Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
Budget 2025: ಕ್ಯಾನ್ಸರ್ ಸೇರಿ 36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ..!
ಸಂಸತ್ನಲ್ಲಿ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆಗಳ ನೀಡಿದ್ದಾರೆ. ವಿಶ್ವದಾದ್ಯಂತ ಅತೀ ಹೆಚ್ಚು ಅಪಾಯ ತಂದೊಡ್ಡುವ ಕ್ಯಾನ್ಸರ್ ಕಾಯಿಲೆ ಸಂಬಂಧ ಬಜೆಟ್ನಲ್ಲಿ ಬಹುದೊಡ್ಡ ಘೋಷಣೆಯಾಗಿದೆ. ಹಾಗೆ ಕ್ಯಾನ್ಸರ್ ಔಷಧಿಗಳ ಹಾಗೂ ಇತರ ಅಪರೂಪದ ಕಾಯಿಲೆಗಳಿಗೆ ನೀಡಲಾಗುತ್ತಿದ್ದ ಔಷಧಿಗಳ ಮೇಲಿನ ಆಮದು ತೆರಿಗೆ ವಿನಾಯಿತಿ ನೀಡಲಾಗಿದೆ.
ಸಂಸತ್ನಲ್ಲಿ ಸತತ 8ನೇ ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್, 36 ಜೀವರಕ್ಷಕ ಔಷಧಿಗಳನ್ನು ಮೂಲ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡುವುದಾಗಿ ಘೋಷಿಸಿದರು. ಅದರೆ ಈ ಔಷಧಿಗಳ ಬೆಲೆಯಲ್ಲಿ ಇಳಿಕೆಯಾಗುವುದನ್ನು ನಾವು ಮಂದಿನ ದಿನಗಳಲ್ಲಿ ನೋಡಬಹುದು. ಇದು ಈ ಕಾಯಿಲೆಗಳಿಗೆ ಒಳಗಾದ ರೋಗಿಗಳಿಗೆ ನೆರವಾಗಲಿದೆ.

ಈ ಔಷಧಿಗಳಲ್ಲಿ ಕ್ಯಾನ್ಸರ್ ಮತ್ತು ಇತರ ಅಪರೂಪದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ ಅಗತ್ಯ ಔಷಧಿಗಳು ಕೂಡ ಸೇರಿವೆ ಎಂದು ಅವರು ಹೇಳಿದರು. ನಿರ್ಣಾಯಕ ಔಷಧಿಗಳ ಹೊರತಾಗಿಯೂ ಹಲವು ರೀತಿಯ ಕೊಡುಗೆಯನ್ನು ಆರೋಗ್ಯ ವಲಯಕ್ಕೆ ಈ ಸಮಯದಲ್ಲಿ ಅವರು ಘೋಷಿಸಿದ್ದಾರೆ.
ರೋಗಿಗಳಿಗೆ ವಿಶೇಷವಾಗಿ ಕ್ಯಾನ್ಸರ್ ಹಾಗೂ ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಪರಿಹಾರ ಒದಗಿಸಲು ಆಮದು ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಹಾಗೆ ಈ ಪಟ್ಟಿಗೆ ಹೊಸದಾಗಿ 6 ಜೀವ ರಕ್ಷಕ ಔಷಧಿಗಳ ಸೇರಿಸಲಾಗಿದ್ದು, ಇವುಗಳ ಮೇಲೆ ಶೇ.5ರಷ್ಟು ಆಮದು ಸುಂಕ ವಿಧಿಸಲು ಪ್ರಸ್ತಾಪಿಸಲಾಗಿದೆ.
ಔಷಧಿ ತಯಾರಿಕಾ ಕಂಪನಿಗಳು ನಡೆಸುವ ರೋಗಿಯ ಸಹಾಯ ಕಾರ್ಯಕ್ರಮಗಳ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಔಷಧಿಗಳನ್ನು ರೋಗಿಗಳಿಗೆ ಉಚಿತವಾಗಿ ಪೂರೈಸಿದರೆ ಈ ಆಮದು ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ.
ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಡೇ ಕೇರ್
2025-26ರ ಬಜೆಟ್ನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕಳೆದ ವರ್ಷ ಜುಲೈನಲ್ಲಿ ಆರೋಗ್ಯ ಸಚಿವಾಲಯಕ್ಕೆ 90958.63 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಯಿತ್ತು. ಕ್ಯಾನ್ಸರ್ ರೋಗಿಗಳಿಗೆ ದೀರ್ಘಕಾಲ ಆಸ್ಪತ್ರೆಯಲ್ಲೇ ಉಳಿಯುವಂತೆ ಮಾಡದೆ ಅನುಕೂಲಕರ ಮತ್ತು ಕೈಗೆಟುಕುವ ರೀತಿಯಲ್ಲಿ ಚಿಕಿತ್ಸೆಯನ್ನು ಒದಗಿಸಲು ಸರ್ಕಾರ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರಗಳ ಸ್ಥಾಪನೆಗೆ ಮುಂದಾಗಿದೆ.
ಇದು ಕ್ಯಾನ್ಸರ್ ಚಿಕಿತ್ಸೆಗಾಗಿ ರೋಗಿಗಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೋಗವುದು ಹಾಗೆ ದುಬಾರಿ ಚಿಕಿತ್ಸಾ ವೆಚ್ಚ ಭರಿಸುವುದು ನಿಲ್ಲಲಿದೆ. ಹಾಗೆ ಎಲ್ಲಾ ವರ್ಗದ ಜನರಿಗೂ ಕ್ಯಾನ್ಸರ್ ಚಿಕಿತ್ಸೆ ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆಯಂತೆ. ಇದಕ್ಕಾಗಿ ದೇಶದಾದ್ಯಂತ 2000ಕೂ ಹೆಚ್ಚು ಕೇಂದ್ರಗಳ ಸ್ಥಾಪನೆಯಾಗಲಿದೆ ಎಂದಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಯಾಗಲಿದೆಯಂತೆ.
ದೇಶಾದ್ಯಂತ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 10 ಸಾವಿರ ಸೀಟುಗಳ ಸೇರಿಸಲು ಕ್ರಮ ಹಾಗೂ ಮುಂದಿನ 5 ವರ್ಷದಲ್ಲಿ 75 ಸಾವಿರ ಹೊಸ ಸೀಟುಗಳ ಸೇರಿಸಲು ಯೋಜನೆ ರೂಪಿಸಲಾಗುವುದು ಎಂದಿದ್ದಾರೆ. ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್ಬ್ಯಾಂಡ್ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಮುಂದಾಗಲಾಗುವುದು ಎಂದರು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











