Latest Updates
-
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್!
ಮಳೆ, ಚಂಡಾಮಾರುತ: ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತೆ ಈ ಪಾನೀಯ
ದೇಶದ ಬಹುತೇಕ ಕಡೆಗಳಲ್ಲಿ ಚಂಡಾಮಾರುತ ಅಪ್ಪಳಿಸುತ್ತಿದೆ, ಚಂಡಾಮಾರುತದಿಂದಾಗ ಹಲವು ಕಡೆ ಮಳೆ ತುಂಬಾನೇ ಸುರಿಯುತ್ತಿದೆ. ಮಾನ್ಸೂನ್ ಶುರುವಾಗಿದೆ, ಅದರ ಜೊತೆ ಚಂಡಾಮಾರುತದ ಅಬ್ಬರ ಇದರಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಕಾಯಿಲೆ ಬೀಳುವುದನ್ನು ತಡೆಗಟ್ಟಲು ನೀವು ರೋಗ ನಿರೋಧಕ ಪಾನೀಯ ಸೇವಿಸುವುದು ಒಳ್ಳೆಯದು:

1. ಶುಂಠಿ, ನಿಂಬೆಹಣ್ಣು, ಜೇನು
ಈ ಮೂರು ವಸ್ತುಗಳ ಕಾಂಬಿನೇಷನ್ನ ಪಾನೀಯ ಮಳೆಗಾಲಕ್ಕೆ ತುಂಬಾನೇ ಒಳ್ಳೆಯದು. ಬಿಸಿ ನೀರಿಗೆ ಸ್ವಲ್ಪ ಒಣಶುಂಠಿ ಪುಡಿ, ಜೇನು ಹಾಕಿ ಅದಕ್ಕೆ ಸ್ವಲ್ಪ ನಿಂಬೆರಸ ಸೇರಿಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಸಾಮಾನ್ಯ ಶೀತ-ಕೆಮ್ಮು ಈ ಬಗೆಯ ಸಮಸ್ಯೆ ದೂರಾಗುವುದು. ಶುಂಠಿಯಲ್ಲಿ antioxidants ಹಾಗೂ ಬ್ಯಾಕ್ಟಿರಿಯಾಗಳನ್ನು ತಡೆಗಟ್ಟುವ ಸಾಮರ್ಥ್ಯ ಇದೆ. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದ್ದು ಜೇನು ಗಂಟಲು ಕೆರೆತ ಕಡಿಮೆ ಮಾಡಿ ಕೆಮ್ಮು ತಡೆಗಟ್ಟುತ್ತದೆ. ಈ ಪಾನೀಯ ಕುಡಿಯುವುದಾದರೆ ದಿನದಲ್ಲಿ ಒಂದು ಲೋಟ ಕುಡಿಯಿರಿ. ಇದಕ್ಕೆ ಬೇಕಿದ್ದರೆ ಸ್ವಲ್ಪ ತುಳಸಿ ಸೇರಿಸಬಹುದು.
ಕೆಮ್ಮು-ಶೀತವಿದ್ದರೆ ಈ ಕಷಾಯ ಮಾಡಿ ಕುಡಿಯಿರಿ
* ಕೊತ್ತಂಬರಿ, ಜೀರಿಗೆ, ಸೋಂಪು ಇವುಗಳನ್ನು 4:2:1 ಪ್ರಮಾಣದಲ್ಲಿ ತೆಗೆದುಕೊಳ್ಳಿ, ಅದಕ್ಕೆ ಒಂದು ಚಮಚ ಕಾಳು ಮೆಣಸು ಹಾಕಿ.
* ಈಗ ಇವೆಲ್ಲವನ್ನೂ ರುಬ್ಬಿ ಪೌಡರ್ ರೀತಿ ಮಾಡಿ.
* ಈಗ ನೀರನ್ನು ಕುದಿಸಿ ಅದಕ್ಕೆ ಒಂದು ಚಮಚ ಕಷಾಯ ಪುಡಿ ಬೆರೆಸಿ ಕುಡಿಯಿರಿ. ಇದನ್ನು ಎರಡು ಹೊತ್ತು ತೆಗೆದುಕೊಳ್ಳುವುದರಿಂದ ತುಂಬಾನೇ ರಿಲೀಫ್ ಸಿಗುವುದು.
ಚಕ್ಕೆ ಮತ್ತು ನಿಂಬೆರಸ
ಒಂದು ಲೋಟ ನೀರಿಗೆ ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ ತುಂಡು ಹಾಕಿ ಕಾಯಿಸಿ. ನಂತರ ನೀರನ್ನು ಒಂದು ರಾತ್ರಿ ಇಟ್ಟು ಬೆಳಗ್ಗೆ ಬಿಸಿ ಮಾಡಿ ಅದಕ್ಕೆ ಸ್ವಲ್ಪ ನಿಂಬೆರಸ ಹಾಕಿ ಕುಡಿಯಿರಿ. ಹೀಗೆ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು, ಆಗಾಗ ಕಾಯಿಲೆ ಬೀಳುವುದು ತಡೆಗಟ್ಟಬಹುದು.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಟಾನಿಕ್
ಒಂದು ಲೋಟಕ್ಕೆ ಸ್ವಲ್ಪ ಆಪಲ್ ಸಿಡರ್ ವಿನೆಗರ್ ಸೇರಿಸಿ, ನಂತರ ಅದಕ್ಕೆ ಸ್ವಲ್ಪ ಚಕ್ಕೆ ಪುಡಿ ಹಾಕಿ, ಬಿಸಿ ನೀರು ಹಾಕಿ ಮಿಕ್ಸ್ ಮಾಡಿ. ಇದನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications