Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಫ್ಯಾಷನ್ ಲೋಕಕ್ಕೆ ಅನುಷ್ಕಾ ಶರ್ಮ ಪರಿಚಯಿಸಿದ ವೆಂಡೆಲ್ ಇನ್ನಿಲ್ಲ
ಬಾಲಿವುಡ್ನ ಪ್ರಸಿದ್ಧ ಫ್ಯಾಷನ್ ಡಿಸೈನರ್ ವೆಂಡೆಲ್ ರಾಡ್ರಿಕ್ಸ್ 59ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಫೆ. 12ಕ್ಕೆ ವೆಂಡೆಲ್ ರಾಡ್ರಿಕ್ಸ್ ಕೊನೆಯುಸಿರು ಎಳೆದಿದ್ದಾರೆ. ಫ್ಯಾಷನ್ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ವೆಂಡೆಲ್ ಇದೀಗ ನೆನಪು ಮಾತ್ರ.

ಪದ್ಮಶ್ರೀ ಪುರಸ್ಕೃತ ವೆಂಡೆಲಾ IGEDO (The world's largest garment fair)ಗೆ ಆಹ್ವಾನ ಸಿಕ್ಕಂತಹ ಮೊದಲ ಭಾರತೀಯ ಫ್ಯಾಷನ್ ಡಿಸೈನರ್ ಕೂಡ ಹೌದು. ಫ್ಯಾಷನ್ ಲೋಕದಲ್ಲಿ ಹಲವಾರು ಕ್ರಿಯೇಟಿವ್ ಐಡಿಯಾಗಳಿಂದ ಸದ್ದು ಮಾಡುತ್ತಿದ್ದ ವೆಂಡೆಲಾ ಅವರ ಸಾಂಪ್ರದಾಯಿಕ ಗೋನ್ ಕುನ್ಬಿ ಸ್ಯಾರಿ ಎಂದೆಂದಿಗೂ ಫ್ಯಾಷನ್ ಪ್ರಿಯರ ಫೆವರೆಟ್ ಅಗಿದೆ. ಇವರು 2017ರಲ್ಲಿ ದಪ್ಪಗಿನ ಮಹಿಳೆಯರಿಗಾಗಿ ಹಲವಾರು ಡಿಸೈನರ್ ಡ್ರೆಸ್ ಮಾಡಿ ಪ್ರಮೋಟ್ ಮಾಡುವ ಮೂಲಕ ಗಮನ ಸೆಳೆದಿದ್ದರು.
ವೆಂಡೆಲ್ ರಾಡ್ರಿಕ್ಸ್ ಗೆ ಗೋವಾದಲ್ಲಿ ಕಾಸ್ಟ್ಯೂಮ್ ಮ್ಯೂಸಿಯಂ ನಿರ್ಮಿಸಬೇಕೆಂಬ ಕನಸಿತ್ತು. ಗೋವಾ ಕಾಸ್ಟ್ಯೂಮ್ ಮತ್ತು ಗೋವಾ ಫ್ಯಾಶನ್ ಕುರಿತಾದ ಮ್ಯೂಸಿಯಂ ನಿರ್ಮಾಣ ಕೆಲಸ ಭರದಿಂದ ಸಾಗುತ್ತಿತ್ತು. ಅದು ಪೂರ್ಣಗೊಳ್ಳುವ ಮುನ್ನವೇ ವೆಂಡೆಲ್ ರಾಡ್ರಿಕ್ಸ್ ನಿಧನ ಹೊಂದಿದ್ದಾರೆ.
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರನ್ನು ಮಾಡೆಲಿಂಗ್ ಜಗತ್ತಿಗೆ ಪರಿಚಯಿಸಿದ ಕೀರ್ತಿ ಕೂಡ ಇವರಿಗೆ ಸಲ್ಲುತ್ತದೆ. ಬೆಂಗಳೂರಿನ ಶಾಪ್ವೊಂದರಲ್ಲಿ ಅನುಷ್ಕಾರನ್ನು ನೋಡಿದ ವೆಂಡೆಲಾ ಆಕೆಗೆ ಮಾಡೆಲಿಂಗ್ ಜಗತ್ತಿಗೆ ಬರುವಂತೆ ಸಲಹೆ ನೀಡುತ್ತಾರೆ. ಇವರ ಮುಖಾಂತರ ಅನುಷ್ಕಾ ಬಣ್ಣದ ಲೋಕಕ್ಕೆ ಕಾಲಿಡುತ್ತಾರೆ.
ಲೈಂಗಿಕ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಲವಾರು ಹೋರಾಟ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಗುರುತಿಸಿ ಪದ್ಮಶ್ರೀ ನೀಡಿ ಗೌರವಿಸಲಾಯಿತು.
ನಟನ ಅಕಾಲಿಕ ಮರಣಕ್ಕೆ ಬಾಲಿವುಡ್ ಮಂದಿ ಕಂಬನಿ ಮಿಡಿದ್ದಾರೆ.



Click it and Unblock the Notifications











