Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಡಯಾಬಿಟಿಸ್ ನ 10 ಪ್ರಮುಖ ಲಕ್ಷಣಗಳು

ಡಯಾಬಿಟಿಸ್ ಮೊದಲ ಹಂತದಲ್ಲಿ ಕಂಡು ಹಿಡಿದರೆ ಸುಲಭದಲ್ಲಿ ನಿಯಂತ್ರಣದಲ್ಲಿಡಬಹುದು. ಆದರೆ ಸಾಕಷ್ಟು ಜನರು ಅದರ ಮೇಲೆ ಅಷ್ಟು ಗಮನ ಹರಿಸದೆ ನಂತರ ಕಷ್ಟಪಡುತ್ತಾರೆ. ಆದರ ಬದಲು ಮೊದಲ ಹಂತದಲ್ಲಿಯೆ ಡಯಾಬಿಟಿಸ್ ಕಾಣಿಸಿ ಕೊಂಡಾಗ ಪತ್ತೆ ಹಚ್ಚುವುದು ಹೇಗೆ ಎಂಬ ವಿವರಗಳನ್ನು ಇಲ್ಲಿ ನೀಡಲಾಗಿದೆ ನೋಡಿ.
ಮಧುಮೇಹದ ಲಕ್ಷಣಗಳು:
1. ಪದೇ-ಪದೇ ಮೂತ್ರವಿಸರ್ಜನೆ: ಪದೇ-ಪದೇ ಮೂತ್ರ ವಿಸರ್ಜನೆ ಉಂಟಾಗುವುದು. ದೇಹದಲ್ಲಿ ನೀರಿನಲ್ಲಿ ಕಡಿಮೆಯಾಗುವುದರಿಂದ ಆಗಾಗ ಬಾಯಾರಿಕೆಯಾಗುತ್ತದೆ.
2. ತುಂಬಾ ಹಸಿವು: ದೇಹದಲ್ಲಿ ಇನ್ಸುಲಿನ್ ಪ್ರಮಾಣದಲ್ಲಿ ವ್ಯತ್ಯಾಸ ಉಂಟಾಗುವುದರಿಂದ ದಿನನಿತ್ಯದ ಚಟುವಟಿಕೆಗಳನ್ನು ಮಾಡಲು ಶಕ್ತಿ ಸಾಕಾಗುವುದಿಲ್ಲ. ದೇಹದಲ್ಲಿ ಶಕ್ತಿ ಕಡಿಮೆಯಾದಾಗ ಹೊಟ್ಟೆ ಹಸಿವು ಜಾಸ್ತಿಯಾಗುತ್ತದೆ.
3. ತೂಕ ಕಡಿಮೆಯಾಗುವುದು: ಇದ್ದಕ್ಕಿದ್ದ ಹಾಗೇ ತೂಕ ಕಡಿಮೆಯಾಗುತ್ತದೆ. ದೇಹದಲ್ಲಿ ಗ್ಲೂಕೋಸ್ ಹೀರಿಕೊಳ್ಳುವ ಸಾಮರ್ಥ್ಯ ಕಡಿಮೆಯಾಗಿ ಮೂತ್ರ ವಿಸರ್ಜನೆ ಜಾಸ್ತಿಯಾಗುವುದರಿಂದ ದೇಹದಲ್ಲಿರುವ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ತೂಕ ಇಳಿಮುಖವಾಗುವುದು.
4.ತಲೆಸುತ್ತು: ದೇಹದಲ್ಲಿ ಶಕ್ತಿಯು ಕಡಿಮೆಯಾಗುವುದರಿಂದ ತಲೆಸುತ್ತು ಕಾಣಿಸಿಕೊಳ್ಳುತ್ತದೆ.
5. ಕಣ್ಣು ಮಬ್ಬಾಗುವುದು: ಗ್ಲೂಕೋಸ್ ಪ್ರಮಾಣ ಹೆಚ್ಚಾದಾಗ ರಕ್ತಕಣದಲ್ಲಿ ಹಾನಿ ಉಂಟಾಗುತ್ತದೆ. ಇದರಿಂದಾಗಿ ಕಣ್ಣಿನಲ್ಲಿ ತೇವಾಂಶ ಕಡಿಮೆಯಾಗಿ ಕಣ್ಣು ಮಬ್ಬಾಗುವುದು. ಸರಿಯಾದ ಚಿಕಿತ್ಸೆ ಇಲ್ಲದಿದ್ದರೆ ಕುರುಡುತನ ಬರುತ್ತದೆ.
6. ಗಾಯ ಒಣಗದಿರುವುದು: ಮಧುಮೇಹ ಕಾಯಿಲೆ ಇದ್ದರೆ ಸಣ್ಣ ಗಾಯವಾದರೆ ಒಣಗಲು ತುಂಬಾ ಸಮಯ ತೆಗೆದುಕೊಳ್ಳುತ್ತದೆ.
7. ಒಣ ತ್ವಚೆ: ಒಣ ತ್ವಚೆ ಮತ್ತು ತ್ವಚೆಯಲ್ಲಿ ತುರಿಕೆ ಉಂಟಾಗುತ್ತದೆ.
8. ಕೈಕಾಲಿನಲ್ಲಿ ಉರಿ: ಸಕ್ಕರೆ ಅಂಶ ಹೆಚ್ಚಾದರೆ ರಕ್ತಕಣಗಳಲ್ಲಿ ಹಾನಿ ಉಂಟಾಗುತ್ತದೆ. ಇದರಿಂದ ಕೈಕಾಲುಗಳಲ್ಲಿ ಸ್ಪರ್ಶ ಜ್ಞಾನ ಕಡಿಮೆಯಾಗಿ ಉರಿ, ನೋವು ಕಾಣಿಸಿಕೊಳ್ಳುತ್ತದೆ.
9. ಸೋಂಕು: ಮಧುಮೇಹಿಗಳಿಗೆ ಬ್ಲೇಡ್ ತಾಗಿದರೆ, ಮೂತ್ರ ವಿಸರ್ಜನೆಯಲ್ಲಿ ತೊಂದರೆ ಉಂಟಾದರೆ ಬೇಗನೆ ಗುಣಮುಖವಾಗುವುದಿಲ್ಲ.
10. ತಲೆನೋವು: ವಿಪರೀತ ತಲೆನೋವು ಕಾಣಿಸಿಕೊಳ್ಳುತ್ತದೆ.
ಏಡ್ಸ್, ಕ್ಯಾನ್ಸರ್ ಗಿಂತ ಮಧುಮೇಹದಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚು. ಆದ್ದರಿಂದ ಈ ಮೇಲಿನ ಲಕ್ಷಣಗಳು ಕಾಣಿಸಿಕೊಂಡರೆ ಕೂಡಲೇ ಚಿಕಿತ್ಸೆ ಮಾಡಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications









