Latest Updates
-
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ!
ಮಧುಮೇಹಿಗಳೇ, ವೈದ್ಯರಲ್ಲಿ ತಪ್ಪದೇ ಈ ಪ್ರಶ್ನೆಗಳನ್ನು ಕೇಳಿ...
ಪ್ರತೀ ಸಲ ವೈದ್ಯರನ್ನು ಭೇಟಿಯಾದಾಗ ಮಧುಮೇಹವಿರುವ ರೋಗಿಗಳು ಕೆಲವೊಂದು ಪ್ರಶ್ನೆಗಳನ್ನು ಕೇಳಲೇಬೇಕು. ನಿಮ್ಮ ದೇಹಕ್ಕೆ ಏನಾಗುತ್ತಿದೆ ಎಂದು ತಿಳಿದುಕೊಳ್ಳಲು ವೈದ್ಯರ ಬಳಿ ಕೆಲವೊಂದು ಪ್ರಶ್ನೆಗಳನ್ನು ಕೇಳುವುದು ಅತ್ಯಗತ್ಯವಾಗಿದೆ.
ಮಧುಮೇಹ (ಡಯಾಬಿಟಿಸ್) ದೇಹವನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಇದರ ಬಗ್ಗೆ ಎಷ್ಟು ಎಚ್ಚರ ವಹಿಸಿದರೂ ಸಾಲದು. ಅದರಲ್ಲೂ ಮಧುಮೇಹ ಹೆಚ್ಚಾಗಿರುವ ರೋಗಿಗಳು ತಮ್ಮ ದೇಹವನ್ನು ಹೂವಿನಂತೆ ಕಾಪಾಡಿಕೊಳ್ಳಬೇಕು. ಯಾಕೆಂದರೆ ಮಧುಮೇಹ ಇರುವವರು ಕೆಲವೊಂದು ಆಹಾರ ಕ್ರಮ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು ಹೋಗಬೇಕಾಗುತ್ತದೆ. ಮಧುಮೇಹ ರೋಗದ ಹೆಡೆಮುರಿ ಕಟ್ಟಿಹಾಕುವ ಫಲಪ್ರದ ಮನೆಮದ್ದು
ಪ್ರತೀ ಸಲ ವೈದ್ಯರನ್ನು ಭೇಟಿಯಾದಾಗ ಮಧುಮೇಹವಿರುವ ರೋಗಿಗಳು ಕೆಲವೊಂದು ಪ್ರಶ್ನೆಗಳನ್ನು ಕೇಳಲೇಬೇಕು. ನಿಮ್ಮ ದೇಹಕ್ಕೆ ಏನಾಗುತ್ತಿದೆ ಎಂದು ತಿಳಿದುಕೊಳ್ಳಲು ವೈದ್ಯರ ಬಳಿ ಕೆಲವೊಂದು ಪ್ರಶ್ನೆಗಳನ್ನು ಕೇಳುವುದು ಅತ್ಯಗತ್ಯವಾಗಿದೆ. ಮಧುಮೇಹಿಗಳಿಗೆ ವೈದ್ಯರ ಬಳಿ ಏನು ಕೇಳಬೇಕೆಂದು ತಿಳಿದಿರುವುದಿಲ್ಲ. ಮಧುಮೇಹ ನಿಯಂತ್ರಣಕ್ಕೆ, ಪ್ರಯತ್ನಿಸಿ ನೈಸರ್ಗಿಕ ಆಹಾರಗಳು
ಇದಕ್ಕಾಗಿಯೇ ನಾವು ಈ ಲೇಖನದಲ್ಲಿ ಮಧುಮೇಹಿಗಳು ವೈದ್ಯರ ಬಳಿ ಕೇಳಬೇಕಾದ ಕೆಲವೊಂದು ಅತೀ ಮುಖ್ಯ ಪ್ರಶ್ನೆಗಳ ಬಗ್ಗೆ ಪಟ್ಟಿಯನ್ನು ಮಾಡಿದ್ದೇವೆ. ಇದನ್ನು ಓದಿಕೊಂಡು ನಿಮ್ಮ ಕುಟುಂಬದಲ್ಲಿ ಯಾರಾದರೂ ಮಧುಮೇಹಿಗಳು ಇದ್ದರೆ ಅವರಿಗೆ ಈ ಬಗ್ಗೆ ತಿಳಿಸಿ...

ಎಷ್ಟು ಸಲ ನಾನು ರಕ್ತದಲ್ಲಿನ ಸಕ್ಕರೆ ಮಟ್ಟ ಪರೀಕ್ಷಿಸಬೇಕು?
ಸಮಸ್ಯೆಗಳನ್ನು ನಿವಾರಣೆ ಮಾಡಲು ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಆಗಾಗ ಪರೀಕ್ಷಿಸುತ್ತಾ ಇರಲೇಬೇಕಾಗುತ್ತದೆ. ಇದರಿಂದಾಗಿ ವೈದ್ಯರಲ್ಲಿಗೆ ಹೋದಾಗ ಎಷ್ಟು ಸಲ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೇಳಿ. ಇದು ಪ್ರತಿಯೊಬ್ಬ ರೋಗಿಗೆ ಭಿನ್ನವಾಗಿರುತ್ತದೆ.

ಔಷಧಿಯನ್ನು ಯಾವಾಗ ತೆಗೆದುಕೊಳ್ಳಬೇಕು?
ಮಧುಮೇಹಿಗಳು ಸ್ವತಃ ಔಷಧಿ ತೆಗೆದುಕೊಳ್ಳುವುದು ಸರಿಯಾದ ನಿರ್ಧಾರವಲ್ಲ. ಇದರಿಂದ ಯಾವ ಔಷಧಿ ನಿಮಗೆ ಒಳ್ಳೆಯದು ಮತ್ತು ಅದನ್ನು ಯಾವಾಗ ತೆಗೆದುಕೊಳ್ಳಬೇಕು ಎಂದು ವೈದ್ಯರಲ್ಲಿ ಕೇಳಿ.

ಕಡಿಮೆ ಖರ್ಚಿನ ಔಷಧಿ ಇದೆಯಾ?
ಕೆಲವೊಂದು ಸಂದರ್ಭಗಳಲ್ಲಿ ತುಂಬಾ ಕಡಿಮೆ ವೆಚ್ಚದಲ್ಲಿ ಒಳ್ಳೆಯ ಔಷಧಿ ಸಿಗುತ್ತಿರುತ್ತದೆ. ವೈದ್ಯರಲ್ಲಿ ಕಡಿಮೆ ದರದಲ್ಲಿ ಸಿಗುವ ಔಷಧಿ ಬಗ್ಗೆ ಕೇಳಿ ತಿಳಿಯಿರಿ.

ಅಡ್ಡ ಪರಿಣಾಮಗಳು ಏನು?
ಮಧುಮೇಹದ ಮಾತ್ರೆಗಳಿಂದ ಆಗುವಂತಹ ಅಡ್ಡಪರಿಣಾಮಗಳು ಏನು ಎಂದು ವೈದ್ಯರಲ್ಲಿ ಕೇಳಿ. ಇದರಿಂದ ನೀವು ಮಾನಸಿಕವಾಗಿ ತಯಾರಾಗಿರಬಹುದು.

ಆಹಾರ ಕ್ರಮ ಹೇಗಿರಬೇಕು?
ಮಧುಮೇಹವು ಜೀವನಶೈಲಿಯಿಂದ ಬರುವ ರೋಗವಾಗಿರುವ ಕಾರಣದಿಂದ ಇದರ ಲಕ್ಷಣಗಳನ್ನು ನಿವಾರಣೆ ಮಾಡಲು ಆರೋಗ್ಯಕರ ಆಹಾರ ಕ್ರಮವನ್ನು ಪಾಲಿಸುವುದು ಅತ್ಯಗತ್ಯ. ವೈದ್ಯರನ್ನು ಕೇಳಿ ಅವರಿಂದ ಸಲಹೆ ಪಡೆದು ಆಹಾರಕ್ರಮ ಪಾಲಿಸಿ. ಮಧುಮೇಹ ರೋಗಿಗಳ ಆಹಾರ ಕ್ರಮ ಹೇಗಿರಬೇಕು?

ಯಾವ ಆಹಾರ ತ್ಯಜಿಸಬೇಕು?
ಮಧುಮೇಹ ತುಂಬಾ ಕೆಟ್ಟ ಸ್ಥಿತಿಗೆ ತಲುಪುವುದನ್ನು ತಡೆಯಲು ಯಾವ್ಯಾವ ಆಹಾರಗಳನ್ನು ಕಡೆಗಣಿಸಬೇಕು ಎನ್ನುವ ಬಗ್ಗೆ ಅಗತ್ಯವಾಗಿ ವೈದ್ಯರಲ್ಲಿ ಕೇಳಿ.

ಮಾತ್ರೆ ಕಡಿಮೆ ಮಾಡಬಹುದೇ?
ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಸ್ಥಿರವಾಗಿ ಸಮತೋಲನ ಕಂಡುಬಂದಾಗ ಮಾತ್ರೆ ಕಡಿಮೆ ಮಾಡಬಹುದೇ ಎಂದು ವೈದ್ಯರನ್ನು ಕೇಳಿನೋಡಿ.



Click it and Unblock the Notifications