Latest Updates
-
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ!
ಫ್ಯಾಷನ್ ಲೋಕಕ್ಕೆ ಅನುಷ್ಕಾ ಶರ್ಮ ಪರಿಚಯಿಸಿದ ವೆಂಡೆಲ್ ಇನ್ನಿಲ್ಲ
ಬಾಲಿವುಡ್ನ ಪ್ರಸಿದ್ಧ ಫ್ಯಾಷನ್ ಡಿಸೈನರ್ ವೆಂಡೆಲ್ ರಾಡ್ರಿಕ್ಸ್ 59ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಫೆ. 12ಕ್ಕೆ ವೆಂಡೆಲ್ ರಾಡ್ರಿಕ್ಸ್ ಕೊನೆಯುಸಿರು ಎಳೆದಿದ್ದಾರೆ. ಫ್ಯಾಷನ್ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ವೆಂಡೆಲ್ ಇದೀಗ ನೆನಪು ಮಾತ್ರ.

ಪದ್ಮಶ್ರೀ ಪುರಸ್ಕೃತ ವೆಂಡೆಲಾ IGEDO (The world's largest garment fair)ಗೆ ಆಹ್ವಾನ ಸಿಕ್ಕಂತಹ ಮೊದಲ ಭಾರತೀಯ ಫ್ಯಾಷನ್ ಡಿಸೈನರ್ ಕೂಡ ಹೌದು. ಫ್ಯಾಷನ್ ಲೋಕದಲ್ಲಿ ಹಲವಾರು ಕ್ರಿಯೇಟಿವ್ ಐಡಿಯಾಗಳಿಂದ ಸದ್ದು ಮಾಡುತ್ತಿದ್ದ ವೆಂಡೆಲಾ ಅವರ ಸಾಂಪ್ರದಾಯಿಕ ಗೋನ್ ಕುನ್ಬಿ ಸ್ಯಾರಿ ಎಂದೆಂದಿಗೂ ಫ್ಯಾಷನ್ ಪ್ರಿಯರ ಫೆವರೆಟ್ ಅಗಿದೆ. ಇವರು 2017ರಲ್ಲಿ ದಪ್ಪಗಿನ ಮಹಿಳೆಯರಿಗಾಗಿ ಹಲವಾರು ಡಿಸೈನರ್ ಡ್ರೆಸ್ ಮಾಡಿ ಪ್ರಮೋಟ್ ಮಾಡುವ ಮೂಲಕ ಗಮನ ಸೆಳೆದಿದ್ದರು.
ವೆಂಡೆಲ್ ರಾಡ್ರಿಕ್ಸ್ ಗೆ ಗೋವಾದಲ್ಲಿ ಕಾಸ್ಟ್ಯೂಮ್ ಮ್ಯೂಸಿಯಂ ನಿರ್ಮಿಸಬೇಕೆಂಬ ಕನಸಿತ್ತು. ಗೋವಾ ಕಾಸ್ಟ್ಯೂಮ್ ಮತ್ತು ಗೋವಾ ಫ್ಯಾಶನ್ ಕುರಿತಾದ ಮ್ಯೂಸಿಯಂ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿತ್ತು. ಅದು ಪೂರ್ಣಗೊಳ್ಳುವ ಮುನ್ನವೇ ವೆಂಡೆಲ್ ರಾಡ್ರಿಕ್ಸ್ ನಿಧನ ಹೊಂದಿದ್ದಾರೆ.
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರನ್ನು ಮಾಡೆಲಿಂಗ್ ಜಗತ್ತಿಗೆ ಪರಿಚಯಿಸಿದ ಕೀರ್ತಿ ಕೂಡ ಇವರಿಗೆ ಸಲ್ಲುತ್ತದೆ. ಬೆಂಗಳೂರಿನ ಶಾಪ್ವೊಂದರಲ್ಲಿ ಅನುಷ್ಕಾರನ್ನು ನೋಡಿದ ವೆಂಡೆಲಾ ಆಕೆಗೆ ಮಾಡೆಲಿಂಗ್ ಜಗತ್ತಿಗೆ ಬರುವಂತೆ ಸಲಹೆ ನೀಡುತ್ತಾರೆ. ಇವರ ಮುಖಾಂತರ ಅನುಷ್ಕಾ ಬಣ್ಣದ ಲೋಕಕ್ಕೆ ಕಾಲಿಡುತ್ತಾರೆ.
ಲೈಂಗಿಕ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಲವಾರು ಹೋರಾಟ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಗುರುತಿಸಿ ಪದ್ಮಶ್ರೀ ನೀಡಿ ಗೌರವಿಸಲಾಯಿತು.
ನಟನ ಅಕಾಲಿಕ ಮರಣಕ್ಕೆ ಬಾಲಿವುಡ್ ಮಂದಿ ಕಂಬನಿ ಮಿಡಿದ್ದಾರೆ.



Click it and Unblock the Notifications