Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಸಕ್ಕರೆ ರೋಗವನ್ನು ಹೇಗೆ ನಿಯಂತ್ರಿಸಬಹುದು: ಪ್ರಮುಖವಾದ 5 ದಾರಿಗಳು
ಭಾರತ ದೇಶವು 'ಸಕ್ಕರೆ ರೋಗದ ದೇಶ' ಎಂದು ಕರೆಸಿಕೊಳ್ಳುವ ಮಟ್ಟಿಗೆ ಸಕ್ಕರೆ ರೋಗಿಗಳನ್ನು ಹೊಂದಿದೆ. ಸುಮಾರು 5 ಕೋಟಿ ಜನ ಸಕ್ಕರೆ ರೋಗಿಗಳು ಇದ್ದರೆ, 2025 ರ ಹೊತ್ತಿಗೆ ಈ ಸಂಖ್ಯೆ ಇನ್ನೂ ಮೂರು ಕೋಟಿ ಹೆಚ್ಚಾಗಬಹುದು.
ಆದರೆ ಈ ಅಂಕಿಅಂಶಗಳು ಈ ರೋಗವು ರೋಗಿಯನ್ನು ಹೇಗೆ ನಿಧಾನವಾಗಿ ಮರಣದ ಶಯ್ಯೆಯ ಕಡೆಗೊಯ್ಯುವದು ಎಂದು ಹೇಳುವದಿಲ್ಲ. ನಿಮ್ಮ ಜೀವನದಲ್ಲಿ ಈ ರೋಗ ನಿಯಂತ್ರಣಕ್ಕೆ ಸಹಾಯಕವಾಗುವ 5 ದಾರಿಗಳು ಹೀಗಿವೆ...

ಸಮಯಕ್ಕೆ ಸರಿಯಾಗಿ ಆಹಾರ ತೆಗೆದುಕೊಳ್ಳಬೇಕು
ಮಾನವರ ದೇಹ ಬಹಳ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಹೊಂದಿದೆ. ಕಡಿಮೆ ಆಹಾರ ಸೇವಿಸಿದರೆ, ಇನ್ನೂ ಜಾಸ್ತಿ ಶೇಖರಣೆಗೆ ಅನುಕೂಲ ಮಾಡಿಕೊಳ್ಳುತ್ತದೆ. ಅವಶ್ಯಕತೆಗಿಂತ ಜಾಸ್ತಿ ತಿಂದರೆ ದೇಹದ ಎಲ್ಲಾ ಕಡೆಗೆ ಸಮನಾಗಿ ಹಂಚುತ್ತದೆ. ಆರೋಗ್ಯವಂತ ವ್ಯಕ್ತಿಯಲ್ಲಿ ಈ ವ್ಯವಸ್ಥೆ ಸರಿಯಾಗಿ ಚಾಲನೆಯಲ್ಲಿರುತ್ತದೆ. ಆದರೆ, ಸಕ್ಕರೆ ರೋಗಿಗಳ ದೇಹದಲ್ಲಿ ಸಕ್ಕರೆ ಅಂಶ ಹೆಚ್ಚು-ಕಡಿಮೆ ಆಗಿ, ಹೈಪೊಗ್ಲೈಸೆಮಿಕ್ ಆಘಾತವಾಗಬಹುದು. ಆದ್ದರಿಂದ ರೋಗಿಗಳು ಆಹಾರದ ದಿನಚರಿಯನ್ನು ಸರಿಯಾಗಿ ಪಾಲಿಸುವದಲ್ಲದೆ, ದಿನವಿಡೀ ಸಮಯಕ್ಕೆ ಸರಿಯಾಗಿ ಸ್ವಲ್ಪ ಸ್ವಲ್ಪವೇ ಆಹಾರ ಸೇವಿಸಬೇಕು.

ಆಹಾರದಲ್ಲಿ ನಾರಿನ ಅಂಶವನ್ನು ಹೆಚ್ಚಿಸಬೇಕು
ಬ್ರೌನ್ ರೈಸ್, ತರಕಾರಿ, ಹಣ್ಣಿನ ಬೀಜ, ಸಿಪ್ಪೆಗಳಲ್ಲಿರುವ ಕರಗಲಾರದ ನಾರಿನಂಶ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಸೇಬು, ಓಟ್ಸ್, ಒಣಹಣ್ಣುಗಳಲ್ಲಿ ಕಂಡುಬರುವ ಕರಗಬಹುದಾದ ನಾರಿನ ಅಂಶ ರಕ್ತದಲ್ಲಿನ ಕೊಲೆಸ್ಟ್ರಾಲ್ ಮತ್ತು ಸಕ್ಕರೆ ಅಂಶಗಳನ್ನು ನಿಯಂತ್ರಿಸುತ್ತದೆ. ನಾರಿನಂಶವು ಬೇಗನೆ ಹೊಟ್ಟೆ ತುಂಬಿದ ಅನುಭವ ಕೊಡುತ್ತದೆ, ಇದರಿಂದ ಸಕ್ಕರೆ ರೋಗಕ್ಕೆ ಪ್ರಮುಖ ಕಾರಣವಾದ ಅನವಶ್ಯಕ ಆಹಾರ ಸೇವನೆ ನಿಯಂತ್ರಣಕ್ಕೆ ಬರುತ್ತದೆ.

ಬೆಳಗಿನ ಉಪಹಾರ ಚೆನ್ನಾಗಿ ತಿಂದು, ರಾತ್ರಿಯ ಊಟ ಹಿತಮಿತವಾಗಿ ಮಾಡಬೇಕು:
"ಉಪಹಾರ ರಾಜನಂತೆ, ಮಧ್ಯಾಹ್ನದ ಊಟ ಸಾಮಾನ್ಯ ವ್ಯಕ್ತಿಯಂತೆ, ರಾತ್ರಿ ಊಟ ಭಿಕ್ಷುಕನಂತೆ ಮಾಡಬೇಕು" ಎಂಬ ಪ್ರಸಿದ್ಧ ನಾಣ್ಣುಡಿಯೇ ಇದೆ. ಈ ಮಾತು ಎಲ್ಲರಿಗೂ ಅನ್ವಯಿಸುತ್ತದೆ, ಮುಖ್ಯವಾಗಿ ಟೈಪ್-೨ ಸಕ್ಕರೆ ರೋಗ ಇರುವವರಿಗೆ. ಸುಮಾರು ಅಧ್ಯಯನಗಳ ಪ್ರಕಾರ ಪ್ರೋಟೀನ್ ಭರಿತ ಆದರೆ ಕಡಿಮೆ ಕಾರ್ಬೋಹೈಡ್ರೇಟ್ ಇರುವ ಆಹಾರ ಮತ್ತು ಮಿತವಾದ ರಾತ್ರಿಯ ಭೋಜನ ಆಹಾರದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ. ಇದು ನಿಯಂತ್ರಿಸುವದಲ್ಲದೆ, ಉತ್ತಮವಾದ ಜೀವನಶೈಲಿಯನ್ನು ಒದಗಿಸುತ್ತದೆ.

ಪ್ರತಿದಿನ ತಪ್ಪದೆ ವ್ಯಾಯಾಮ ಮಾಡಬೇಕು
ಇದು ಸಕ್ಕರೆ ರೋಗ ನಿಯಂತ್ರಣಕ್ಕೆ ಅತಿ ಪ್ರಮುಖವಾದ ದಾರಿ. ಮೊದಲನೆಯದೆಂದರೆ, ಆರೋಗ್ಯ ಸುಧಾರಿಸುತ್ತದೆ ಮತ್ತು ಸಕ್ಕರೆ ರೋಗಕ್ಕೆ ಮುಖ್ಯ ಕಾರಣವಾದ ಬೊಜ್ಜನ್ನು ನಿಯಂತ್ರಿಸುತ್ತದೆ.
ಎರಡನೆಯದಾಗಿ, ಸಕ್ಕರೆ ರೋಗದಿಂದ ನಿಧಾನವಾಗಿ ಕಾಣಿಸಿಕೊಳ್ಳುವ ಅಡ್ಡಪರಿಣಾಮಗಳನ್ನು ನಿಯಂತ್ರಿಸುತ್ತದೆ.ಆದ್ದರಿಂದ, ತಪ್ಪದೆ ಕನಿಷ್ಠ 3೦ ನಿಮಿಷದ ವ್ಯಾಯಮ ಮಾಡಲೇಬೇಕು. ಉದ್ಯಾನವನದಲ್ಲಿ ಕೇವಲ ಬಿರುಸಾದ ನಡಿಗೆಯಾದರೂ ತೊಂದರೆಯಿಲ್ಲ.

ಆರೋಗ್ಯಕರವಾದ ಕೊಬ್ಬಿನಂಶವಿರುವ ಆಹಾರ ಮತ್ತು ಹಣ್ಣುಗಳನ್ನು ತಿನ್ನಬೇಕು
ಸಕ್ಕರೆ ರೋಗಕ್ಕೆ ಸಮತೋಲಿತ ಆಹಾರ ಅತಿಮುಖ್ಯ, ಆದರೆ ಸ್ವಲ್ಪ ಸಣ್ಣ ಪುಟ್ಟ ಬದಲಾವಣೆ ಅಗತ್ಯವಾಗಿದೆ. ಅಸಂಕೀರ್ಣ ಕಾರ್ಬೋಹೈಡ್ರೇಟ್ ಗಳಾದ ಮೈದಾ ಬ್ರೆಡ್, ಅನ್ನ, ಆಲೂಗಡ್ಡೆಗಳನ್ನು ತ್ಯಜಿಸಬೇಕು. ಸಂಕೀರ್ಣ ಆಹಾರಗಳದ ಸಂಪೂರ್ಣ ಗೋಧಿ ಧಾನ್ಯಗಳು, ಬೇಳೆ, ಕಾಳುಗಳ ಸೇವನೆಯನ್ನು ಆಹಾರದಲ್ಲಿ ಅಳವಡಿಸಿಕೊಳ್ಳಬೇಕು. ಅಷ್ಟೆ ಅಲ್ಲದೆ, ಆಹಾರದಲ್ಲಿ ಕಡಿಮೆ ಕೊಬ್ಬಿನಂಶವಿರುವ ಪ್ರೋಟೀನ್(ಚೀಸ್, ಮೊಟ್ಟೆ,ಮೊಸರು,ಸೊಯಾ),ಆರೋಗ್ಯಕರವಾದ ಕೊಬ್ಬಿನಂಶವಿರುವ ಅವಕಡೊ,ಒಣಹಣ್ಣುಗಳು,ಹೆಚ್ಚು ನಾರಿನಂಶವಿರುವ ತರಕಾರಿ,ಹಣ್ಣುಗಳನ್ನು(ಬ್ರೊಕೋಲಿ,ಬೆರ್ರಿಹಣ್ಣುಗಳು) ಸೇವಿಸಬೇಕು. ಆದರೆ ಕಿತ್ತಳೆ, ಮಾವು ಹಾಗು ಕಲ್ಲಂಗಡಿಯಂತಹ ಸಕ್ಕರೆ ಅಂಶ ಭರಿತ ಹಣ್ಣುಗಳ ಸೇವನೆ ವ್ಯರ್ಜ್ಯವಾಗಿದೆ.
ಮಧುಮೇಹ ನಿಯಂತ್ರಣಕ್ಕೆ, ಪ್ರಯತ್ನಿಸಿ ನೈಸರ್ಗಿಕ ಆಹಾರಗಳು


Click it and Unblock the Notifications