೇಸ್ ಪ್ಯಾಕ್
ಮೇಲೆ ತಿಳಿಸಿದ ಎಲ್ಲಾ, ಸಾಮಾಗ್ರಿಗಳನ್ನು ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿಕೊಳ್ಳಿ. ಕುತ್ತಿಗೆಯ ಭಾಗಕ್ಕೂ ಅಪ್ಲೈ ಮಾಡಿ ಕೊಳ್ಳಬಹುದು. ಮುಖದಲ್ಲಿ ಪೂರ್ತಿಯಾಗಿ ಒಣಗುವವರೆಗೆ ಹಾಗೆಯೇ ಇಡಿ. ಸುಮಾರು ಅರ್ಧ ಗಂಟೆಯ ನಂತರ ತಣ್ಣಿರಿನಲ್ಲಿ ಚೆನ್ನಾಗಿ ಮುಖವನ್ನು ತೊಳೆದುಕೊಳ್ಳಿ. ಉತ್ತಮ ಪರಿಣಾಮಕ್ಕಾಗಿ ವಾರಕ್ಕೆ ಎರಡು ಬಾರಿ ನೀವಿದನ್ನು ಮಾಡಿಕೊಳ್ಳೋದು ಉತ್ತಮ.

ಖರ್ಜೂರ ಹಣ್ಣು
ಖರ್ಜೂರ - 6 ರಿಂದ 7
ಹಾಲು - ಒಂದು ಸಣ್ಣ ಕಪ್
ಗೋಧಿಹಿಟ್ಟು - ನಾಲ್ಕರಿಂದ ಐದು ಸ್ಪೂನ್

ಖರ್ಜೂರ ಹಣ್ಣು
ಮೊದಲು ಆರರಿಂದ ಏಳು ಖರ್ಜೂರದ ಬೀಜವನ್ನು ತೆಗೆದುಕೊಳ್ಳಿ,. ಹೊರಗಿನ ಧೂಳಿನಿಂದ ಹೇಗೆ ನಿಮ್ಮ ಮುಖದಲ್ಲಿ ಕೊಳೆ ಕೂರುತ್ತೋ ಹಾಗೆಯೇ ಖರ್ಜೂರದ ಹಣ್ಣಿನಲ್ಲಿ ಕೊಳೆ ಕೂರುವ ಸಾಧ್ಯತೆ ಇರುತ್ತೆ, ಹಾಗಾಗಿ ಮೊದಲು ಖರ್ಜೂರನ್ನು ನೀರಿನಲ್ಲಿ ಸ್ವಲ್ಪ ಸ್ವಚ್ಛಗೊಳಿಸಿ ಆದ್ರೆ ಖರ್ಜೂರದ ಮೇಲ್ಬಾಗದ ಚರ್ಮ ಕಿತ್ತುಹೋಗದಂತೆ ನೋಡಿಕೊಳ್ಳಿ. ನಂತ್ರ ಸ್ವಚ್ಛಗೊಳಿಸಿದ ಖರ್ಜೂರವನ್ನು ಹಾಲಿನಲ್ಲಿ ಮುಳುಗಿಸಿ ಇಡಿ. ನೀವು ಎಲ್ಲಾ ಖರ್ಜೂರವೂ ಮುಳುಗುವಷ್ಟು ಹಾಲನ್ನು ತೆಗೆದುಕೊಳ್ಳಬೇಕು.

ಖರ್ಜೂರ ಹಣ್ಣು
ಸುಮಾರು ಒಂದು ಗಂಟೆ ನೆನಸಿದ್ರೆ ಹಾಲಿನಲ್ಲಿ ಖರ್ಜೂರ ಬೆರೆತು ಸ್ಮೂತ್ ಆಗಿರುತ್ತೆ. ನಂತ್ರ ಅವೆರಡರ ಮಿಶ್ರಣದ ಪೇಸ್ಟ್ ತಯಾರಿಸಿಕೊಳ್ಳಿ. ಈ ಪೇಸ್ಟ್ ಗೆ ನಾಲ್ಕರಿಂದ ಐದು ಸ್ಪೂನ್ ಗೋಧಿಹಿಟ್ಟನ್ನು ಸೇರಿಸಿ ಗಟ್ಟಿಯಾಗಿ ಕಲಸಿ ಪೇಸ್ಟ್ ರೆಡಿ ಮಾಡಿ. ಈ ಪೇಸ್ಟನ್ನು ಮುಖಕ್ಕೆ ಅಪ್ಲೈ ಮಾಡ್ಕೊಳ್ಳಿ. ಸುಮಾರು ಅರ್ಥಗಂಟೆ ಮುಖದಲ್ಲಿ ಹಾಗೆಯೇ ಇರಲಿ. ಈ ಫೇಸ್ ಪ್ಯಾಕ್ ಒಂದು ರೀತಿಯ ಸ್ಕ್ರಬ್ ರೀತಿಯೂ ಕೆಲ್ಸ ಮಾಡುತ್ತೆ. ಹಾಗಾಗಿ ಆಗಾಗ ಸ್ವಲ್ಪ ಮಸಾಜ್ ಕೂಡ ಮಾಡ್ಕೊಳ್ಳಿ. ಟ್ಯಾನ್ ತೆಗೆದುಹಾಕಲು ಕೂಡ ಈ ಫೇಸ್ ಪ್ಯಾಕ್ ನೆರವಾಗಲಿದೆ. ನಂತ್ರ ತಣ್ಣನೆಯ ನೀರಿನಿಂದ ಮುಖವನ್ನು ವಾಷ್ ಮಾಡಿ.ರಿಸಲ್ಟ್ ಏನು ಅನ್ನೋದನ್ನು ನೀವೇ ಗಮನಿಸಿಕೊಳ್ಳಬಹುದು. ಟ್ರೈ ಮಾಡಿ ನೋಡಿ.
ಸಿಹಿ ಖರ್ಜೂರ- ಆರೋಗ್ಯಕ್ಕೂ ಸೈ-ಸೌಂದರ್ಯಕ್ಕೂ ಜೈ!
ಸ್ಟಾಬೆರ್ರಿ ಫೇಸ್ ಪ್ಯಾಕ್
ಒಂದು ವೇಳೆ ನಿಮಗೆ ಕಾಂತಿ ಹೀನ ತ್ವಚೆಯಿದ್ದಲ್ಲಿ, ಹೊರಗೆ ಕೆಲಸ ಮಾಡಬೇಡಿ. ಕಾಂತಿಹೀನ ತ್ವಚೆಗೆ ಮತ್ತೆ ಜೀವ ಕಳೆಯನ್ನು ನೀಡಲು ಸ್ಟ್ರಾಬೆರ್ರಿಗಳು ಸಹಕರಿಸುತ್ತವೆ. ಇದಕ್ಕಾಗಿ ಸ್ಟ್ರಾಬೆರ್ರಿಗಳನ್ನು ನೀರಿನಲ್ಲಿ ಬೆರೆಸಿ, ರುಬ್ಬಿಕೊಂಡು ಮುಖಕ್ಕೆ ಲೇಪಿಸಿ.

ಮಾವಿನ ಹಣ್ಣು
ಚೆನ್ನಾಗಿ ಹಣ್ಣಾದ ಮಾವಿನ ತಿರುಳನ್ನು ಕೈಯಲ್ಲಿ ಕಿವುಚಿ ರಸ ಹಿಂಡಿಕೊಳ್ಳಿ. ಈ ರಸವನ್ನು ಈಗ ತಾನೇ ತೊಳೆದ ಮುಖಕ್ಕೆ ಚೆನ್ನಾಗಿ ಸವರಿ ಐದು ನಿಮಿಷ ಬಿಡಿ. ಬಳಿಕ ತಣ್ಣೀರಿನಲ್ಲಿ ತೊಳೆದುಕೊಳ್ಳಿ, ಈಗ ಸೋಪು ಉಪಯೋಗಿಸಬೇಡಿ. ನಿಮ್ಮ ಚರ್ಮ ಉತ್ತಮ ಸೆಳೆತ ಪಡೆದು ನೆರಿಗೆಗಳೆಲ್ಲಾ ಮಾಯವಾಗುತ್ತವೆ.

ದಾಳಿಂಬೆ ಹಣ್ಣು
ದಾಳಿಂಬೆಯಲ್ಲಿಯೂ ಉತ್ತಮ ಪ್ರಮಾಣದ ಪೋಷಕಾಂಶ ಮತ್ತು ಆಂಟಿ ಆಕ್ಸಿಡೆಂಟುಗಳಿವೆ (ಉತ್ಕರ್ಷಣ ನಿರೋಧಕ). ಇವು ಚರ್ಮದ ನೆರಿಗೆಗಳನ್ನು ನಿವಾರಿಸಿ ಮುಪ್ಪು ಬೇಗನೇ ಆವರಿಸದಂತೆ ರಕ್ಷಿಸುತ್ತದೆ. ಇದಕ್ಕಾಗಿ ದಾಳಿಂಬೆಯ ಕಾಳುಗಳನ್ನು ಜಜ್ಜಿ ರಸವನ್ನು ತೆಗೆದು ಇದನ್ನು ಈಗ ತಾನೇ ತೊಳೆದ ಮುಖಕ್ಕೆ ಹಚ್ಚಿ ಐದು ನಿಮಿಷ ಒಣಗಲು ಬಿಡಿ, ಬಳಿಕ ತಣ್ಣೀರಿನಲ್ಲಿ ತೊಳೆದುಕೊಳ್ಳಿ, ಸೋಪು ಉಪಯೋಗಿಸಬೇಡಿ.



Click it and Unblock the Notifications