Latest Updates
-
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಮದುವೆಗೂ ಮುನ್ನ ಈ 48 ಗಂಟೆಗಳ ಚೆಕ್ಲಿಸ್ಟ್ ಮರೆಯದಿರಿ -
ಬಿಸಿಲ ಬೇಗೆಯಿಂದ ಪಾರಾಗಲು ಮನೆಯನ್ನು ತಂಪಾಗಿರಿಸುವ ಅದ್ಭುತ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ಈ ಪಾನೀಯಗಳೇ ಮದ್ದು! -
ಬಿಸಿಲ ಬೇಗೆಯಿಂದ ಪಾರಾಗಲು ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ವ್ಯಾಯಾಮದ ಸಮಯ ಬದಲಾಯಿಸಿ
ಮಧುಮೇಹಿಗಳು ಈ 5 ಡಿಟಾಕ್ಸ್ ಪಾನೀಯ ಕುಡಿದರೆ ಸಕ್ಕರೆಯಂಶ ನಿಯಂತ್ರಣದಲ್ಲಿಡಬಹುದು
ಭಾರತದಲ್ಲಿ ಮಧುಮೇಹಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ವಿಶ್ವದಲ್ಲಿಯೇ ಭಾರತ ಮಧುಮೇಹಿಗಳ ಸಂಖ್ಯೆಯಲ್ಲಿ ನಂ. 1 ಸ್ಥಾನದಲ್ಲಿದೆ. ಈಗಾಗಲೇ 80 ಮಿಲಿಯನ್ ಮಧುಮೇಹಿಗಳು ಭಾರತದಲ್ಲಿದ್ದಾರೆ. 2045ರಷ್ಟಿಗೆ 135 ಮಿಲಿಯನ್ ತಲುಪಲಿದೆ ಇದೆ ಎಂದು ಲೆಕ್ಕಾಚಾರ ಹಾಕಲಾಗಿದೆ.

ಮಧುಮೇಹ ಮಾರಕಕಾಯಿಲೆಯಲ್ಲ, ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಇದರಿಂದಾಗಿ ಅನೇಕ ಮಾರಕ ಕಾಯಿಲೆಗಳು ಬರುತ್ತದೆ. ಆದ್ದರಿಂದ ಮಧುಮೇಹ ಬಂದ ಮೇಲೆ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಬೇಕು. ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಆಹಾರಶೈಲಿ, ವ್ಯಾಯಾಮ ಸಹಾಯ ಮಾಡುತ್ತದೆ. ನಾವಿಲ್ಲಿ ಮಧುಮೇಹಿಗಳಿಗೆ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಕೆಲವೊಂದಿ ಡಿಟಾಕ್ಸ್ ಡಯಟ್ ಬಗ್ಗೆ ಹೇಳಲಾಗಿದೆ ನೋಡಿ:
ಮಧುಮೇಹದ ಲಕ್ಷಣಗಳು
1. ತುಂಬಾ ಬಾಯಾರಿಕೆಯಾಗುವುದು
2. ತುಂಬಾ ಹಸಿವು
3. ಇದ್ದಕ್ಕಿದ್ದಂತೆ ತೂಕ ಕಡಿಮೆಯಾಗುವುದು
4. ತುಂಬಾ ಸುಸ್ತು
5. ಕಣ್ಣುಗಳು ಮಂಕಾಗುವುದು
6. ಗಾಯವಾದರೆ ಬೇಗನೆ ಗುಣಮುಖವಾಗುವುದು
ಮಧುಮೇಹವನ್ನು ನಿಯಂತ್ರಿಸುವುದು ಹೇಗೆ?
ಮಧುಮೇಹ ಬಂದರೆ ಸಂಪೂರ್ನ ಗುಣಪಡಿಸಲು ಸಾಧ್ಯವಿಲ್ಲ, ಆದರೆ ನಿಯಂತ್ರಣದಲ್ಲಿಡಬೇಕಾಗುತ್ತದೆ. ನಿಯಂತ್ರಣದಲ್ಲಿಡಲು ನೀವು ನಿಮ್ಮ ಜೀವನಶೈಲಿಯಲ್ಲಿ ಬದಲಾವಣೆ ಮಾಡಬೇಕಾಗಿದೆ. ಮಾತ್ರೆ ಅಥವಾ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದರೆ ಅದರ ಜೊತೆಗೆ ಕೆಲವೊಂದು ಪಾನೀಯಗಳು ನಿಮ್ಮ ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಾಯ ಮಾಡಿತ್ತದೆ. ಆ ಪಾನೀಯಗಳಾವುವು ಎಂದು ನೋಡೋನ:
ಮಧುಮೇಹಿಗಳಿಗೆ ಈ ಪಾನೀಯಗಳು ಒಳ್ಳೆಯದು
ತುಳಸಿ ನೀರು
ತುಳಸಿ ನೀರು ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ತುಂಬಾನೇ ಸಹಕಾರಿ ಎಂಬುವುದು ನಿಮಗೆ ಗೊತ್ತೇ? ಮಧುಮೇಹಿಗಳು ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ತುಳಸಿ ನೀರು ಕುಡಿಯುವುದು ಒಳ್ಳೆಯದು. ನೀವೇನು ಮಾಡಬೇಕು ಅಂದರೆ 6-8 ತುಳಸಿ ಎಲೆ ನೀರಿಗೆ ಹಾಕಿ ಕುದಿಸಿ, ಸೋಸಿ ಆ ನೀರನ್ನು ಬಿಸಿ ಇರುವಾಗ ಅಥವಾ ಆರಿದ ಮೇಲೆ ಕುಡಿಯಬಹುದು.
ಶುಂಠಿ ನೀರು
ಶುಂಠಿಯನ್ನು ಹಲವು ಆರೋಗ್ಯ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಸುತ್ತೇವೆ, ಶುಂಠಿ ಬಳಸಿ ಮಧುಮೇಹ ಕೂಡ ನಿಯಂತ್ರಿಸಬಹುದು ಎಂಬುವುದು ಗೊತ್ತೇ? ಶುಂಠಿಯಲ್ಲಿ ರಕ್ತದಲ್ಲಿರುವ ಸಕ್ಕರೆಯಂಶ ನಿಯಂತ್ರಣದಲ್ಲಿಡುವ ಗುಣವಿದೆ. ನೀವೇನು ಮಾಡಬೇಕೆಂದರೆ ಸ್ವಲ್ಪ ಶುಂಠಿ ಜಜ್ಜಿ ನೀರಿನಲ್ಲಿ ಹಾಕಿ ಕುದಿಸಿ, ಸೋಸಿ ಕುಡಿಯಿರಿ. ನೆನಪಿಡಿ ತುಂಬಾ ಶುಂಠಿ ಬಳಸಿದರೆ ದೇಹ ಉಷ್ಣವಾಗಬಹುದು. ಶುಂಠಿಯನ್ನು ಮಿತಿಯಲ್ಲಿ ಬಳಸಿ.
ಮೆಂತೆ ನೀರು
ಮೆಂತೆ ನೀರು ಕೂಡ ಮಧುಮೇಹಿಗಳಿಗೆ ತುಂಬಾನೇ ಒಳ್ಳೆಯದು. ಎರಡು ಚಮಚ ಮೆಂತೆಯನ್ನು ರಾತ್ರಿ ನೀರಿನಲ್ಲಿ ನೆನೆಹಾಕಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೆಂತೆ ತಿನ್ನಿ, ಆ ನೀರನ್ನು ಕುಡಿಯಿರಿ. ಇನ್ನು ದಿನದಲ್ಲಿ ಊಟವಾದ ಬಳಿಕ ಸ್ವಲ್ಪ ಮೆಂತೆ ನೀರು ಕುದಿಸಿ ಕುಡಿದರೆ ಒಳ್ಳೆಯದು. ಇದರಿಂದ ರಕ್ತದಲ್ಲಿ ಸಕ್ಕರೆಯಂಶವನ್ನುನಿಯಂತ್ರಣದಲ್ಲಿಡಬಹುದು.
ಕಹಿಬೇವಿನ ನೀರು
ಕಹಿಬೇವು ಔಷಧೀಯ ಗುಣವನ್ನು ಹೊಂದಿರುವುದು ನಿಮಗೆ ಗೊತ್ತೇ ಇದೆ. ಇದು ನಿಮ್ಮ ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡುವಲ್ಲಿ ತುಂಬಾನೇ ಸಹಕಾರಿ. 8-10 ಕಹಿ ಬೇವಿನ ಎಲೆಯನ್ನು ನೀರಿನಲ್ಲಿ ಹಾಕಿ ಕುದಿಸಿ ಆ ನೀರು ಕುಡಿಯಿರಿ. ಇದರಿಂದ ರಕ್ತದಲ್ಲಿ ಸಕಕ್ರೆಯಂಶ ನಿಯಂತ್ರಣದಲ್ಲಿಡಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications










