Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಸೌಂದರ್ಯ ಹೆಚ್ಚಿಸುವ 'ಕುಂಬಳಕಾಯಿ ಫೇಸ್ ಪ್ಯಾಕ್'
ಕುಂಬಳಕಾಯಿಯ ಫೇಸ್ ಪ್ಯಾಕ್ ಬಗ್ಗೆ ಎಂದಾದರೂ ಕೇಳಿದ್ದೀರಾ? ಹಾಗಾದರೆ ಇಂದು ಬೋಲ್ಡ್ ಸ್ಕೈ ಈ ಲೇಖನದಲ್ಲಿ ತಿಳಿಸುತ್ತಿದೆ...ಯಾವುದೇ ಅಡ್ಡ ಪರಿಣಾಮವಿಲ್ಲದ ಈ ಫೇಸ್ ಪ್ಯಾಕ್ ಇದರ ಬಳಕೆಯಿಂದ ಹೊಳೆ ಹೊಳೆಯುವ ತ್ವಚೆ ಪಡೆಯುವಲ್ಲಿ ಸಂಶಯವೇ ಇಲ್ಲ....
ಶ್ರೀಮಂತರು ಧರಿಸಿದ್ದೆಲ್ಲಾ ಬಂಗಾರ, ಬಡವರು ಧರಿಸಿದ್ದು ಕಾಗೆ ಬಂಗಾರ ಎಂದೇ ನಾವೆಲ್ಲಾ ನಂಬಿದ್ದೇವೆ. ಬಡವರು ಬಂಗಾರ ಧರಿಸಿದರೂ ಶ್ರೀಮಂತರು ಕಾಗೆಬಂಗಾರ ಧರಿಸಿದರೂ ಸುಲಭವಾಗಿ ನಾವು ಒಪ್ಪುವುದಿಲ್ಲ. ಅಂತೆಯೇ ಚಿನ್ನದ ಬಣ್ಣದ ಕುಂಬಳ ಕಾಯಿಗೂ ನಾವು ತೋರುವುದು ಅಸಡ್ಡೆಯೇ. ಸಿಹಿ ಕುಂಬಳ ಕಾಯಿ ಪಾಯಸ
ಏಕೆಂದರೆ ಇದು ಸುಲಭದರದಲ್ಲಿ ಮತ್ತು ವರ್ಷದ ಬಹುತೇಕ ದಿನಗಳಲ್ಲಿ ಎಲ್ಲಾ ಕಡೆ ಸಿಗುವುದರಿಂದ ಇದನ್ನು ಬಡವರ ತರಕಾರಿ ಎಂದೇ ತಿಳಿದುಬಿಟ್ಟಿದ್ದೇವೆ. ಆದರೆ ಇದೊಂದು ಉತ್ತಮ ತರಕಾರಿಯಾಗಿದ್ದು ಆರೋಗ್ಯಕ್ಕೆ ಹಾಗೂ ಸೌಂದರ್ಯಕ್ಕೆ ಕೂಡ ಹಲವು ರೀತಿಯಲ್ಲಿ ಉತ್ತಮವಾಗಿದೆ. ಆರೋಗ್ಯದ ಪಾಲಿನ ಸಂಜೀವಿನಿ-ಸಿಹಿ ಕುಂಬಳಕಾಯಿ
ನಮಗೆಲ್ಲಾ ಗೊತ್ತಿರುವ ಹಾಗೆ ಮಾರುಕಟ್ಟೆಯಲ್ಲಿ ಅರಿಶಿನ, ಜೇನು ಅಥವಾ ಲಿಂಬೆ ಹೀಗೆ ಹಲವು ವಿಧವಾದ ಫೇಸ್ ಪ್ಯಾಕ್ಗಳು ಲಭ್ಯವಿದೆ. ಕುಂಬಳಕಾಯಿಯ ಫೇಸ್ ಪ್ಯಾಕ್ ಬಗ್ಗೆ ಎಂದಾದರೂ ಕೇಳಿದ್ದೀರಾ? ಹಾಗಾದರೆ ಇಂದು ಬೋಲ್ಡ್ ಸ್ಕೈ ಈ ಲೇಖನದಲ್ಲಿ ತಿಳಿಸುತ್ತಿದೆ...ಯಾವುದೇ ಅಡ್ಡ ಪರಿಣಾಮವಿಲ್ಲದ ಈ ಫೇಸ್ ಪ್ಯಾಕ್ ಇದರ ಬಳಕೆಯಿಂದ ಹೊಳೆ ಹೊಳೆಯುವ ತ್ವಚೆ ಪಡೆಯುವಲ್ಲಿ ಸಂಶಯವೇ ಇಲ್ಲ....

ಫೇಸ್ ಪ್ಯಾಕ್ ತಯಾರಿಸುವ ವಿಧಾನ
ಅರ್ಧ ಕಪ್ ಕುಂಬಳ ಕಾಯಿಯ ತಿರುಳಿನ ತುರಿಗೆ ಒಂದು ಚಿಕ್ಕ ಚಮಚ ಏಕಹೂವಿನ ಜೇನು (manuka honey) ಮತ್ತು ಅರ್ಧ ಚಿಕ್ಕಚಮಚ ಅರಿಶಿನ ಪುಡಿ ಬೆರೆಸಿ ನಯವಾದ ಲೇಪನ ತಯಾರಿಸಿ. ಈ ಲೇಪನವನ್ನು ಈಗತಾನೇ ತಣ್ಣೀರಿನಲ್ಲಿ ತೊಳೆದುಕೊಂಡ ಮುಖದ ಮೇಲೆ ತೆಳುವಾಗಿ ಹಚ್ಚಿ ಸುಮಾರು ಐದು ನಿಮಿಷ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಇದರಿಂದ ಮುಖದ ಚರ್ಮದ ಕಾಂತಿ ಹೆಚ್ಚುತ್ತದೆ ಹಾಗೂ ಕಲೆಗಳನ್ನು ತಿಳಿಯಾಗಿಸುತ್ತದೆ.

ಶರೀರದ ಚರ್ಮದ ಸತ್ತ ಜೀವಕೋಶಗಳನ್ನು ನಿವಾರಿಸಲು
ಒಂದು ಕಪ್ ಕುಂಬಳದ ತಿರುಳಿನ ತುರಿಗೆ ಕಾಲು ಕಪ್ ಜೊಜೊಬಾ ಎಣ್ಣೆ (jojoba oil), ಕಾಲು ಕಪ್ ಕಾಫಿಬೀಜವನ್ನು ಕುಟ್ಟಿ ಮಾಡಿದ ಪುಡಿ, ಕಾಲು ಕಪ್ ಹಿಮಾಲಯದ ಉಪ್ಪು ಅಥವಾ ಕೆಂಪು ಕಲ್ಲುಪ್ಪು (Himalayan salt) ಇಷ್ಟನ್ನು ಬೆರೆಸಿ ಚೆನ್ನಾಗಿ ಪುಡಿಮಾಡಿ ಮಿಶ್ರಣ ತಯಾರಿಸಿ.

ಶರೀರದ ಚರ್ಮದ ಸತ್ತ ಜೀವಕೋಶಗಳನ್ನು ನಿವಾರಿಸಲು
ಈ ಲೇಪವನ್ನು ಮೈಗೆ ಹಚ್ಚಿಕೊಂಡು ಕೊಂಚ ಹೊತ್ತಿನ ಬಳಿಕ ಸೌಮ್ಯ ಬ್ರಶ್ ಬಳಸಿ ಉಜ್ಜಿಕೊಂಡು ಸ್ನಾನ ಮಾಡುವ ಮೂಲಕ ಚರ್ಮಕ್ಕೆ ಅಂಟಿಕೊಂಡಿದ್ದ ಸತ್ತ ಜೀವಕೋಶಗಳೆಲ್ಲಾ ಮಾಯವಾಗಿ ಚರ್ಮ ಸಹಜಕಳೆಯನ್ನು ಪಡೆಯುತ್ತದೆ.

ಮುಖದ ಚರ್ಮದ ಸತ್ತ ಜೀವಕೋಶಗಳನ್ನು ನಿವಾರಿಸಲು
ಕಾಲು ಕಪ್ ಕುಂಬಳ ತಿರುಳಿನ ತುರಿ, ಕಾಲು ಕಪ್ ಬೆಂಟೋನೈಟ್ ಜೇಡಿ (bentonite clay), ಕಾಲು ಕಪ್ ಕ್ಯಾಮೋಮೈಲ್ ಟೀ ಮತ್ತು ಕಾಲು ಕಪ್ ಅಗಸೆ ಬೀಜದ ಪುಡಿಯನ್ನು ಬೆರೆಸಿ ನಯವಾದ ಲೇಪನ ತಯಾರಿಸಿ.

ಮುಖದ ಚರ್ಮದ ಸತ್ತ ಜೀವಕೋಶಗಳನ್ನು ನಿವಾರಿಸಲು
ಈ ಲೇಪನವನ್ನು ಈಗ ತಾನೇ ತೊಳೆದುಕೊಂಡ ಮುಖಕ್ಕೆ ದಪ್ಪನಾಗಿ ಹಚ್ಚಿ ಸುಮಾರು ಒಂದು ನಿಮಿಷ ಬಿಟ್ಟು ಬಳಿಕ ಹೆಚ್ಚಿನ ಒತ್ತಡವಿಲ್ಲದೇ ಬೆರಳುಗಳಿಂದ ಮುಖದ ಚರ್ಮವನ್ನು ಮಸಾಜ್ ಮಾಡಿ. ಈ ಲೇಪನ ಚರ್ಮದ ಹೊರಭಾಗದಲ್ಲಿ ಅಂಟಿಕೊಂಡಿದ್ದ ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸಲು ನೆರವಾಗುತ್ತದೆ. ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ.

ತಲೆಗೂದಲ ಲೇಪನ
ಒಂದು ದೊಡ್ಡಚಮಚ ಕುಂಬಳದ ಬೀಜದ ಎಣ್ಣೆ, ಒಂದು ಕಪ್ನ ಮೂರರಲ್ಲೊಂದು ಭಾಗ ಕೊಬ್ಬರಿ ಎಣ್ಣೆ, ಒಂದು ಕಪ್ ನ ಮೂರರಲ್ಲೊಂದು ಭಾಗ ಹೊಹೋಬಾ ಎಣ್ಣೆ, ಐದು ಹನಿ ನೀಲಗಿರಿ ತೈಲ, ಐದು ಹನಿ ಲ್ಯಾವೆಂಡರ್ ತೈಲವನ್ನು ಬೆರೆಸಿ ನಯವಾದ ಲೇಪನ ತಯಾರಿಸಿ.

ತಲೆಗೂದಲ ಲೇಪನ
ಇನ್ನು ಈ ಲೇಪನವನ್ನು ತೇವಗೊಳಿಸಿ ಒರೆಸಿಕೊಂಡ ಕೂದಲಿಗೆ ಹಚ್ಚಿ ಕನಿಷ್ಠ ಐದು ನಿಮಿಷ ಹಾಗೇ ಬಿಡಿ. ಬಳಿಕ ಸೌಮ್ಯ ಶಾಂಪೂ ಬಳಸಿ ತೊಳೆದುಕೊಳ್ಳಿ. ಇದರಿಂದ ಕೂದಲ ಬುಡಕ್ಕೆ ಹೆಚ್ಚಿನ ಪ್ರಚೋದನೆ ದೊರೆತು ಕೂದಲ ಬೆಳವಣಿಗೆ ಹೆಚ್ಚಲು ಹಾಗೂ ಕೂದಲ ಬುಡ ದೃಢಗೊಳ್ಳುವ ಮೂಲಕ ಕೂದಲು ಉದುರುವುದು ಸಹಾ ಕಡಿಮೆಯಾಗುತ್ತದೆ.



Click it and Unblock the Notifications











