Latest Updates
-
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು!
ಮಧುಮೇಹಿಗಳು ಪಪ್ಪಾಯ ಹಣ್ಣು ತಿನ್ನಬಹುದೇ? ತಿಂದರೆ ಸಮಸ್ಯೆ ಆಗುವುದೇ?
ಇಂದಿನ ದಿನದಲ್ಲಿ ಮಧುಮೇಹ ಎನ್ನುವುದು ಸಾಮಾನ್ಯ ಕಾಯಿಲೆಯಾಗಿ ಬಿಟ್ಟಿದೆ. ಒಂದು ಮಾಹಿತಿಯ ಪ್ರಕಾರ ಶೇ.100 ರಷ್ಟು ಜನರಲ್ಲಿ ಶೇ. 50ರಷ್ಟು ಮಂದಿಗೆ ಸಕ್ಕರೆ ಕಾಯಿಲೆಯಿದೆ. ಮಧುಮೇಹ ರೋಗಿಯು ತನ್ನ ಆಹಾರ ಸೇವನೆಯಲ್ಲಿ ಸೂಕ್ತ ಕ್ರಮ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ರೋಗ ಉಲ್ಬಣವಾಗುವುದು.
ಜೀರ್ಣಾಂಗ ವ್ಯವಸ್ಥೆ ಹಾಗೂ ಮೂತ್ರ ಪಿಂಡಗಳ ಮೇಲೆ ಹಾನಿಕಾರಕ ಪರಿಣಾಮ ಉಂಟಾಗುವುದು. ಹಾಗಾಗಿ ಅದೆಷ್ಟೇ ಇಷ್ಟಪಟ್ಟ ತಿಂಡಿ ಅಥವಾ ಹಣ್ಣಾಗಿದ್ದರೂ ಸೇವಿಸುವ ಹಾಗಿಲ್ಲ. ಇನ್ನೊಂದು ವಿಚಾರವೆಂದರೆ, ಮಧುಮೇಹದಿಂದ ಬಳಲುತ್ತಿದ್ದೀರಿ ಎಂದಾದರೆ ಜನರೆಲ್ಲರೂ ಬೇಕಾ ಬಿಟ್ಟಿ ಸಲಹೆಯನ್ನು ನೀಡುತ್ತಾರೆ. ಆ ಹಣ್ಣು, ಈ ತಿಂಡಿ ತಿನ್ನಬಾರದು ಎನ್ನುತ್ತಾರೆ.
ಏಕೆಂದರೆ ಅದು ಅವರ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಹೆಚ್ಚಿಸುತ್ತದೆ ಎನ್ನುವ ಉದ್ದೇಶವಷ್ಟೇ. ಈ ನಿಟ್ಟಿನಲ್ಲೇ ಹಣ್ಣನ್ನು ತಿನ್ನಬಾರದು ಎಂದು ಹೇಳುತ್ತಾರೆ. ಆದರೆ ನಿಮಗೊಂದು ಸತ್ಯ ತಿಳಿದಿರಲಿ. ಮಧುಮೇಹಿಗಳು ಪಪ್ಪಾಯ ಹಣ್ಣನ್ನು ನಿಯಮಿತವಾಗಿಯೇ ಸೇವಿಸಬಹುದು. ಇದು ಮಧುಮೇಹಕ್ಕೆ ಒಳ್ಳೆಯದು. ಅದು ಹೇಗೆ ಎನ್ನುವ ವಿವಿರಣೆ ಇಲ್ಲಿದೆ ನೋಡಿ....

ಕಡಿಮೆ ಸಕ್ಕರೆ ಪ್ರಮಾಣ
ಪಪ್ಪಾಯ ಹಣ್ಣಿನಲ್ಲಿ 8.3ರಷ್ಟು ಸಕ್ಕರೆ ಪ್ರಮಾಣವಿದೆ. ಸೂಕ್ತ ಅಧ್ಯಯನವೊಂದು ಹೇಳುವ ಪ್ರಕಾರ ಪಪ್ಪಾಯದಲ್ಲಿರುವ ಸಂಯುಕ್ತಗಳು ಮಧುಮೇಹದ ಮಟ್ಟವನ್ನು ತಗ್ಗಿಸುತ್ತದೆ. ಇದರಲ್ಲಿರುವ ಪಪೈನ್ ಎನ್ನುವ ಕಿಣ್ವ ಅಧಿಕ ಪ್ರಮಾಣದಲ್ಲಿರುವುದರಿಂದ ದೇಹದಲ್ಲುಂಟಾಗುವ ಗಾಯ ಗುಣಮಪಡಿಸುತ್ತದೆ.

ಅಧಿಕ ಪ್ರಮಾಣದ ವಿಟಮಿನ್ಗಳು
ವಿಟಮಿನ್ ಎ ಮತ್ತು ಸಿ ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣಾಂಶ ಅಧಿಕ ಪ್ರಮಾಣದಲ್ಲಿದೆ. ಹೈಪೊಗ್ಲೈಸೆಮಿಕ್ ಪ್ರಕ್ರಿಯೆಯಿಂದ ಮಧುಮೇಹಿ ಸಂಬಂಧಿತ ಹೃದಯ ಕಾಯಿಲೆ ತಡೆಯುತ್ತದೆ.

ಉತ್ತಮ ನಾರಿನಂಶ
ಪಪ್ಪಾಯವು ಅಧಿಕ ಪ್ರಮಾಣದ ನಾರಿನಂಶದಿಂದ ಕೂಡಿದೆ. ಇದರ ಸೇವನೆಯಿಂದ ಸೂಕ್ತ ರೀತಿಯಲ್ಲಿ ಚಯಾಪಚಯ ಕ್ರಿಯೆ ನಡೆಯುತ್ತದೆ.

ಗ್ಲೈಸೆಮಿಕ್ ಸೂಚಿಯಲ್ಲಿ ಕಡಿಮೆ
ಗ್ಲೈಸೆಮಿಕ್ ಸೂಚಿಯ ಪ್ರಕಾರ ಪಪ್ಪಾಯ ಹಣ್ಣು ನೈಸರ್ಗಿಕವಾಗಿ ನಿಧಾನ ರೀತಿಯಲ್ಲೇ ಸಕ್ಕರೆ ಪ್ರಮಾಣವನ್ನು ಬಿಡುಗಡೆಮಾಡುತ್ತದೆ. ಹಾಗಾಗಿ ಇದರ ಸೇವನೆಯಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗದು. ಅಷ್ಟೇ ಅಲ್ಲದೆ ಬೆರಿ ಹಣ್ಣು, ಅವಕಾಡೂಗಳು, ಕಲ್ಲಂಗಡಿ, ಪ್ಲಮ್ ಮತ್ತು ಪೇರಳೆ ಹಣ್ಣುಗಳನ್ನು ಸಹ ನಿಮ್ಮ ಆಹಾರ ಪಟ್ಟಿಯಲ್ಲಿ ಸೇರಿಸಿಕೊಳ್ಳಬಹುದು.



Click it and Unblock the Notifications