Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸದ್ದಿಲ್ಲದೆ ಸದ್ದುಮಾಡುವ 'ಮಧುಮೇಹದ' ಬಗ್ಗೆ ಇರಲಿ ಎಚ್ಚರ!
ಸದ್ದಿಲ್ಲದೆ ನಿಧಾನವಾಗಿ ಕೊಲ್ಲುವ ರೋಗವೇ ಮಧುಮೇಹ. ಬೇರೆ ರೋಗಗಳು ಮಧುಮೇಹದಷ್ಟು ಕಾಡುವುದು ಕಡಿಮೆ. ಮಧುಮೇಹ ಜೀವಮಾನವಿಡಿ ಕಾಡುತ್ತಲೇ ಇರುತ್ತದೆ. ದೇಹದಲ್ಲಿ ಇನ್ಸುಲಿನ್ ಉತ್ಪಾದನೆ ಆಗದೆ ಇರುವುದರಿಂದ ಮಧುಮೇಹ ಕಾಣಿಸುತ್ತದೆ. ಎರಡನೇ ಮಟ್ಟದ ಮಧುಮೇಹವು ಯಾವುದೇ ವ್ಯಕ್ತಿಯನ್ನು ತೀವ್ರವಾಗಿ ಕಾಡುತ್ತದೆ.

ಎರಡನೇ ಮಟ್ಟದ ಮಧುಮೇಹವಿರುವ ವ್ಯಕ್ತಿಯ ದೇಹದಲ್ಲಿ ಇನ್ಸುಲಿನ್ ಉತ್ಪಾದನೆ ಆಗುವುದು ಇಲ್ಲ ಅಥವಾ ಅದನ್ನು ಸರಿಯಾಗಿ ಬಳಸದೇ ಇರುವುದು ಎನ್ನುವುದು ಎಂದರ್ಥ. ಎರಡನೇ ಮಟ್ಟದ ಮಧುಮೇಹ ಇರುವ ವ್ಯಕ್ತಿಗಳಲ್ಲಿ ರಕ್ತದ ಸಕ್ಕರೆ ಮಟ್ಟವು ಅಧಿಕವಾಗಿರುತ್ತದೆ. ಅದರಲ್ಲೂ ದೇಹದಲ್ಲಿ ಬೊಜ್ಜು ಬೆಳೆಸಿಕೊಂಡಿದ್ದರೆ ಆಗ ಸಮಸ್ಯೆ ಮತ್ತಷ್ಟು ಹದಗೆಡುತ್ತದೆ.
ಇಂತಹ ವ್ಯಕ್ತಿಗಳು ಸಂಸ್ಕರಿತ ಕೊಬ್ಬನ್ನು ಹೊಂದಿರುವ ಆಹಾರದಿಂದ ದೂರ ಉಳಿಯಬೇಕು ಮತ್ತು ಆದಷ್ಟು ಮಟ್ಟಿಗೆ ವ್ಯಾಯಾಮ ಮಾಡುತ್ತಿರಬೇಕು. ಎರಡನೇ ಮಟ್ಟದ ಮಧುಮೇಹ ಇರುವ ವ್ಯಕ್ತಿಗಳು ಯಾವ್ಯಾವ ಆಹಾರಗಳಿಂದ ದೂರ ಉಳಿಯಬೇಕು ಎನ್ನುವ ಬಗ್ಗೆ ಬೋಲ್ಡ್ ಸ್ಕೈ ಪಟ್ಟಿ ಮಾಡಿದೆ. ಇದನ್ನು ಓದಿಕೊಂಡು ಮಧುಮೇಹವನ್ನು ನಿಯಂತ್ರಣದಲ್ಲಿಡಿ. ಮಧುಮೇಹಿಗಳಿಗೆ ಯಾವ ಹಣ್ಣುಗಳು ಸೂಕ್ತ? ಅದೂ ಎಷ್ಟು ಪ್ರಮಾಣದಲ್ಲಿ?
ಸಕ್ಕರೆ
1 ಅಥವಾ 2ನೇ ಮಟ್ಟದ ಮಧುಮೇಹ ಇರುವ ರೋಗಿಗಳು ಸಕ್ಕರೆ ತಿನ್ನಲೇಬಾರದು. ಸೋಡಾ, ಕುಕೀಸ್ ಇತ್ಯಾದಿಗಳು ರಕ್ತದ ಸಕ್ಕರೆ ಮಟ್ಟವನ್ನು ಹೆಚ್ಚಿಸುವುದು. ಅತಿಯಾಗಿ ಸಕ್ಕರೆ ಇರುವಂತಹ ಆಹಾರವನ್ನು ತ್ಯಜಿಸಿದರೆ ರಕ್ತದಲ್ಲಿನ ಸಕ್ಕರೆ ಮಟ್ಟವು ಒಂದು ಮಟ್ಟದಲ್ಲಿ ಇರುತ್ತದೆ.
ಕೊಬ್ಬುಯುಕ್ತ ಹಾಲಿನ ಉತ್ಪನ್ನಗಳು
2ನೇ ಮಟ್ಟದ ಮಧುಮೇಹವಿರುವ ವ್ಯಕ್ತಿಗಳು ದೇಹದಲ್ಲಿರುವ ಇನ್ಸುಲಿನ್ ಗ್ಲೂಕೋಸ್ ವಿಘಟನೆಗೊಳ್ಳುವ ಕಾರ್ಯಕ್ಕೆ ಅಡ್ಡಿಯುಂಟು ಮಾಡುತ್ತದೆ. ಅತಿಯಾದ ಆರ್ದ್ರಿತ ಕೊಬ್ಬನ್ನು ಹೊಂದಿರುವಂತಹ ಆಹಾರಗಳು ಈ ಸಮಸ್ಯೆಯನ್ನು ಉಂಟು ಮಾಡುತ್ತದೆ ಎಂದು ತಿಳಿದುಬಂದಿದೆ. ಇದರಿಂದ ಮೊಸರು, ಗಿಣ್ಣು ಇತ್ಯಾದಿಗಳಿಂದ ದೂರವಿರಬೇಕು. ನೆನಪಿರಲಿ ಮಧುಮೇಹ ಕಣ್ಣನ್ನೂ ಬಾಧಿಸುತ್ತದೆ!
ಒಣದ್ರಾಕ್ಷಿ
ಒಣದ್ರಾಕ್ಷಿಯಲ್ಲಿ ಉನ್ನತ ಮಟ್ಟದ ಪೋಷಕಾಂಶ ಮತ್ತು ಖನಿಜಾಂಶಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಆದರೆ ಇದರಲ್ಲಿ ಉನ್ನತ ಮಟ್ಟದ ಸಕ್ಕರೆ ಕೂಡ ಇದೆ. ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ಇದನ್ನು ತಿನ್ನುವುದನ್ನು ಕಡೆಗಣಿಸಿ.
ಸಂಸ್ಕರಿತ ಕೊಬ್ಬು
2ನೇ ಮಟ್ಟದ ಮಧುಮೇಹ ಹೊಂದಿರುವ ವ್ಯಕ್ತಿಗಳು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಸಂಸ್ಕರಿತ ಮಾಂಸವನ್ನು ತಿನ್ನುವುದರಿಂದ ಈ ಅಪಾಯವು ಹೆಚ್ಚಾಗುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ಈ ಮಟ್ಟದ ಮಧುಮೇಹ ಇರುವವರಲ್ಲಿ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಏನೇ ಹೇಳಿ ಮಧುಮೇಹ ನಿಯಂತ್ರಣಕ್ಕೆ ಮನೆಮದ್ದೇ ಸೂಕ್ತ
ಕರಿದ ಆಹಾರಗಳು
ಕರಿದ ಆಹಾರಗಳಲ್ಲಿ ಆರ್ದ್ರಿತ ಕೊಬ್ಬು ಹೆಚ್ಚಾಗಿರುತ್ತದೆ. ಇದನ್ನು ತಿನ್ನುವುದರಿಂದ ತೂಕವು ಹೆಚ್ಚಳವಾಗುತ್ತದೆ. ಇದು ಇನ್ಸುಲಿನ ನಿರೋಧಕವನ್ನು ಉಲ್ಬಣಗೊಳಿಸುತ್ತದೆ. ಮೇಲೆ ತಿಳಿಸಿರುವಂತಹ ಆಹಾರವನ್ನು ತ್ಯಜಿಸಿದರೆ ಎರಡನೇ ಮಟ್ಟದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications



