Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಕಲ್ಲಂಗಡಿ ಸೇವನೆಯ 5 ಆರೋಗ್ಯಕರ ಕಾರಣಗಳು
ದಕ್ಷಿಣ ಆಫ್ರಿಕಾ ಮೂಲವಾದ ಕಲ್ಲಂಗಡಿ ವಿಟಮಿನ್ ಭರಿತವಾದ ಹಣ್ಣಾಗಿದೆ. ವಿಟಮಿನ್ ಎ, ಬಿ6 ಮತ್ತು ಸಿ ಯನ್ನು ಒಳಗೊಂಡಿರುವ ಕಲ್ಲಂಗಡಿ ಬಹುವಿಟಮಿನ್ ಅಂಶದಿಂದ ಕೂಡಿದೆ. ಇದರಲ್ಲಿರುವ ವಿಟಮಿನ್ ಸಿ ಅಂಶ ರೋಗನಿರೋಧಕ ಶಕ್ತಿಯನ್ನು ವರ್ಧಿಸಿ ದೇಹಕ್ಕೆ ಚೈತನ್ಯವನ್ನುಂಟು ಮಾಡುತ್ತದೆ. ಇತರ ಹಣ್ಣು ತರಕಾರಿಗಳಿಗಿಂತ ಲೈಕೊಪಿನ್ ಹೆಚ್ಚಾಗಿರುವ ಕಲ್ಲಂಗಡಿ ಕೊಬ್ಬು ಮುಕ್ತ ನೈಸರ್ಗಿಕ ಕೊಡುಗೆಯಾಗಿದೆ.
ಕೊಲೆಸ್ಟ್ರಾಲ್ ಅಂಶವಿಲ್ಲದ ದೇಹಕ್ಕೆ ಶಕ್ತಿಯನ್ನು ಒದಗಿಸುವ ವಿಟಮಿನ್ ಭರಿತ ಹಣ್ಣಾದ ಕಲ್ಲಂಗಡಿ ಬೇಸಿಗೆಯ ಬೇಗೆಯನ್ನು ಕಳೆಯುವಲ್ಲಿ ಸಹಕಾರಿ. ಇದನ್ನು ಜ್ಯೂಸ್ ಅಥವಾ ಹಾಗೆ ಕೂಡ ಸೇವಿಸಬಹುದು. ಕಲ್ಲಂಗಡಿ ಬಾಯಾರಿಕೆಯನ್ನು ಮಾತ್ರ ತೀರಿಸದೆ ರೋಗಗಳ ವಿರುದ್ಧ ಹೋರಾಡುವ ಗುಣವನ್ನು ಹೇರಳವಾಗಿಸಿಕೊಂಡ ಸಮೃದ್ಧ ಹಣ್ಣು.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಹಲಸು ಆರೋಗ್ಯಕ್ಕೆ ಹೇಗೆ ಫಲಪ್ರದ

ಹೈಡ್ರೇಟ್ ಮತ್ತು ದೇಹ ಸ್ವಚ್ಛಕ:
ಕಲ್ಲಂಗಡಿ 6% ಸಕ್ಕರೆ ಮತ್ತು 92% ನೀರನ್ನು ಒಳಗೊಂಡಿರುವ ನ್ಯೂಟ್ರೀಷಿಯನ್ ಭರಿತ ಹಣ್ಣಾಗಿದೆ. ಕಿಡ್ನಿ ರೋಗಿಗಳಿಗೆ ಡಯಾಲಿಸಿಸ್ಗಿಂತ ಮುಂಚೆ ಹೋಮಿಯೋಪತಿ ಚಿಕಿತ್ಸೆಯಂತೆ ಕಲ್ಲಂಗಡಿಯನ್ನು ನೀಡಲಾಗುತ್ತದೆ.

ಕ್ಯಾನ್ಸರ್ ನಿರೋಧಕ:
ಲೈಕೋಪಿನ್ ಅಂಶ ಕಲ್ಲಂಗಡಿಯಲ್ಲಿದ್ದು, ಜನನಾಂಗ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ಗೆ ಉತ್ತಮ ಔಷಧಿಯಾಗಿದೆ.

ಪೊಟ್ಯಾಶಿಯಂ ಅತ್ಯಧಿಕವಾಗಿದೆ:
ಪೊಟ್ಯಾಶಿಯಂನ ಹೇರಳ ಅಂಶ ಕಲ್ಲಂಗಡಿಯಲ್ಲಿದ್ದು, ಸ್ನಾಯು ಮತ್ತು ನರ ವ್ಯವಸ್ಥೆಯ ಸುಧಾರಣೆಯಲ್ಲಿ ಸಹಾಯ ಮಾಡುತ್ತದೆ. ಅಸ್ತಮಾ, ಅಪಧಮನಿ ಕಾಠಿಣ್ಯ, ಮಧುಮೇಹ, ಕರುಳಿನ ಕ್ಯಾನ್ಸರ್ ಮತ್ತು ಸಂಧಿವಾತವನ್ನು ದೂರವಾಗಿಸುತ್ತದೆ.

ತ್ವಚೆಯ ರಕ್ಷಣೆ:
ನೀವು ಒಣ ತ್ವಚೆಯನ್ನು ಹೊಂದಿದ್ದರೆ ನಿಮ್ಮ ಈ ಬಗೆಯ ಸಮಸ್ಯೆಯನ್ನು ದೂರಮಾಡುವಲ್ಲಿ ಕಲ್ಲಂಗಡಿ ಉತ್ತಮ ಹಣ್ಣಾಗಿದೆ. ಇದರಲ್ಲಿರುವ ಅತ್ಯಧಿಕ ನೀರಿನ ಅಂಶ ಬಾಯಾರಿಕೆಯನ್ನು ದೂರಮಾಡಿ ನಮ್ಮನ್ನು ಹೈಡ್ರೇಟ್ನ್ನಾಗಿ ಮಾಡುತ್ತದೆ.

ಒಣ ತ್ವಚೆಗಾಗಿ ಕಲ್ಲಂಗಡಿ ಫೇಸ್ಪ್ಯಾಕ್:
2 ಸ್ಫೂನ್ ಕಲ್ಲಂಗಡಿ ರಸ, 2 ಟೇಸ್ಪೂನ್ ಲಿಂಬೆ ರಸ, 1 ಟೇಬಲ್ಸ್ಪೂನ್ ಜೇನು. ಇವುಗಳನ್ನು ಮಿಶ್ರ ಮಾಡಿಕೊಂಡು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ 15-20 ನಿಮಿಷದ ನಂತರ ಮುಖವನ್ನು ಚೆನ್ನಾಗಿ ತೊಳೆದುಕೊಳ್ಳಿ

ನಿಮಿರುವಿಕೆಯ ನಿಷ್ಕ್ರಿಯತೆಯನ್ನು ಉಪಚರಿಸುತ್ತದೆ:
ಕಲ್ಲಂಗಡಿಯಲ್ಲಿರುವ ಸಿಟ್ರುಲ್ಲಿನ್, ಅಮೀನೊ ಏಸಿಡ್ ಅನ್ನು ಇನ್ನೊಂದು ಅಮೀನೊ ಏಸಿಡ್ ಅರ್ಜಿನೈನ್ನ ರಚನೆಗೆ ದೇಹದ ಮೂಲಕ ಬಳಸಲಾಗುತ್ತದೆ. ಇದರಿಂದ ದೇಹದಲ್ಲಿನ ಅಮೋನಿಯಾವನ್ನು ಹೊರಹಾಕಿ ನಿಟ್ರಿಕ್ ಆಕ್ಸೈಡ್ ಅನ್ನು ಉತ್ಪಾದಿಸುತ್ತದೆ. ನಿಟ್ರಿಕ್ ಆಕ್ಸೈಡ್ ರಕ್ತ ನಾಳಗಳನ್ನು ಮಾತ್ರ ಸಡಿಲಗೊಳಿಸದೆ, ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ವಯಾಗ್ರಾದ ಒಂದು ಭಾಗವಾಗಿರುವ ನಿಟ್ರಿಕ್ ಆಕ್ಸೈಡ್ ನಿಮಿರುವಿಕೆಯ ನಿಷ್ಕ್ರಿಯತೆಯನ್ನು ನಿರ್ಬಂಧಿಸುತ್ತದೆ.



Click it and Unblock the Notifications








