Latest Updates
-
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ?
ಫ್ಯಾಷನ್ ಲೋಕಕ್ಕೆ ಅನುಷ್ಕಾ ಶರ್ಮ ಪರಿಚಯಿಸಿದ ವೆಂಡೆಲ್ ಇನ್ನಿಲ್ಲ
ಬಾಲಿವುಡ್ನ ಪ್ರಸಿದ್ಧ ಫ್ಯಾಷನ್ ಡಿಸೈನರ್ ವೆಂಡೆಲ್ ರಾಡ್ರಿಕ್ಸ್ 59ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಫೆ. 12ಕ್ಕೆ ವೆಂಡೆಲ್ ರಾಡ್ರಿಕ್ಸ್ ಕೊನೆಯುಸಿರು ಎಳೆದಿದ್ದಾರೆ. ಫ್ಯಾಷನ್ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ವೆಂಡೆಲ್ ಇದೀಗ ನೆನಪು ಮಾತ್ರ.

ಪದ್ಮಶ್ರೀ ಪುರಸ್ಕೃತ ವೆಂಡೆಲಾ IGEDO (The world's largest garment fair)ಗೆ ಆಹ್ವಾನ ಸಿಕ್ಕಂತಹ ಮೊದಲ ಭಾರತೀಯ ಫ್ಯಾಷನ್ ಡಿಸೈನರ್ ಕೂಡ ಹೌದು. ಫ್ಯಾಷನ್ ಲೋಕದಲ್ಲಿ ಹಲವಾರು ಕ್ರಿಯೇಟಿವ್ ಐಡಿಯಾಗಳಿಂದ ಸದ್ದು ಮಾಡುತ್ತಿದ್ದ ವೆಂಡೆಲಾ ಅವರ ಸಾಂಪ್ರದಾಯಿಕ ಗೋನ್ ಕುನ್ಬಿ ಸ್ಯಾರಿ ಎಂದೆಂದಿಗೂ ಫ್ಯಾಷನ್ ಪ್ರಿಯರ ಫೆವರೆಟ್ ಅಗಿದೆ. ಇವರು 2017ರಲ್ಲಿ ದಪ್ಪಗಿನ ಮಹಿಳೆಯರಿಗಾಗಿ ಹಲವಾರು ಡಿಸೈನರ್ ಡ್ರೆಸ್ ಮಾಡಿ ಪ್ರಮೋಟ್ ಮಾಡುವ ಮೂಲಕ ಗಮನ ಸೆಳೆದಿದ್ದರು.
ವೆಂಡೆಲ್ ರಾಡ್ರಿಕ್ಸ್ ಗೆ ಗೋವಾದಲ್ಲಿ ಕಾಸ್ಟ್ಯೂಮ್ ಮ್ಯೂಸಿಯಂ ನಿರ್ಮಿಸಬೇಕೆಂಬ ಕನಸಿತ್ತು. ಗೋವಾ ಕಾಸ್ಟ್ಯೂಮ್ ಮತ್ತು ಗೋವಾ ಫ್ಯಾಶನ್ ಕುರಿತಾದ ಮ್ಯೂಸಿಯಂ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿತ್ತು. ಅದು ಪೂರ್ಣಗೊಳ್ಳುವ ಮುನ್ನವೇ ವೆಂಡೆಲ್ ರಾಡ್ರಿಕ್ಸ್ ನಿಧನ ಹೊಂದಿದ್ದಾರೆ.
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರನ್ನು ಮಾಡೆಲಿಂಗ್ ಜಗತ್ತಿಗೆ ಪರಿಚಯಿಸಿದ ಕೀರ್ತಿ ಕೂಡ ಇವರಿಗೆ ಸಲ್ಲುತ್ತದೆ. ಬೆಂಗಳೂರಿನ ಶಾಪ್ವೊಂದರಲ್ಲಿ ಅನುಷ್ಕಾರನ್ನು ನೋಡಿದ ವೆಂಡೆಲಾ ಆಕೆಗೆ ಮಾಡೆಲಿಂಗ್ ಜಗತ್ತಿಗೆ ಬರುವಂತೆ ಸಲಹೆ ನೀಡುತ್ತಾರೆ. ಇವರ ಮುಖಾಂತರ ಅನುಷ್ಕಾ ಬಣ್ಣದ ಲೋಕಕ್ಕೆ ಕಾಲಿಡುತ್ತಾರೆ.
ಲೈಂಗಿಕ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಲವಾರು ಹೋರಾಟ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಗುರುತಿಸಿ ಪದ್ಮಶ್ರೀ ನೀಡಿ ಗೌರವಿಸಲಾಯಿತು.
ನಟನ ಅಕಾಲಿಕ ಮರಣಕ್ಕೆ ಬಾಲಿವುಡ್ ಮಂದಿ ಕಂಬನಿ ಮಿಡಿದ್ದಾರೆ.



Click it and Unblock the Notifications
