Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಮಳೆ, ಚಂಡಾಮಾರುತ: ಕಾಯಿಲೆ ಬೀಳುವುದನ್ನು ತಡೆಗಟ್ಟುತ್ತೆ ಈ ಪಾನೀಯ
ದೇಶದ ಬಹುತೇಕ ಕಡೆಗಳಲ್ಲಿ ಚಂಡಾಮಾರುತ ಅಪ್ಪಳಿಸುತ್ತಿದೆ, ಚಂಡಾಮಾರುತದಿಂದಾಗ ಹಲವು ಕಡೆ ಮಳೆ ತುಂಬಾನೇ ಸುರಿಯುತ್ತಿದೆ. ಮಾನ್ಸೂನ್ ಶುರುವಾಗಿದೆ, ಅದರ ಜೊತೆ ಚಂಡಾಮಾರುತದ ಅಬ್ಬರ ಇದರಿಂದಾಗಿ ಜನರಲ್ಲಿ ಆರೋಗ್ಯ ಸಮಸ್ಯೆಯೂ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಕಾಯಿಲೆ ಬೀಳುವುದನ್ನು ತಡೆಗಟ್ಟಲು ನೀವು ರೋಗ ನಿರೋಧಕ ಪಾನೀಯ ಸೇವಿಸುವುದು ಒಳ್ಳೆಯದು:

1. ಶುಂಠಿ, ನಿಂಬೆಹಣ್ಣು, ಜೇನು
ಈ ಮೂರು ವಸ್ತುಗಳ ಕಾಂಬಿನೇಷನ್ನ ಪಾನೀಯ ಮಳೆಗಾಲಕ್ಕೆ ತುಂಬಾನೇ ಒಳ್ಳೆಯದು. ಬಿಸಿ ನೀರಿಗೆ ಸ್ವಲ್ಪ ಒಣಶುಂಠಿ ಪುಡಿ, ಜೇನು ಹಾಕಿ ಅದಕ್ಕೆ ಸ್ವಲ್ಪ ನಿಂಬೆರಸ ಸೇರಿಸಿ ಕುಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು. ಅಲ್ಲದೆ ಸಾಮಾನ್ಯ ಶೀತ-ಕೆಮ್ಮು ಈ ಬಗೆಯ ಸಮಸ್ಯೆ ದೂರಾಗುವುದು. ಶುಂಠಿಯಲ್ಲಿ antioxidants ಹಾಗೂ ಬ್ಯಾಕ್ಟಿರಿಯಾಗಳನ್ನು ತಡೆಗಟ್ಟುವ ಸಾಮರ್ಥ್ಯ ಇದೆ. ನಿಂಬೆಹಣ್ಣಿನಲ್ಲಿ ವಿಟಮಿನ್ ಸಿ ಇದ್ದು ಜೇನು ಗಂಟಲು ಕೆರೆತ ಕಡಿಮೆ ಮಾಡಿ ಕೆಮ್ಮು ತಡೆಗಟ್ಟುತ್ತದೆ. ಈ ಪಾನೀಯ ಕುಡಿಯುವುದಾದರೆ ದಿನದಲ್ಲಿ ಒಂದು ಲೋಟ ಕುಡಿಯಿರಿ. ಇದಕ್ಕೆ ಬೇಕಿದ್ದರೆ ಸ್ವಲ್ಪ ತುಳಸಿ ಸೇರಿಸಬಹುದು.
ಕೆಮ್ಮು-ಶೀತವಿದ್ದರೆ ಈ ಕಷಾಯ ಮಾಡಿ ಕುಡಿಯಿರಿ
* ಕೊತ್ತಂಬರಿ, ಜೀರಿಗೆ, ಸೋಂಪು ಇವುಗಳನ್ನು 4:2:1 ಪ್ರಮಾಣದಲ್ಲಿ ತೆಗೆದುಕೊಳ್ಳಿ, ಅದಕ್ಕೆ ಒಂದು ಚಮಚ ಕಾಳು ಮೆಣಸು ಹಾಕಿ.
* ಈಗ ಇವೆಲ್ಲವನ್ನೂ ರುಬ್ಬಿ ಪೌಡರ್ ರೀತಿ ಮಾಡಿ.
* ಈಗ ನೀರನ್ನು ಕುದಿಸಿ ಅದಕ್ಕೆ ಒಂದು ಚಮಚ ಕಷಾಯ ಪುಡಿ ಬೆರೆಸಿ ಕುಡಿಯಿರಿ. ಇದನ್ನು ಎರಡು ಹೊತ್ತು ತೆಗೆದುಕೊಳ್ಳುವುದರಿಂದ ತುಂಬಾನೇ ರಿಲೀಫ್ ಸಿಗುವುದು.
ಚಕ್ಕೆ ಮತ್ತು ನಿಂಬೆರಸ
ಒಂದು ಲೋಟ ನೀರಿಗೆ ಒಂದು ಇಂಚಿನಷ್ಟು ದೊಡ್ಡದಿರುವ ಚಕ್ಕೆ ತುಂಡು ಹಾಕಿ ಕಾಯಿಸಿ. ನಂತರ ನೀರನ್ನು ಒಂದು ರಾತ್ರಿ ಇಟ್ಟು ಬೆಳಗ್ಗೆ ಬಿಸಿ ಮಾಡಿ ಅದಕ್ಕೆ ಸ್ವಲ್ಪ ನಿಂಬೆರಸ ಹಾಕಿ ಕುಡಿಯಿರಿ. ಹೀಗೆ ಮಾಡಿದರೆ ರೋಗ ನಿರೋಧಕ ಶಕ್ತಿ ಹೆಚ್ಚುವುದು, ಆಗಾಗ ಕಾಯಿಲೆ ಬೀಳುವುದು ತಡೆಗಟ್ಟಬಹುದು.
ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಟಾನಿಕ್
ಒಂದು ಲೋಟಕ್ಕೆ ಸ್ವಲ್ಪ ಆಪಲ್ ಸಿಡರ್ ವಿನೆಗರ್ ಸೇರಿಸಿ, ನಂತರ ಅದಕ್ಕೆ ಸ್ವಲ್ಪ ಚಕ್ಕೆ ಪುಡಿ ಹಾಕಿ, ಬಿಸಿ ನೀರು ಹಾಕಿ ಮಿಕ್ಸ್ ಮಾಡಿ. ಇದನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications