Latest Updates
-
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು?
ಮಧುಮೇಹಿಗಳು ತುಪ್ಪ ಸೇವಿಸಬಹುದೇ..? ಲಾಭವಿದ್ಯಾ? ಅಥವಾ ಹಾನಿಕಾರಕವೇ?
ಈಗ ನಾವು ಹೊಟ್ಟೆಗೆ ಏನಾದರು ಸವಿಯಬೇಕು ಅಂದರೆ ಯೋಚನೆ ಮಾಡಬೇಕಾದ ಸ್ಥಿತಿಯಲ್ಲಿದ್ದೇವೆ. ಏಕೆಂದರೆ ಸಣ್ಣ ವಯಸ್ಸಿನಲ್ಲೂ ಮಧುಮೇಹ, ಡಯೆಟ್ ಹೀಗೆ ಒಂದಲ್ಲಾ ಒಂದು ರೀತಿಯ ಅಲಿಖಿತ ನಿಯಮ ನಮ್ಮ ಸುತ್ತ ಇದ್ದೇ ಇರುತ್ತದೆ. ಅದರಲ್ಲೂ ಭಾರತದಲ್ಲಿ ಮಧುಮೇಹ ಅತ್ಯಂತ ಹೆಚ್ಚಾಗಿ ಕಾಡುವ ಒಂದು ಸಮಸ್ಯೆಯಾಗಿದೆ. ಮಧುಮೇಹಿಗಳು ಸಾಮಾನ್ಯವಾಗಿ ಕಠಿಣ ನಿಯಮ ಪಾಲಿಸಬೇಕಾಗುತ್ತದೆ.
ಹಾಗೆ ಮಧುಮೇಹಿಗಳು ಏನು ಸವಿಯಬೇಕು ಏನು ಸವಿಯಬಾರದು ಎಂಬುದನ್ನು ತಿಳಿದಿರಬೇಕು. ಮಧುಮೇಹಿಗಳು ತಮ್ಮ ಆಹಾರದ ಮೇಲೆ ಎಚ್ಚರಿಕೆ ಇಡದಿದ್ದರೆ ಖಂಡಿತ ಅನಾರೋಗ್ಯ ಕಾಡುವುದು ಖಚಿತ. ಹಾಗೆ ನಮ್ಮ ಅಡುಗೆ ಮನೆಯಲ್ಲಿ ಯಾವೆಲ್ಲಾ ಆಹಾರಗಳು ಮಾಡಿದಾಗ ನಾವು ಅದರಿಂದ ದೂರ ಇರಬೇಕು ಎಂಬುದನ್ನು ಕೂಡ ತಿಳಿದಿರಬೇಕಾಗುತ್ತದೆ.

ಸಾಮಾನ್ಯವಾಗಿ ಬಹುತೇಕ ಪ್ರಕರಣಗಳಲ್ಲಿ ಈ ರೀತಿ ಜ್ಞಾನದ ಕೊರತೆ ಕೂಡ ಅಪಾಯಕ್ಕೆ ದಾರಿಯಾಗುತ್ತಿದೆ. ಮಧುಮೇಹಿಗಳು ಯಾವ ರೀತಿಯ ಆಹಾರ ಪಾಲನೆ ಮಾಡಬೇಕು ಎಂಬ ವಿಚಾರ ತಿಳಿಯುವುದು ಮುಖ್ಯವಾಗುತ್ತದೆ. ಇನ್ನು ಅಡುಗೆಯಲ್ಲಿ ಸಾಮಾನ್ಯವಾಗಿ ಬಳಸುವಂತಹ ತುಪ್ಪವನ್ನು ಮಧುಮೇಹಿಗಳು ಸೇವಿಸಬಹುದೇ ಅಥವಾ ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ.
ತುಪ್ಪ ಹೆಚ್ಚು ಕೊಬ್ಬು ಹಾಗೂ ಕ್ಯಾಲೋರಿಯಿಂದ ತುಂಬಿರುವುದರಿಂದ ಇದು ಆರೋಗ್ಯದ ಮೇಲೆ ಒಂದಿಷ್ಟು ಪರಿಣಾಮ ಉಂಟುಮಾಡಲಿದೆ. ತುಪ್ಪದಲ್ಲಿ ವಿಟಮಿನ್ ಎ, ಡಿ, ಕೆ ಸೇರಿ ಒಂದಿಷ್ಟು ವಿಟಮಿನ್ ನಾವು ನೋಡಬಹುದು. ಇದರಲ್ಲಿ ಆರೋಗ್ಯಕರ ಕೊಬ್ಬು ಸಹ ಇದ್ದು ನಮ್ಮ ದೇಹಕ್ಕೆ ಇದರ ಅಗತ್ಯತೆ ಕೂಡ ಇದೆ.
ಮಧುಮೇಹದಿಂದ ಬಳಲುತ್ತಿರುವವರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯ್ರಂತ್ರಣದಲ್ಲಿಡುವುದು ಮುಖ್ಯವಾಗುತ್ತದೆ. ಹೀಗಾಗಿ ಸಕ್ಕರೆ ಅಂಶ ಕಡಿಮೆ ಇರುವಂತಹ ಆಹಾರ ಸೇವನೆಗೆ ಹೆಚ್ಚು ಒತ್ತು ನೀಡುತ್ತಾರೆ. ತುಪ್ಪವು ಕಡಿಮೆ ಗ್ಲೈಸೆಮಿಕ್ ಪ್ರಮಾಣ ಹೊಂದಿದೆ - ಇದು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಕನಿಷ್ಠ ಪರಿಣಾಮವನ್ನು ಬೀರುತ್ತದೆ. ತುಪ್ಪ ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇದು ಮೆದುಳು ಮತ್ತು ಕರುಳಿನ ಆರೋಗ್ಯದ ನಿರ್ವಹಣೆಯನ್ನು ಉತ್ತೇಜಿಸುತ್ತದೆ. ಕೇವಲ ಮಧುಮೇಹಿಗಳಿಗೆ ಮಾತ್ರವಲ್ಲದೆ ಆರೋಗ್ಯದ ಕಾಳಜಿ ವಹಿಸುವವರು ಇದನ್ನು ಸೇವಿಸಬಹುದು.
ಮಧುಮೇಹಿಗಳು ತಮ್ಮ ದೈನಂದಿನ ಆಹಾರದಲ್ಲಿ ಒಂದು ಚಮಚ ತುಪ್ಪ ಸೇರಿಸುವುದು ಉತ್ತಮವೇ. ಇದರಲ್ಲಿರುವ ಕೊಬ್ಬಿನಾಮ್ಲಗಳು ಗ್ಲೂಕೋಸ್ ಚಯಾಪಚಯಕ್ಕೆ ಸಹಾಯ ಮಾಡುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುತ್ತದೆ. ಆದರೆ ಒಂದಕ್ಕಿಂತ ಹೆಚ್ಚು ಚಮಚ ತುಪ್ಪ ಸೇವನೆ ಅನಾರೋಗ್ಯ ಹೆಚ್ಚಿಸಬಹುದು. ಹಾಗೆ ನಿಯಮಿತ ವ್ಯಾಯಾಮ, ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಕೂಡ ಮಧುಮೇಹಿಗಳು ಮಾಡಬೇಕಾದ ಕೆಲಸವಾಗಿದೆ.
ತುಪ್ಪ ಸೇವನೆ ಜೀರ್ಣಕ್ರಿಯೆಗೆ ಬಹಳ ಉಪಕಾರಿ. ಹಾಗೆ ರಕ್ತದಲ್ಲಿನ ಸಕ್ಕರೆ ಮಟ್ಟ ಸ್ಥಿರಗೊಳಿಸುವುದು. ಇದು ಅಲ್ಸರ್ ಮತ್ತು ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಹಾಗೆ ತುಪ್ಪವು ಬ್ಯುಟರಿಕ್ ಆಮ್ಲದಿಂದ ಕೂಡಿದೆ. ಇದು ಅನಾರೋಗ್ಯದ ವಿರುದ್ಧ ಹೋರಾಡುವ T ಜೀವಕೋಶಗಳ ದೇಹದ ಉತ್ಪಾದನೆಗೆ ಸಹಾಯ ಮಾಡುತ್ತದೆ. ಇದು ಮಧುಮೇಹಿಗಳಿಗೂ ಉತ್ತಮವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications