Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಳೆಗಾಲದಲ್ಲಿ ಕಾಯಿಲೆ ಬೀಳುವುದನ್ನು ತಡೆಗಟ್ಟಲು 9 ಸೂತ್ರಗಳು
ಅಬ್ಬಾಬ್ಬಾ ಎಂಥ ಮಳೆ, ರಣ ಭೀಕರ ಮಳೆ, ಈ ಮಳೆಯಿಂದಾಗಿ ರಾಜ್ಯದಲ್ಲಿ ಹಲವು ಕಡೆ ಪ್ರವಾಹದ ಭೀತಿ, ಶಾಲಾ ಮಕ್ಕಳಿಗೆ ರಜೆ ನೀಡಲಾಗುತ್ತಿದೆ, ಹೊರಗಡೆ ಓಡಾಡುವುದಕ್ಕೆ ಕಷ್ಟವಾಗುತ್ತಿದೆ ಅಂಥ ಮಳೆ. ಒಂದು ಕಡೆ ತೀವ್ರ ಮಳೆ, ಮತ್ತೊಂದೆಡೆ ಡೆಂಗ್ಯೂ, ಸಾಮಾನ್ಯ ಶೀತ, ಕೆಮ್ಮು, ಜ್ವರ ಈ ಬಗೆಯ ಸಮಸ್ಯೆ ಕೂಡ ಹೆಚ್ಚಾಗುತ್ತಿದೆ.

ಮಳೆಗಾಲದಲ್ಲಿ ಸ್ವಲ್ಪ ಮುನ್ನೆಚ್ಚರಿಕೆ ತಗೆದುಕೊಂಡರೆ ಕಾಯಿಲೆ ಬೀಳುವುದನ್ನು ತಡೆಗಟ್ಟಬಹುದು, ಮಳೆಗಾಲದಲ್ಲಿ ಆರೋಗ್ಯ ಕಾಪಾಡಲು ಈ ಟಿಪ್ಸ್ ತುಂಬಾನೇ ಸಹಾಯ ಮಾಡುತ್ತದೆ.
1. ರೋಗ ನಿರೋಧಕ ಶಕ್ತಿ ಹೆಚ್ಚಿಸಿ: ಕಷಾಯ ಸೇವನೆ, ಮಳೆಗಾಲದಲ್ಲಿ ಮಾಡುವ ಕೆಲವೊಂದು ಮನೆಮದ್ದು ಗೊತ್ತಿದ್ದರೆ ಅದನ್ನು ಸೇವಿಸುವುದು, ಮೆಂತೆ ಗಂಜಿ, ಲೇಹ್ಯ, ಕಷಾಯ ಸೇವನೆ ಇವುಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. ಸೂಪ್ ಕೂಡ ಮಾಡಿ ಕುಡಿಯಿರಿ ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.
2. ನೀರನ್ನು ಕಾಯಿಸಿ ಕುಡಿಯಿರಿ: ಕೆಲವರಿಗೆ ತಣ್ಣೀರು ಕುಡಿಯುವ ಅಭ್ಯಾಸವಿರುತ್ತದೆ, ಅದರೆ ಮಳೆಗಾಲದಲ್ಲಿ ನೀರನ್ನು ಕಾಯಿಸಿ ಕುಡಿಯುವುದು ಸುರಕ್ಷಿತ. ತಣ್ಣೀರು ಕುಡಿಯಲು ಇಷ್ಟಪಡುವವರು ನೀರನ್ನು ಕುದಿಸಿ ಆರಿಸಿ ಕುಡಿಯಿರಿ. ಅದರಲ್ಲಿಯೂ ಹೋಟೆಲ್ಗೆ ಹೋದಾಗ ಅವರು ಕೊಡುವ ನೀರಿನ ಬದಲಿಗೆ ಫಿಲ್ಟರ್ ನೀರು ಸುರಕ್ಷಿತ.
3. ಬೀದಿ ಬದಿಯ ಆಹಾರ ಸೇವಿಸಬೇಡಿ
ಬೀದಿ ಬದಿಯ ಆಹಾರ ಸೇವನೆಯಿಂದ ಕಾಯಿಲೆ ಬೀಳುವ ಸಾಧ್ಯತೆ ಹೆಚ್ಚು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ. ಬೀದಿ ಬದಿಯ ಆಹಾರ ಸೇವನೆ ಮಾಡಿದರೆ ಒಂದು ವೇಳೆ ಆ ಆಹಾರಗಳಿಗೆ ಮಳೆ ನೀರು ಬೀಳುವುದು ಅಥವಾ ಫಿಲ್ಟರ್ ಮಾಡದ ನೀರು ಬಳಸಿದರೆ ಕಷ್ಟ. ನಿಮಗೆ ನಂಬಿಕೆ ಇರುವ ಕಡೆ ಮಾತ್ರ ಬೀದಿ ಬದಿಯ ಆಹಾರ ಸೇವಿಸಿ.
4. ಹೊಟ್ಟೆಯ ಆರೋಗ್ಯಕ್ಕಾಗಿ ಪ್ರೀಬಯೋಟಿಕ್ ಆಹಾರ ಸೇವಿಸಿ
ಮಳೆಗಾಲದಲ್ಲಿ ಅಜೀರ್ಣ, ಬೇಧಿ ಸಮಸ್ಯೆ ಕಾಡುವುದು. ನೀವು ಪ್ರೀಬಯೋಟಿಕ್ ಆಹಾರ ಸೇವನೆ ಮಾಡುವುದರಿಂದ ಹೊಟ್ಟೆಯ ಆರೋಗ್ಯ ಚೆನ್ನಾಗಿರಲಿದೆ. ಮೊಸರು, ಯೋಗರ್ಟ್, ಮಜ್ಜಿಗೆ ಈ ಬಗೆಯ ಆಹಾರ ಒಳ್ಳೆಯದು. ಹುದುಗು ಬರಿಸಿದ ಆಹಾರ ಒಳ್ಳೆಯದು, ಇವು ಹೊಟ್ಟೆಯ ಆರೋಗ್ಯ ಕಾಪಾಡುತ್ತದೆ.+
5. ಮಳೆಯಲ್ಲಿ ಒದ್ದೆಯಾಗಬೇಡಿ
ಹೊರಗಡೆ ಹೋಗುವಾಗ ಕೊಡೆ ಹಿಡಿದೇ ಹೋಗಿ, ಮಳೆ ನಿಂತಿದೆ ಎಂದು ಕೊಡೆ ಅಥವಾ ರೈನ್ ಕೋಟ್ ತೆಗೆಯದೆ ಹೋಗಿ ಒದ್ದೆಯಾಗಬೇಡಿ, ಮಳೆಯಲ್ಲಿ ಒದ್ದೆಯಾದರೆ ಆರೋಗ್ಯ ಸಮಸ್ಯೆ ಉಂಟಾಗುವುದು.
6.ಕೈಗಳನ್ನು ಆಗಾಗ ತೊಳೆಯಿರಿ
ಮಳೆಗಾಲದಲ್ಲಿ ಶುಚಿತ್ವ ಕಡೆಗೆ ಗಮನಹರಿಸಿ, ಕೈಗಳನ್ನು ಆಗಾಗ ತೊಳೆಯಿರಿ, ಇದರಿಂದ ಸೋಂಕಾಣುಗಳು ಹರಡುವುದನ್ನು ತಡೆಗಟ್ಟಬಹುದು.
7.ಪ್ರತಿದಿನ ವ್ಯಾಯಾಮ ಮಾಡಿ
ಮಳೆಗಾಲ ಎಂದು ವ್ಯಾಯಾಮ ಮಾಡದೆ ಇರಬೇಡಿ, ಮನೆಯೊಳಗಡೆ ವ್ಯಾಯಾಮ ಮಾಡಿ. ವ್ಯಾಯಾಮ ಮಾಡುವುದರಿಂದ ರೋಗ ನಿರೋಧಕ ಶಕ್ತಿ ಚೆನ್ನಾಗಿರಲಿದೆ.
8. ನಿದ್ದೆ ಸರಿಯಾಗಿ ಮಾಡಿ
ನೀವು ನಿದ್ದೆಕೆಡಬೇಡಿ, ದಿನಾ 8 ಗಂಟೆ ನಿದ್ದೆ ಅವಶ್ಯಕ. ಆದ್ದರಿಂದ ಪ್ರತಿದಿನ ಒಂದೇ ಸಮಯಕ್ಕೆ ಬೆಡ್ಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಿ, ಮೊಬೈಲ್ ದೂರವಿಡಿ.
9. ಸೊಳ್ಳೆ ಕಚ್ಚದಂತೆ ಜಾಗ್ರತೆವಹಿಸಿ: ಈಗ ಡೆಂಗ್ಯೂ ಸಮಸ್ಯೆ ಹೆಚ್ಚಾಗಿ ಇರುವುದರಿಂದ ನೀವು ಸೊಳ್ಳೆ ಕಚ್ಚದಂತೆ ಜಾಗ್ರತೆವಹಿಸಿ. ಮನೆ ಸುತ್ತ-ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ. ಮನೆಯೊಳಗಡೆ ಸೊಳ್ಳೆ ಬಾರದಂತೆ ವ್ಯವಸ್ಥೆ ಮಾಡಿ, ಸೊಳ್ಳೆ ಪರದೆಯೊಳಗಡೆ ನಿದ್ರಿಸಿ.
ಈ ರೀತಿಯ ಚಿಕ್ಕ-ಪುಟ್ಟ ಮುನ್ನೆಚ್ಚರಿಕೆ ಕಾಯಿಲೆ ಬೀಳುವುದನ್ನು ತಡೆಗಟ್ಟಲು ತುಂಬಾನೇ ಸಹಕಾರಿಯಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications