Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಕ್ಯಾನ್ಸರ್ ರೋಗಿಗಳಿಗೆ ಬದುಕಿನ ಭರವಸೆ ತುಂಬುವ ವ್ಯಕ್ತಿಗಳಿವರು
ಜೂನ್ ತಿಂಗಳ ಮೊದಲ ಭಾನುವಾರವನ್ನು cancer survivor day ಎಂದು ಆಚರಿಸಲಾಗುವುದು. ಕ್ಯಾನ್ಸರ್ನಿಂದ ಬಳಲುತ್ತಿರುವವರಿಗೆ ಕ್ಯಾನ್ಸರ್ ವಿರುದ್ಧ ಗೆಲ್ಲಬಹುದು ಎಂದು ಆತ್ಮವಿಶ್ವಾಸ ಮೂಡಿಸಲು ಈ ದಿನವನ್ನು ಆಚರಿಸಲಾಗುವುದು. ಕ್ಯಾನ್ಸರ್ ಆಗಿದೆ ಎಂದು ಗೊತ್ತಾದ ತಕ್ಷಣ ತುಂಬಾ ರೋಗಿಗಳ ಮಾನಸಿಕ ಬಲ ಕಡಿಮೆಯಾಗುವುದು. ನಾನು ಸಾಯುತ್ತೇನೆ ಎಂದು ಭಯ ಬೀಳುತ್ತಾರೆ.

ಕ್ಯಾನ್ಸರ್ ಬಂದರೆ ಸಾವು ನಿಶ್ಚಿತ ಎಂದು ಭಯ ಬೀಳಬೇಕಾಗಿಲ್ಲ. ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಿ ಬದುಕಿಗೆ ಮರಳಿರುವ ಅನೇಕ ಸ್ಪೂರ್ತಿ ಕತೆಗಳು ನಮ್ಮ ಮುಂದಿವೆ. ನಾವಿಲ್ಲಿ ಕ್ಯಾನ್ಸರ್ ಗೆದ್ದ ಸೆಲೆಬ್ರಿಟಿಗಳ ಕತೆಯನ್ನು ಇಲ್ಲಿ ಹೇಳಿದ್ದೇವೆ. ಇವರ ಬಗ್ಗೆ ಓದಿದರೆ ನಾವು ಕೂಡ ಕ್ಯಾನ್ಸರ್ ಗೆಲ್ಲಬಹುದು ಎಂಬ ಆತ್ಮವಿಶ್ವಾಸ ಮೂಡಿಸುವಂತಿದೆ ಇವರ ಕತೆಗಳು....
ಮನಿಷಾ ಕೊಯಿರಾಲ
ಮನಿಷಾ ಕೊಯಿರಾಲ ಯಾರಿಗೆ ತಾನೆ ಗೊತ್ತಿಲ್ಲ. ಭಾರತದ ಸಿನಿ ರಂಗದಲ್ಲಿ ಟಾಪ್ ನಟಿಯಾಗಿ ಮೆರೆದವರು. ಇವರಿಗೆ 2012ರಲ್ಲಿ ಗರ್ಭಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಕ್ಯಾನ್ಸರ್ನಿಂದ ಸಂಪೂರ್ಣ ರೋಗಮುಕ್ತವಾಗಿರುವ ಮನಿಷಾ ಕೊಯಿರಾಲ ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ. ಅವರು "Healed: How cancer gave me a new life, ಎಂಬ ಬುಕ್ ಕೂಡ ಬರೆದಿದ್ದು ಅದರಲ್ಲಿ ನಾನು ಕ್ಯಾನ್ಸರ್ನ ಗೆದ್ದು ಹೊಸ ಬದುಕಿಗೆ ಮರಳಲು ಯಾವೆಲ್ಲಾ ಅಂಶಗಳು ಸಹಾಯಾಯಿತು ಎಂಬುವುದಾಗಿ ಕೂಡ ಹೇಳಿದ್ದಾರೆ.
ಸೊನಾಲಿ ಬೇಂದ್ರೆ
2028ರಲ್ಲಿ ಸೊನಾಲಿ ಬೇಂದ್ರೆ ತಮಗೆ 4ನೇ ಹಂತದ ಸ್ತನ ಕ್ಯಾನ್ಸರ್ ಇರುವುದಾಗಿ ಹೇಳಿದ್ದರು. ಆ ಸಮಯದಲ್ಲಿ ತಾನು ಬದುಕನ್ನು ಹೇಗೆ ಸ್ವೀಕರಿಸಿದ್ದೇನೆ ಹಲವು ಸ್ಪೂರ್ತಿದಾಯಕ ಪೋಸ್ಟ್ ಹಾಕುತ್ತಿದ್ದರು. ಈಗ ಅವರು ಕ್ಯಾನ್ಸರ್ ಮುಕ್ತರಾಗಿ ಜೀವನ ನಡೆಸುತ್ತಿದ್ದಾರೆ.
ಸಂಜಯ್ ದತ್
ಸಂಜಯ್ ದತ್ ಅವರಿಗೆ 2020ರಲ್ಲಿ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಇವರು ಅನೇಕ ಕೀಮೋಥೆರಪಿಗಳನ್ನು ಮಾಡಿಸಿದ್ದಾರೆ. ಇದೀಗ ಕ್ಯಾನ್ಸರ್ ಗೆದ್ದು ಸಿನಿ ಜಗತ್ತಿನಲ್ಲಿ ಮತ್ತೆ ಬ್ಯುಸಿಯಾಗಿದ್ದಾರೆ.
ಲೀಸಾ ರೇ
ನಟಿ ಲೀಸಾ ರೇಗೆ ಕೂಡ ಅಪರೂಪದ ಅತಿ ಭಯಾನಕ ರಕ್ತ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಅವರು ಕೀಮೋಥೆರಪಿ ಬಳಿಕ ಸ್ಟೆಮ್ ಸೆಲ್ ಟ್ರಾನ್ಸ್ಪ್ಲ್ಯಾಂಟ್ ಮಾಡಿಸಿಕೊಂಡರು. ಆ ಬಳಿಕ ತಮ್ಮ ಆಹಾರಕ್ರಮದ ಕಡೆಗೆ ತುಂಬಾನೇ ಗಮನ ಹರಿಸುವ ಲೀಸಾ ರೇ ಇದೀಗ ಆರೋಗ್ಯಕರ ಜೀವನ ನಡೆಸುತ್ತಿದ್ದಾರೆ.
ಮಮತಾ ಮೋಹನ್ದಾಸ್
ಮಮತಾಮೋಹನ್ದಾಸ್ ದಕ್ಷಿಣ ಭಾರತದ ನಟಿ. ಇವರು 2010ರಿಂದ ಕ್ಯಾನ್ಸರ್ ವಿರುದ್ಧ ಹೋರಾಡಿ ಅದರ ಬಳಿಕ ಅಟೋಇಮ್ಯೂನೆ ಕಾಯಿಲೆ ವಿರುದ್ಧ ಹೋರಾಡುತ್ತಿದ್ದಾರೆ. ಕ್ಯಾನ್ಸರ್ ಇವರ ಹಠದ ಮುಂದೆ ಶರಣಾಗಿದೆ.
ಯುವರಾಜ್ ಸಿಂಗ್
ಭಾರತದ ಮಾಜಿ ಕ್ರಿಕೆಟ್ಗಾರ ಯುವರಾಜ್ ಸಿಂಗ್ ಅವರಿಗೆ 2011ರಲ್ಲಿ ಅಪರೂಪದ ಶ್ವಾಸಕೋಶದ ಕ್ಯಾನ್ಸರ್ ಉಂಟಾಗಿತ್ತು. ನಂತರ ಅವರು ಹಲವು ಕೀಮೋಥೆರಪಿ ಮಾಡಿಸಿದರು. ಅದಾದ ಬಳಿಕ ಸಂಪೂರ್ಣ ಆರೋಗ್ಯದಿಂದ ಹಲವು ಮ್ಯಾಚ್ ಕೂಡ ಆಡಿದ್ದಾರೆ. ಈಗ ಆರೋಗ್ಯವಂತರಾಗಿದ್ದಾರೆ.
ಇವರೆಲ್ಲಾ ಮನಸ್ಸಿನಲ್ಲಿ ಧೈರ್ಯವಿದ್ದರೆ, ಸೂಕ್ತ ಚಿಕಿತ್ಸೆ ಪಡೆದರೆ ಕ್ಯಾನ್ಸರ್ ಎಂಬ ಮಹಾಮಾರಿಯನ್ನು ಸೋಲಿಸುವುದು ದೊಡ್ಡ ವಿಷಯವಲ್ಲ ಎಂದು ಸ್ಪೂರ್ತಿ ತುಂಬುವ ವ್ಯಕ್ತಿಗಳು. ಕುಟುಂಬದಲ್ಲಿ ಯಾರಿಗಾದರೂ ಕ್ಯಾನ್ಸರ್ ಇದ್ದರೆ ಅವರಿಗೆ ಮಾನಸಿಕ ಧೈರ್ಯ ತುಂಬುವ ಪ್ರಯತ್ನ ಮಾಡಿ, ಅವರಿಗೂ ಸಾವನ್ನು ಸೋಲಿಸುವ ಆತ್ಮವಿಶ್ವಾಸ ಮೂಡಿದರೆ ಕ್ಯಾನ್ಸರ್ ಎಂಬ ಮಹಾಮಾರಿ ಸೋಲಿಸಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











