Latest Updates
-
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್!
ಮಳೆ, ಚಂಡಾಮಾರುತ: ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತೆ ಈ ಪಾನೀಯ
ದೇಶದ ಬಹುತೇಕ ಕಡೆಗಳಲ್ಲಿ ಚಂಡಾಮಾರುತ ಅಪ್ಪಳಿಸುತ್ತಿದೆ, ಚಂಡಾಮಾರುತದಿಂದಾಗ ಹಲವು ಕಡೆ ಮಳೆ ತುಂಬಾನೇ ಸುರಿಯುತ್ತಿದೆ. ಮಾನ್ಸೂನ್ ಶುರುವಾಗಿದೆ, ಅದರ ಜೊತೆ ಚಂಡಾಮಾರುತದ ಅಬ್ಬರ ಇದರಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಕಾಯಿಲೆ ಬೀಳುವುದನ್ನು ತಡೆಗಟ್ಟಲು ನೀವು ರೋಗ ನಿರೋಧಕ ಪಾನೀಯ ಸೇವಿಸುವುದು ಒಳ್ಳೆಯದು:

1. ಶುಂಠಿ, ನಿಂಬೆಹಣ್ಣು, ಜೇನು
ಈ ಮೂರು ವಸ್ತುಗಳ ಕಾಂಬಿನೇಷನ್ನ ಪಾನೀಯ ಮಳೆಗಾಲಕ್ಕೆ ತುಂಬಾನೇ ಒಳ್ಳೆಯದು. ಬಿಸಿ ನೀರಿಗೆ ಸ್ವಲ್ಪ ಒಣಶುಂಠಿ ಪುಡಿ, ಜೇನು ಹಾಕಿ ಅದಕ್ಕೆ ಸ್ವಲ್ಪ ನಿಂಬೆರಸ ಸೇರಿಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಸಾಮಾನ್ಯ ಶೀತ-ಕೆಮ್ಮು ಈ ಬಗೆಯ ಸಮಸ್ಯೆ ದೂರಾಗುವುದು. ಶುಂಠಿಯಲ್ಲಿ antioxidants ಹಾಗೂ ಬ್ಯಾಕ್ಟಿರಿಯಾಗಳನ್ನು ತಡೆಗಟ್ಟುವ ಸಾಮರ್ಥ್ಯ ಇದೆ. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದ್ದು ಜೇನು ಗಂಟಲು ಕೆರೆತ ಕಡಿಮೆ ಮಾಡಿ ಕೆಮ್ಮು ತಡೆಗಟ್ಟುತ್ತದೆ. ಈ ಪಾನೀಯ ಕುಡಿಯುವುದಾದರೆ ದಿನದಲ್ಲಿ ಒಂದು ಲೋಟ ಕುಡಿಯಿರಿ. ಇದಕ್ಕೆ ಬೇಕಿದ್ದರೆ ಸ್ವಲ್ಪ ತುಳಸಿ ಸೇರಿಸಬಹುದು.
ಕೆಮ್ಮು-ಶೀತವಿದ್ದರೆ ಈ ಕಷಾಯ ಮಾಡಿ ಕುಡಿಯಿರಿ
* ಕೊತ್ತಂಬರಿ, ಜೀರಿಗೆ, ಸೋಂಪು ಇವುಗಳನ್ನು 4:2:1 ಪ್ರಮಾಣದಲ್ಲಿ ತೆಗೆದುಕೊಳ್ಳಿ, ಅದಕ್ಕೆ ಒಂದು ಚಮಚ ಕಾಳು ಮೆಣಸು ಹಾಕಿ.
* ಈಗ ಇವೆಲ್ಲವನ್ನೂ ರುಬ್ಬಿ ಪೌಡರ್ ರೀತಿ ಮಾಡಿ.
* ಈಗ ನೀರನ್ನು ಕುದಿಸಿ ಅದಕ್ಕೆ ಒಂದು ಚಮಚ ಕಷಾಯ ಪುಡಿ ಬೆರೆಸಿ ಕುಡಿಯಿರಿ. ಇದನ್ನು ಎರಡು ಹೊತ್ತು ತೆಗೆದುಕೊಳ್ಳುವುದರಿಂದ ತುಂಬಾನೇ ರಿಲೀಫ್ ಸಿಗುವುದು.
ಚಕ್ಕೆ ಮತ್ತು ನಿಂಬೆರಸ
ಒಂದು ಲೋಟ ನೀರಿಗೆ ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ ತುಂಡು ಹಾಕಿ ಕಾಯಿಸಿ. ನಂತರ ನೀರನ್ನು ಒಂದು ರಾತ್ರಿ ಇಟ್ಟು ಬೆಳಗ್ಗೆ ಬಿಸಿ ಮಾಡಿ ಅದಕ್ಕೆ ಸ್ವಲ್ಪ ನಿಂಬೆರಸ ಹಾಕಿ ಕುಡಿಯಿರಿ. ಹೀಗೆ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು, ಆಗಾಗ ಕಾಯಿಲೆ ಬೀಳುವುದು ತಡೆಗಟ್ಟಬಹುದು.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಟಾನಿಕ್
ಒಂದು ಲೋಟಕ್ಕೆ ಸ್ವಲ್ಪ ಆಪಲ್ ಸಿಡರ್ ವಿನೆಗರ್ ಸೇರಿಸಿ, ನಂತರ ಅದಕ್ಕೆ ಸ್ವಲ್ಪ ಚಕ್ಕೆ ಪುಡಿ ಹಾಕಿ, ಬಿಸಿ ನೀರು ಹಾಕಿ ಮಿಕ್ಸ್ ಮಾಡಿ. ಇದನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications