Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಮಳೆ, ಚಂಡಾಮಾರುತ: ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತೆ ಈ ಪಾನೀಯ
ದೇಶದ ಬಹುತೇಕ ಕಡೆಗಳಲ್ಲಿ ಚಂಡಾಮಾರುತ ಅಪ್ಪಳಿಸುತ್ತಿದೆ, ಚಂಡಾಮಾರುತದಿಂದಾಗ ಹಲವು ಕಡೆ ಮಳೆ ತುಂಬಾನೇ ಸುರಿಯುತ್ತಿದೆ. ಮಾನ್ಸೂನ್ ಶುರುವಾಗಿದೆ, ಅದರ ಜೊತೆ ಚಂಡಾಮಾರುತದ ಅಬ್ಬರ ಇದರಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಕಾಯಿಲೆ ಬೀಳುವುದನ್ನು ತಡೆಗಟ್ಟಲು ನೀವು ರೋಗ ನಿರೋಧಕ ಪಾನೀಯ ಸೇವಿಸುವುದು ಒಳ್ಳೆಯದು:

1. ಶುಂಠಿ, ನಿಂಬೆಹಣ್ಣು, ಜೇನು
ಈ ಮೂರು ವಸ್ತುಗಳ ಕಾಂಬಿನೇಷನ್ನ ಪಾನೀಯ ಮಳೆಗಾಲಕ್ಕೆ ತುಂಬಾನೇ ಒಳ್ಳೆಯದು. ಬಿಸಿ ನೀರಿಗೆ ಸ್ವಲ್ಪ ಒಣಶುಂಠಿ ಪುಡಿ, ಜೇನು ಹಾಕಿ ಅದಕ್ಕೆ ಸ್ವಲ್ಪ ನಿಂಬೆರಸ ಸೇರಿಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಸಾಮಾನ್ಯ ಶೀತ-ಕೆಮ್ಮು ಈ ಬಗೆಯ ಸಮಸ್ಯೆ ದೂರಾಗುವುದು. ಶುಂಠಿಯಲ್ಲಿ antioxidants ಹಾಗೂ ಬ್ಯಾಕ್ಟಿರಿಯಾಗಳನ್ನು ತಡೆಗಟ್ಟುವ ಸಾಮರ್ಥ್ಯ ಇದೆ. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದ್ದು ಜೇನು ಗಂಟಲು ಕೆರೆತ ಕಡಿಮೆ ಮಾಡಿ ಕೆಮ್ಮು ತಡೆಗಟ್ಟುತ್ತದೆ. ಈ ಪಾನೀಯ ಕುಡಿಯುವುದಾದರೆ ದಿನದಲ್ಲಿ ಒಂದು ಲೋಟ ಕುಡಿಯಿರಿ. ಇದಕ್ಕೆ ಬೇಕಿದ್ದರೆ ಸ್ವಲ್ಪ ತುಳಸಿ ಸೇರಿಸಬಹುದು.
ಕೆಮ್ಮು-ಶೀತವಿದ್ದರೆ ಈ ಕಷಾಯ ಮಾಡಿ ಕುಡಿಯಿರಿ
* ಕೊತ್ತಂಬರಿ, ಜೀರಿಗೆ, ಸೋಂಪು ಇವುಗಳನ್ನು 4:2:1 ಪ್ರಮಾಣದಲ್ಲಿ ತೆಗೆದುಕೊಳ್ಳಿ, ಅದಕ್ಕೆ ಒಂದು ಚಮಚ ಕಾಳು ಮೆಣಸು ಹಾಕಿ.
* ಈಗ ಇವೆಲ್ಲವನ್ನೂ ರುಬ್ಬಿ ಪೌಡರ್ ರೀತಿ ಮಾಡಿ.
* ಈಗ ನೀರನ್ನು ಕುದಿಸಿ ಅದಕ್ಕೆ ಒಂದು ಚಮಚ ಕಷಾಯ ಪುಡಿ ಬೆರೆಸಿ ಕುಡಿಯಿರಿ. ಇದನ್ನು ಎರಡು ಹೊತ್ತು ತೆಗೆದುಕೊಳ್ಳುವುದರಿಂದ ತುಂಬಾನೇ ರಿಲೀಫ್ ಸಿಗುವುದು.
ಚಕ್ಕೆ ಮತ್ತು ನಿಂಬೆರಸ
ಒಂದು ಲೋಟ ನೀರಿಗೆ ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ ತುಂಡು ಹಾಕಿ ಕಾಯಿಸಿ. ನಂತರ ನೀರನ್ನು ಒಂದು ರಾತ್ರಿ ಇಟ್ಟು ಬೆಳಗ್ಗೆ ಬಿಸಿ ಮಾಡಿ ಅದಕ್ಕೆ ಸ್ವಲ್ಪ ನಿಂಬೆರಸ ಹಾಕಿ ಕುಡಿಯಿರಿ. ಹೀಗೆ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು, ಆಗಾಗ ಕಾಯಿಲೆ ಬೀಳುವುದು ತಡೆಗಟ್ಟಬಹುದು.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಟಾನಿಕ್
ಒಂದು ಲೋಟಕ್ಕೆ ಸ್ವಲ್ಪ ಆಪಲ್ ಸಿಡರ್ ವಿನೆಗರ್ ಸೇರಿಸಿ, ನಂತರ ಅದಕ್ಕೆ ಸ್ವಲ್ಪ ಚಕ್ಕೆ ಪುಡಿ ಹಾಕಿ, ಬಿಸಿ ನೀರು ಹಾಕಿ ಮಿಕ್ಸ್ ಮಾಡಿ. ಇದನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications