Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಳೆ, ಚಂಡಾಮಾರುತ: ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತೆ ಈ ಪಾನೀಯ
ದೇಶದ ಬಹುತೇಕ ಕಡೆಗಳಲ್ಲಿ ಚಂಡಾಮಾರುತ ಅಪ್ಪಳಿಸುತ್ತಿದೆ, ಚಂಡಾಮಾರುತದಿಂದಾಗ ಹಲವು ಕಡೆ ಮಳೆ ತುಂಬಾನೇ ಸುರಿಯುತ್ತಿದೆ. ಮಾನ್ಸೂನ್ ಶುರುವಾಗಿದೆ, ಅದರ ಜೊತೆ ಚಂಡಾಮಾರುತದ ಅಬ್ಬರ ಇದರಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಕಾಯಿಲೆ ಬೀಳುವುದನ್ನು ತಡೆಗಟ್ಟಲು ನೀವು ರೋಗ ನಿರೋಧಕ ಪಾನೀಯ ಸೇವಿಸುವುದು ಒಳ್ಳೆಯದು:

1. ಶುಂಠಿ, ನಿಂಬೆಹಣ್ಣು, ಜೇನು
ಈ ಮೂರು ವಸ್ತುಗಳ ಕಾಂಬಿನೇಷನ್ನ ಪಾನೀಯ ಮಳೆಗಾಲಕ್ಕೆ ತುಂಬಾನೇ ಒಳ್ಳೆಯದು. ಬಿಸಿ ನೀರಿಗೆ ಸ್ವಲ್ಪ ಒಣಶುಂಠಿ ಪುಡಿ, ಜೇನು ಹಾಕಿ ಅದಕ್ಕೆ ಸ್ವಲ್ಪ ನಿಂಬೆರಸ ಸೇರಿಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಸಾಮಾನ್ಯ ಶೀತ-ಕೆಮ್ಮು ಈ ಬಗೆಯ ಸಮಸ್ಯೆ ದೂರಾಗುವುದು. ಶುಂಠಿಯಲ್ಲಿ antioxidants ಹಾಗೂ ಬ್ಯಾಕ್ಟಿರಿಯಾಗಳನ್ನು ತಡೆಗಟ್ಟುವ ಸಾಮರ್ಥ್ಯ ಇದೆ. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದ್ದು ಜೇನು ಗಂಟಲು ಕೆರೆತ ಕಡಿಮೆ ಮಾಡಿ ಕೆಮ್ಮು ತಡೆಗಟ್ಟುತ್ತದೆ. ಈ ಪಾನೀಯ ಕುಡಿಯುವುದಾದರೆ ದಿನದಲ್ಲಿ ಒಂದು ಲೋಟ ಕುಡಿಯಿರಿ. ಇದಕ್ಕೆ ಬೇಕಿದ್ದರೆ ಸ್ವಲ್ಪ ತುಳಸಿ ಸೇರಿಸಬಹುದು.
ಕೆಮ್ಮು-ಶೀತವಿದ್ದರೆ ಈ ಕಷಾಯ ಮಾಡಿ ಕುಡಿಯಿರಿ
* ಕೊತ್ತಂಬರಿ, ಜೀರಿಗೆ, ಸೋಂಪು ಇವುಗಳನ್ನು 4:2:1 ಪ್ರಮಾಣದಲ್ಲಿ ತೆಗೆದುಕೊಳ್ಳಿ, ಅದಕ್ಕೆ ಒಂದು ಚಮಚ ಕಾಳು ಮೆಣಸು ಹಾಕಿ.
* ಈಗ ಇವೆಲ್ಲವನ್ನೂ ರುಬ್ಬಿ ಪೌಡರ್ ರೀತಿ ಮಾಡಿ.
* ಈಗ ನೀರನ್ನು ಕುದಿಸಿ ಅದಕ್ಕೆ ಒಂದು ಚಮಚ ಕಷಾಯ ಪುಡಿ ಬೆರೆಸಿ ಕುಡಿಯಿರಿ. ಇದನ್ನು ಎರಡು ಹೊತ್ತು ತೆಗೆದುಕೊಳ್ಳುವುದರಿಂದ ತುಂಬಾನೇ ರಿಲೀಫ್ ಸಿಗುವುದು.
ಚಕ್ಕೆ ಮತ್ತು ನಿಂಬೆರಸ
ಒಂದು ಲೋಟ ನೀರಿಗೆ ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ ತುಂಡು ಹಾಕಿ ಕಾಯಿಸಿ. ನಂತರ ನೀರನ್ನು ಒಂದು ರಾತ್ರಿ ಇಟ್ಟು ಬೆಳಗ್ಗೆ ಬಿಸಿ ಮಾಡಿ ಅದಕ್ಕೆ ಸ್ವಲ್ಪ ನಿಂಬೆರಸ ಹಾಕಿ ಕುಡಿಯಿರಿ. ಹೀಗೆ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು, ಆಗಾಗ ಕಾಯಿಲೆ ಬೀಳುವುದು ತಡೆಗಟ್ಟಬಹುದು.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಟಾನಿಕ್
ಒಂದು ಲೋಟಕ್ಕೆ ಸ್ವಲ್ಪ ಆಪಲ್ ಸಿಡರ್ ವಿನೆಗರ್ ಸೇರಿಸಿ, ನಂತರ ಅದಕ್ಕೆ ಸ್ವಲ್ಪ ಚಕ್ಕೆ ಪುಡಿ ಹಾಕಿ, ಬಿಸಿ ನೀರು ಹಾಕಿ ಮಿಕ್ಸ್ ಮಾಡಿ. ಇದನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications