Latest Updates
-
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ!
ಮಳೆ, ಚಂಡಾಮಾರುತ: ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತೆ ಈ ಪಾನೀಯ
ದೇಶದ ಬಹುತೇಕ ಕಡೆಗಳಲ್ಲಿ ಚಂಡಾಮಾರುತ ಅಪ್ಪಳಿಸುತ್ತಿದೆ, ಚಂಡಾಮಾರುತದಿಂದಾಗ ಹಲವು ಕಡೆ ಮಳೆ ತುಂಬಾನೇ ಸುರಿಯುತ್ತಿದೆ. ಮಾನ್ಸೂನ್ ಶುರುವಾಗಿದೆ, ಅದರ ಜೊತೆ ಚಂಡಾಮಾರುತದ ಅಬ್ಬರ ಇದರಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಕಾಯಿಲೆ ಬೀಳುವುದನ್ನು ತಡೆಗಟ್ಟಲು ನೀವು ರೋಗ ನಿರೋಧಕ ಪಾನೀಯ ಸೇವಿಸುವುದು ಒಳ್ಳೆಯದು:

1. ಶುಂಠಿ, ನಿಂಬೆಹಣ್ಣು, ಜೇನು
ಈ ಮೂರು ವಸ್ತುಗಳ ಕಾಂಬಿನೇಷನ್ನ ಪಾನೀಯ ಮಳೆಗಾಲಕ್ಕೆ ತುಂಬಾನೇ ಒಳ್ಳೆಯದು. ಬಿಸಿ ನೀರಿಗೆ ಸ್ವಲ್ಪ ಒಣಶುಂಠಿ ಪುಡಿ, ಜೇನು ಹಾಕಿ ಅದಕ್ಕೆ ಸ್ವಲ್ಪ ನಿಂಬೆರಸ ಸೇರಿಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಸಾಮಾನ್ಯ ಶೀತ-ಕೆಮ್ಮು ಈ ಬಗೆಯ ಸಮಸ್ಯೆ ದೂರಾಗುವುದು. ಶುಂಠಿಯಲ್ಲಿ antioxidants ಹಾಗೂ ಬ್ಯಾಕ್ಟಿರಿಯಾಗಳನ್ನು ತಡೆಗಟ್ಟುವ ಸಾಮರ್ಥ್ಯ ಇದೆ. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದ್ದು ಜೇನು ಗಂಟಲು ಕೆರೆತ ಕಡಿಮೆ ಮಾಡಿ ಕೆಮ್ಮು ತಡೆಗಟ್ಟುತ್ತದೆ. ಈ ಪಾನೀಯ ಕುಡಿಯುವುದಾದರೆ ದಿನದಲ್ಲಿ ಒಂದು ಲೋಟ ಕುಡಿಯಿರಿ. ಇದಕ್ಕೆ ಬೇಕಿದ್ದರೆ ಸ್ವಲ್ಪ ತುಳಸಿ ಸೇರಿಸಬಹುದು.
ಕೆಮ್ಮು-ಶೀತವಿದ್ದರೆ ಈ ಕಷಾಯ ಮಾಡಿ ಕುಡಿಯಿರಿ
* ಕೊತ್ತಂಬರಿ, ಜೀರಿಗೆ, ಸೋಂಪು ಇವುಗಳನ್ನು 4:2:1 ಪ್ರಮಾಣದಲ್ಲಿ ತೆಗೆದುಕೊಳ್ಳಿ, ಅದಕ್ಕೆ ಒಂದು ಚಮಚ ಕಾಳು ಮೆಣಸು ಹಾಕಿ.
* ಈಗ ಇವೆಲ್ಲವನ್ನೂ ರುಬ್ಬಿ ಪೌಡರ್ ರೀತಿ ಮಾಡಿ.
* ಈಗ ನೀರನ್ನು ಕುದಿಸಿ ಅದಕ್ಕೆ ಒಂದು ಚಮಚ ಕಷಾಯ ಪುಡಿ ಬೆರೆಸಿ ಕುಡಿಯಿರಿ. ಇದನ್ನು ಎರಡು ಹೊತ್ತು ತೆಗೆದುಕೊಳ್ಳುವುದರಿಂದ ತುಂಬಾನೇ ರಿಲೀಫ್ ಸಿಗುವುದು.
ಚಕ್ಕೆ ಮತ್ತು ನಿಂಬೆರಸ
ಒಂದು ಲೋಟ ನೀರಿಗೆ ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ ತುಂಡು ಹಾಕಿ ಕಾಯಿಸಿ. ನಂತರ ನೀರನ್ನು ಒಂದು ರಾತ್ರಿ ಇಟ್ಟು ಬೆಳಗ್ಗೆ ಬಿಸಿ ಮಾಡಿ ಅದಕ್ಕೆ ಸ್ವಲ್ಪ ನಿಂಬೆರಸ ಹಾಕಿ ಕುಡಿಯಿರಿ. ಹೀಗೆ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು, ಆಗಾಗ ಕಾಯಿಲೆ ಬೀಳುವುದು ತಡೆಗಟ್ಟಬಹುದು.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಟಾನಿಕ್
ಒಂದು ಲೋಟಕ್ಕೆ ಸ್ವಲ್ಪ ಆಪಲ್ ಸಿಡರ್ ವಿನೆಗರ್ ಸೇರಿಸಿ, ನಂತರ ಅದಕ್ಕೆ ಸ್ವಲ್ಪ ಚಕ್ಕೆ ಪುಡಿ ಹಾಕಿ, ಬಿಸಿ ನೀರು ಹಾಕಿ ಮಿಕ್ಸ್ ಮಾಡಿ. ಇದನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
