Latest Updates
-
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಝಳದಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಹೀಟ್ವೇವ್ನಿಂದ ಪಾರಾಗಲು ಈ ಸಣ್ಣ ಬದಲಾವಣೆ ಸಾಕು! -
ತಾಯಂದಿರ ದಿನದ ಗೊಂದಲವೇ? ಅಮ್ಮ ಮತ್ತು ಅತ್ತೆ ಇಬ್ಬರನ್ನೂ ಖುಷಿಪಡಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ!
ಫ್ಯಾಷನ್ ಲೋಕಕ್ಕೆ ಅನುಷ್ಕಾ ಶರ್ಮ ಪರಿಚಯಿಸಿದ ವೆಂಡೆಲ್ ಇನ್ನಿಲ್ಲ
ಬಾಲಿವುಡ್ನ ಪ್ರಸಿದ್ಧ ಫ್ಯಾಷನ್ ಡಿಸೈನರ್ ವೆಂಡೆಲ್ ರಾಡ್ರಿಕ್ಸ್ 59ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಫೆ. 12ಕ್ಕೆ ವೆಂಡೆಲ್ ರಾಡ್ರಿಕ್ಸ್ ಕೊನೆಯುಸಿರು ಎಳೆದಿದ್ದಾರೆ. ಫ್ಯಾಷನ್ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ವೆಂಡೆಲ್ ಇದೀಗ ನೆನಪು ಮಾತ್ರ.

ಪದ್ಮಶ್ರೀ ಪುರಸ್ಕೃತ ವೆಂಡೆಲಾ IGEDO (The world's largest garment fair)ಗೆ ಆಹ್ವಾನ ಸಿಕ್ಕಂತಹ ಮೊದಲ ಭಾರತೀಯ ಫ್ಯಾಷನ್ ಡಿಸೈನರ್ ಕೂಡ ಹೌದು. ಫ್ಯಾಷನ್ ಲೋಕದಲ್ಲಿ ಹಲವಾರು ಕ್ರಿಯೇಟಿವ್ ಐಡಿಯಾಗಳಿಂದ ಸದ್ದು ಮಾಡುತ್ತಿದ್ದ ವೆಂಡೆಲಾ ಅವರ ಸಾಂಪ್ರದಾಯಿಕ ಗೋನ್ ಕುನ್ಬಿ ಸ್ಯಾರಿ ಎಂದೆಂದಿಗೂ ಫ್ಯಾಷನ್ ಪ್ರಿಯರ ಫೆವರೆಟ್ ಅಗಿದೆ. ಇವರು 2017ರಲ್ಲಿ ದಪ್ಪಗಿನ ಮಹಿಳೆಯರಿಗಾಗಿ ಹಲವಾರು ಡಿಸೈನರ್ ಡ್ರೆಸ್ ಮಾಡಿ ಪ್ರಮೋಟ್ ಮಾಡುವ ಮೂಲಕ ಗಮನ ಸೆಳೆದಿದ್ದರು.
ವೆಂಡೆಲ್ ರಾಡ್ರಿಕ್ಸ್ ಗೆ ಗೋವಾದಲ್ಲಿ ಕಾಸ್ಟ್ಯೂಮ್ ಮ್ಯೂಸಿಯಂ ನಿರ್ಮಿಸಬೇಕೆಂಬ ಕನಸಿತ್ತು. ಗೋವಾ ಕಾಸ್ಟ್ಯೂಮ್ ಮತ್ತು ಗೋವಾ ಫ್ಯಾಶನ್ ಕುರಿತಾದ ಮ್ಯೂಸಿಯಂ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿತ್ತು. ಅದು ಪೂರ್ಣಗೊಳ್ಳುವ ಮುನ್ನವೇ ವೆಂಡೆಲ್ ರಾಡ್ರಿಕ್ಸ್ ನಿಧನ ಹೊಂದಿದ್ದಾರೆ.
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರನ್ನು ಮಾಡೆಲಿಂಗ್ ಜಗತ್ತಿಗೆ ಪರಿಚಯಿಸಿದ ಕೀರ್ತಿ ಕೂಡ ಇವರಿಗೆ ಸಲ್ಲುತ್ತದೆ. ಬೆಂಗಳೂರಿನ ಶಾಪ್ವೊಂದರಲ್ಲಿ ಅನುಷ್ಕಾರನ್ನು ನೋಡಿದ ವೆಂಡೆಲಾ ಆಕೆಗೆ ಮಾಡೆಲಿಂಗ್ ಜಗತ್ತಿಗೆ ಬರುವಂತೆ ಸಲಹೆ ನೀಡುತ್ತಾರೆ. ಇವರ ಮುಖಾಂತರ ಅನುಷ್ಕಾ ಬಣ್ಣದ ಲೋಕಕ್ಕೆ ಕಾಲಿಡುತ್ತಾರೆ.
ಲೈಂಗಿಕ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಲವಾರು ಹೋರಾಟ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಗುರುತಿಸಿ ಪದ್ಮಶ್ರೀ ನೀಡಿ ಗೌರವಿಸಲಾಯಿತು.
ನಟನ ಅಕಾಲಿಕ ಮರಣಕ್ಕೆ ಬಾಲಿವುಡ್ ಮಂದಿ ಕಂಬನಿ ಮಿಡಿದ್ದಾರೆ.



Click it and Unblock the Notifications