Latest Updates
-
ಮೈದಾ, ಮೊಟ್ಟೆ ಎರಡೂ ಬೇಡ! ಈ ಹೊಸ ರುಚಿಯ ಕೇಕ್ ಮಾಡಿ ನೋಡಿ.. ಶುಗರ್ ಇರುವವರು ತಿನ್ನಬಹುದು -
ಉದ್ದು ಬೇಡ 1 ಕಪ್ ರವೆ ಇದ್ರೆ ಥಟ್ ಅಂತ ವಡೆ ಮಾಡಿಕೊಳ್ಳಿ: ಬ್ರೇಕ್ಫಾಸ್ಟ್ಗೆ ಇದು ಬೆಸ್ಟ್ ರೆಸಿಪಿ! -
ಕೊನೆಗೂ ಕಣ್ಣು ಬಿಟ್ಟ ಶುಕ್ರ-ಶನಿ: ಈ ರಾಶಿಯವರ ಜೀವನದಲ್ಲಿ ಭೌತಿಕ ಸುಖ! ಸಂಪತ್ತು ತುಂಬಿ ತುಳುಕಲಿದೆ -
ಬದನೆಕಾಯಿ ಕಹಿ ತೆಗೆಯೋದು ಹೇಗೆ? ಈ ಸಿಂಪಲ್ ಟ್ರಿಕ್ ಬಳಸಿ.. ಬಲು ರುಚಿ! ಕಹಿ ಅನ್ನೋದೇ ಇರಲ್ಲ -
ಮಧ್ಯಪ್ರಾಚ್ಯ ಸಂಘರ್ಷ: ಭಾರತದಲ್ಲಿ ಏರಿಕೆಯಾಗಲಿದೆ ಈ ವಸ್ತುಗಳ ಬೆಲೆ! -
ಇವ್ರು ಬೇಗ ಲವ್ನಲ್ಲಿ ಬೀಳ್ತಾರೆ.. ಮದುವೆ ಅಂದ್ರೆ ಅನ್ಪ್ರೆಡಿಕ್ಟಬಲ್! ನಿಮ್ಮ ಜನ್ಮದಿನಾಂಕ ಇದೇನಾ? -
ಬೇಸಿಗೆಯ ಉರಿ ಬಿಸಿಲಿನಲ್ಲಿ ಫ್ರಿಡ್ಜ್ನಲ್ಲಿಟ್ಟ ಈ ಹಣ್ಣು ಸೇವಿಸಬೇಡಿ! ಎದುರಾಗುತ್ತೆ ಆಪತ್ತು! -
ಸಕ್ಕರೆ ಬೇಡ, ಪಾಕವೂ ಬೇಡ.. ಅಜ್ಜ-ಅಜ್ಜಿಯರ ಕಾಲದ ಹೆಲ್ದಿ ಲಡ್ಡು! ತಿಂದ್ರೆ ತೂಕ ಇಳಿಯುತ್ತೆ, ಶುಗರ್ಗೂ ಬೆಸ್ಟ್ -
ಬಿಸಿಲಿನ ತಾಪಕ್ಕೆ ಕಣ್ಣು ಉರಿಗೆ ಈ ಪುಡಿ ಬೆಸ್ಟ್! ದಿನ 1 ಚಮಚ ಕಣ್ಣಿನ ಎಲ್ಲಾ ಸಮಸ್ಯೆ ಕಡಿಮೆಯಾಗುತ್ತೆ -
ಭಾಲಚಂದ್ರ ಸಂಕಷ್ಟ ಚತುರ್ಥಿ 2026: ಈ 6 ರಾಶಿಗಳಿಗೆ ಗಜಕೇಸರಿ ಯೋಗ! ಹಣದ ಮಳೆ ಸುರಿಸಲಿದ್ದಾರೆ ಗಣಪ
ಮನೆ ಔಷಧ: ಮಧುಮೇಹವನ್ನು ನಿಯಂತ್ರಿಸುವ 'ಆಹಾರ ಪಥ್ಯ'
ಸದ್ದಿಲ್ಲದೆ ನಿಧಾನವಾಗಿ ಕೊಲ್ಲುವ ರೋಗವೇ ಮಧುಮೇಹ. ಬೇರೆ ರೋಗಗಳು ಮಧುಮೇಹದಷ್ಟು ಕಾಡುವುದು ಕಡಿಮೆ. ಮಧುಮೇಹ ಜೀವಮಾನವಿಡಿ ಕಾಡುತ್ತಲೇ ಇರುತ್ತದೆ. ದೇಹದಲ್ಲಿ ಇನ್ಸುಲಿನ್ ಉತ್ಪಾದನೆ ಆಗದೆ ಇರುವುದರಿಂದ ಮಧುಮೇಹ ಕಾಣಿಸುತ್ತದೆ. ಅದರಲ್ಲೂ ಎರಡನೇ ಮಟ್ಟದ ಮಧುಮೇಹವು ಯಾವುದೇ ವ್ಯಕ್ತಿಯನ್ನು ತೀವ್ರವಾಗಿ ಕಾಡುತ್ತದೆ.
ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿದಲ್ಲಿ ತಲೆದೋರುವ ಈ ಸಮಸ್ಯೆ, ಅತಿಯಾದ ಸಕ್ಕರೆ ಸೇವನೆಯಿಂದಲೇ ಮಾತ್ರವೇ ನಿಮ್ಮ ಬಳಿ ಸುಳಿಯುತ್ತದೆ ಎಂಬುದು ಮಾತ್ರ ಸತ್ಯವಲ್ಲ. ಅಧಿಕ ಬೊಜ್ಜು, ವಂಶಪಾರಂಪರ್ಯತೆ, ಅಧಿಕ ಒತ್ತಡ ಹೀಗೆ ಸಕ್ಕರೆ ಕಾಯಿಲೆ ದೇಹಕ್ಕೆ ಅಡರಲು ಒಂದು ಸಣ್ಣ ಕಾರಣ ಸಾಕು. ತೂಕ ನಿಯಂತ್ರಿಸಿ, ಖಂಡಿತ ಮಧುಮೇಹವನ್ನೂ ನಿಯಂತ್ರಿಸಬಹುದು...
ಈ ರೋಗ ನಿಮ್ಮನ್ನು ಕಾಡುತ್ತಿದೆ ಎಂದಾದಲ್ಲಿ ನೀವು ಹೆಚ್ಚು ತಲೆಬಿಸಿ ಮಾಡಬೇಕಾದ ಅಗತ್ಯವಿಲ್ಲ ಇಲ್ಲವೇ ಜೀವನವೇ ಮುಗಿಯಿತು ಎಂದಾಗಿ ನೀವು ನಿರ್ಧರಿಸಬೇಕೆಂದೇನಿಲ್ಲ. ಬದಲಾಗಿ ನಿಮ್ಮ ಜೀವನ ಶೈಲಿಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಮಾಡುವ ಮೂಲಕ ನೀವು ಸಾಮಾನ್ಯವಾಗಿಯೇ ಜೀವಿಸಬಹುದಾಗಿದೆ. ಮಧುಮೇಹ ರೋಗದ ಹೆಡೆಮುರಿ ಕಟ್ಟಿಹಾಕುವ ಫಲಪ್ರದ ಮನೆಮದ್ದು
ಸಕ್ಕರೆ ಸೇವನೆಯನ್ನು ಮಿತವಾಗಿ ಬಳಸಿಕೊಂಡು, ನಿಯಮಿತ ವ್ಯಾಯಮವನ್ನು ಮಾಡುತ್ತಾ, ಪಥ್ಯ ಪ್ರಕಾರವಾಗಿ ಆಹಾರವನ್ನು ಸೇವಿಸುತ್ತಿದ್ದಲ್ಲಿ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಅದಾಗ್ಯೂ ಕೆಲವೊಂದು ಆಯುರ್ವೇದ ಔಷಧ ವಿಧಾನವನ್ನು ಅರಿತುಕೊಂಡಲ್ಲಿ ಮಧುಮೇಹದ ಹುಟ್ಟಡಗಿಸಬಹುದು ಎಂಬ ಸಿಹಿ ಸುದ್ದಿಯನ್ನೇ ನಾವಿಂದು ಇಂದಿನ ಲೇಖನದಲ್ಲಿ ತಿಳಿಸಲಿದ್ದೇವೆ....

ಹಾಗಲಕಾಯಿಯ ರಸ
ಪ್ರತಿದಿನ ಒಂದು ಲೋಟ ಹಾಗಲಕಾಯಿಯ ರಸವನ್ನು ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ. ಇದಕ್ಕೆ ಕಾರಣ ಹಾಗಲಕಾಯಿಯಲ್ಲಿರುವ momorcidin ಮತ್ತು charatin ಎಂಬ ವಿಶೇಷ ನಿವಾರಕಗಳು (anti-hyperglycemic compounds) ಕಾರಣವಾಗಿವೆ.
ವಾಸ್ತವಾಗಿ ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ನುಗ್ಗೆಸೊಪ್ಪನ್ನು ಆದಷ್ಟು ಆಹಾರಕ್ರಮದಲ್ಲಿ ಬಳಸಿ....
ನುಗ್ಗೆಸೊಪ್ಪನ್ನು ದಂಟಿನಿಂದ ಬಿಡಿಬಿಡಿಯಾಗಿ ಬಿಡಿಸಿ ನೇರವಾಗಿ ಸಾಂಬಾರ್ ಅಥವಾ ದಾಲ್ಗಳಲ್ಲಿ ಇತರ ತರಕಾರಿಗಳೊಂದಿಗೆ ಸೇರಿಸಿ ಬೇಯಿಸಿ ತಿನ್ನಬಹುದು. ತಿಳಿಸಾರು, ಮಜ್ಜಿಗೆ ಹುಳಿ, ತಂಬುಳಿ, ಮೊದಲಾದ ರೂಪದಲ್ಲಿಯೂ ಸೇವಿಸಬಹುದು. ಇನ್ನೊಂದು ವಿಧಾನವೆಂದರೆ ಕೊಂಚ ಬೇಯಿಸಿದ ಎಲೆಗಳನ್ನು ಚಪಾತಿ ಹಿಟ್ಟಿನ ಜೊತೆಗೆ ಕಲಸಿ ಲಟ್ಟಿಸಿ ಪರೋಟಾ ಅಥವಾ ಚಪಾತಿಯ ರೂಪದಲ್ಲಿಯೂ ಸೇವಿಸಬಹುದು.

ದಾಲ್ಚಿನ್ನಿ ಬಳಕೆ
ಸಕ್ಕರೆಯ ಬದಲಿಗೆ ನಿಮ್ಮ ಆಹಾರದಲ್ಲಿ ದಾಲ್ಚಿನ್ನಿಯನ್ನು ಬಳಸಬಹುದಾಗಿದೆ. ದಾಲ್ಚಿನ್ನಿಯು ರಕ್ತದ ಸಕ್ಕರೆ ಮಟ್ಟವನ್ನು ಸ್ಥಿಮಿತದಲ್ಲಿರಿಸಲು ಸಹಾಯ ಮಾಡಲಿದ್ದು ಇದು ಸಕ್ಕರೆಯ ಬದಲಿಗೆ ಬಳಸಬಹುದಾದ ಉತ್ತಮ ಉತ್ಪನ್ನವಾಗಿದೆ. ಎಂಬುದು ಅಧ್ಯಯನಗಳಿಂದ ತಿಳಿದು ಬಂದಿದೆ.

ಬೆಂಡೆಕಾಯಿ
ಬೆಂಡೆಕಾಯಿ ಮಧುಮೇಹಿಗಳಿಗೆ ಮತ್ತೊಂದು ಉತ್ತಮ ತರಕಾರಿಯಾಗಿದೆ. ಇದು ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ

ತಂಪು ಪಾನೀಯಗಳಿಂದ ದೂರವಿರಿ
ಕಾರ್ಬೋನೇಟೆಡ್ ಪಾನೀಯಗಳನ್ನು ಸೇವಿಸುವುದೂ ಕೂಡ ಮಧುಮೇಹ ಮೆಲ್ಲಿಟಸ್ ಅಪಾಯವನ್ನು ಮಹಿಳೆಯರಲ್ಲಿ ಎಂಭತ್ತೈದು ಶೇಕಡಾದಷ್ಟು ಹೆಚ್ಚಿಸಿದೆ. ತಂಪು ಪಾನೀಯಗಳನ್ನು ಮಧುಮೇಹಿಗಳು ಆದಷ್ಟು ಕಡಿಮೆ ಮಾಡಬೇಕು. ಕೊಬ್ಬಿನ ಆಹಾರ ಪದಾರ್ಥಗಳ ಸೇವನೆಯನ್ನೂ ಮಧುಮೇಹಿಗಳು ಕಡಿಮೆ ಮಾಡಬೇಕು ಏಕೆಂದರೆ ಇದರಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗಿರುತ್ತದೆ.

ಚಿನ್ನಾಗಿ ನಿದ್ರೆ ಮಾಡಿ...
ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸಲು ನೀವು ಸಾಕಷ್ಟು ನಿದ್ದೆ ಮಾಡುವುದೂ ಅತ್ಯಗತ್ಯವಾಗಿದೆ. ನಿದ್ದೆಯು ನಿಮ್ಮ ಒತ್ತಡವನ್ನು ಇಳಿಮುಖಗೊಳಿಸಲಿದೆ. ನೀವು ಸಾಕಷ್ಟು ನಿದ್ದೆ ಮಾಡದೇ ಇರುವುದು ಮತ್ತು ಹೆಚ್ಚುವರಿ ಒತ್ತಡದಲ್ಲಿರುವುದರಿಂದ ಕೂಡ ಮಧುಮೇಹ ಏರುವ ಸಾಧ್ಯತೆ ಇದೆ ಎಂಬುದಾಗಿ ಅಧ್ಯಯನಗಳು ತಿಳಿಸಿವೆ.



Click it and Unblock the Notifications











