Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಮಧುಮೇಹಿಗಳು ದಿನದಲ್ಲಿ ಎಷ್ಟು ಖರ್ಜೂರ ತಿನ್ನಬಹುದು?
ಖರ್ಜೂರ ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿರುವ ಒಂದು ಅದ್ಭುತವಾದ ಹಣ್ಣಾಗಿದೆ. ಖರ್ಜೂರದಲ್ಲಿ ಪ್ರೊಟೀನ್, ಕಾರ್ಬೋಹೈಟ್ರೇಟ್ಸ್, ನಾರಿನಂಶ, ಕೊಬ್ಬಿನಂಶ, ಕ್ಯಾಲ್ಸಿಯಂ, ಕಬ್ಬಿಣದಂಶ, ಸೋಡಿಯಂ, ವಿಟಮಿನ್ ಸಿ, ವಿಟಮಿನ್ ಎ ಇರುವುದರಿಂದ ಖರ್ಜೂರ ತಿಂದರೆ ಈ ಪೋಷಕಾಂಶಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬಹುದು.
ಖರ್ಜೂರ ತಿನ್ನುವುದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ, ವಿಪರೀತ ಹಸಿವನ್ನು ನಿಯಂತ್ರಿಸಬಹುದು, ಇದರಲ್ಲಿರುವ ನಾರಿನಂಶ ಜೀರ್ಣಕ್ರಿಯೆಗೆ ಸಹಾಯ ಮಾಡುವುದು, ಇನ್ನು ರಕ್ತಹೀನತೆ ಸಮಸ್ಯೆ ಹೋಗಲಾಡಿಸಲು ಈ ಖರ್ಜೂರ ತುಂಬಾ ಸಹಕಾರಿಯಾಗಿದೆ. ಇಷ್ಟೆಲ್ಲಾ ಆರೋಗ್ಯಕರ ಗುಣಗಳಿರುವ ಈ ಹಣ್ಣನ್ನು ಮಧುಮೇಹಿಗಳು ತಿನ್ನಬಹುದೇ? ಈ ಹಣ್ಣನ್ನು ತಿನ್ನುವುದರಿಂದ ಅವರ ದೇಹದ ಮೇಲೆ ಬೀರುವ ಪ್ರಭಾವ ಏನು ಎಂಬುವುದನ್ನು ತಿಳಿಯೋಣ ಬನ್ನಿ:

ಮಧುಮೇಹ ಎನ್ನುವುದು ಪ್ರಮುಖವಾಗಿ ಜೀವನಶೈಲಿಯಿಂದ ಬರುವ ಕಾಯಿಲೆ ಆಗಿದೆ. ಮಧುಮೇಹ ಕಾಯಿಲೆ ಬಂದರೆ ಅದನ್ನು ನಿಯಂತ್ರಣದಲ್ಲಿ ಇಡಬಹುದೇ ಹೊರತು ಅದರಿಂದ ಸಂಪೂರ್ಣ ಗುಣಮುಖರಾಗಲು ಸಾಧ್ಯವಿಲ್ಲ. ಅದ್ದರಿಂದ ಮಧುಮೇಹಿಗಳು ತಾವು ತಿನ್ನುವ ಆಹಾರದ ಕಡೆ ಹೆಚ್ಚಿನ ಗಮನ ಕೊಡಬೇಕಾಗುತ್ತದೆ. ದೇಹದಲ್ಲಿ ಸಕ್ಕರೆಯಂಶವನ್ನು ಹೆಚ್ಚಿಸುವ ಆಹಾರಗಳಿಂದ ದೂರವಿರಬೇಕು.
ಆದರೆ ಕೆಲವೊಂದು ಸಿಹಿ ಹಣ್ಣುಗಳನ್ನು ಮಿತಿಯಲ್ಲಿ ತಿಂದರೆ ಏನು ಆಗುವುದಿಲ್ಲ. 2002ರಲ್ಲಿ ನಡೆಸಿದ ಸಂಶೋಧನೆಯು ಮಧುಮೇಹಿಗಳು ಖರ್ಜೂರವನ್ನು ತಿಂದರೆ ಅನೇಕ ಆರೋಗ್ಯಕರ ಗುಣಗಳನ್ನು ಪಡೆಯಬಹುದು ಎಂದು ಹೇಳಿದೆ. ಖರ್ಜೂರ ತಿನ್ನುವುದರಿಂದ ಮಧುಮೇಹಿಗಳಲ್ಲಿ ಗ್ಲೈಸೆಮಿಕ್ ಹಾಗೂ ಲಿಪಿಡ್ ಅನ್ನು ನಿಯಂತ್ರಣದಲ್ಲಿಡಬಹುದಾಗಿದೆ.
ಮಧುಮೇಹಿಗಳು ಖರ್ಜೂರವನ್ನು ಇತರ ಆಹಾರಗಳೂ ಜತೆ ಸೇವಿಸುವ ಬದಲು ಹಾಗೇ ತಿನ್ನುವುದು, ಇನ್ನು ಪ್ಲೇನ್ ಯೋಗರ್ಟ್ ಜತೆ ಕೂಡ ತಿನ್ನುವುದು ಒಳ್ಳೆಯದು ಎಂದು ಯೂರೋಪಿಯನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷಿಯನಲ್ಲಿ ಪ್ರಕಟವಾದ ಅಧ್ಯಯನ ಲೇಖನದಲ್ಲಿ ಹೇಳಲಾಗಿದೆ. ಈ ರೀತಿ ತಿಂದರೆ ಗ್ಲೈಸಮಿಕ್ ಹಾಗೂ ಲಿಪಿಡ್ ಪ್ರಮಾಣವನ್ನು ನಿಯಂತ್ರಣದಲ್ಲಿಡಬಹುದಾಗಿದೆ.
2011ರ ಅಧ್ಯಯನ ಪ್ರಕಾರ ಖರ್ಜೂರವನ್ನು ಮಿತಿಯಲ್ಲಿ ತಿನ್ನುವುದರಿಂದ ಮಧುಮೇಹಿಗಳು ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವುದರ ಜತೆಗೆ ಅದರ ಇತರ ಪೋಷಕಾಂಶಗಳ ಪ್ರಯೋಜನವನ್ನು ಪಡೆಯಬಹುದು ಎಂದು ಹೇಳಿದೆ. ಸಮತೋಲನ ಆಹಾರ ಜತೆಗೆ ಖರ್ಜೂರವನ್ನು ಮಿತಿಯಲ್ಲಿ ತಿನ್ನುವುದರಿಂದ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ ಎಂದು ಅಧ್ಯಯನ ಹೇಳಿದೆ.
ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವ ಅಹಾರಗಳನ್ನು ಮಧುಮೇಹಿಗಳು ಸೆವಿಸಬೇಕು. ಖರ್ಜೂರದಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಪ್ರಮಾಣ ಕಡಿಮೆ ಇದ್ದು, ನಾರಿನಂಶ ಅಧಿಕವಿರುವುದರಿಂದ ಇದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ ಎಂದು ಇಂಟರ್ನ್ಯಾಷನಲ್ ಜರ್ನಲ್ ಆಫ್ ಕ್ಲಿನಿಕಲ್ ಅಂಡ್ ಎಕ್ಸ್ಪೆರಿಮೆಂಟಲ್ ಜರ್ನಲ್ ಆಪ್ ಕ್ಲಿನಿಕಲ್ ಅಂಡ್ ಎಕ್ಸ್ಪೆರಿಮೆಂಟಲ್ ಮೆಡಿಸಿನ್ ವರದಿ ಹೇಳಿದೆ.
ಮತ್ತೊಂದು ಅಧ್ಯಯನದಲ್ಲಿ 10 ಮಧುಮೇಹಿಗಳಿಗೆ ಪ್ರತಿದಿನ 100ಗ್ರಾಂ ಖರ್ಜೂರ ತಿನ್ನಲು ನೀಡಲಾಗಿತ್ತು ಈ ರೀತಿ 4 ವಾರಗಳು ನಿಡಲಾಯಿತು, ಆ ಬಳಿಕ ಅವರ ರಕ್ತವನ್ನು ಪರೀಕ್ಷಿಸಿದಾಗ ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಯೇ ಇದ್ದದ್ದು ತಿಳಿದು ಬಂತು ಎಂದು ಜರ್ನಲ್ ಆಫ್ ಅಗ್ರಿಕಲ್ಚರ್ ಅಂಡ್ ಫುಡ್ ಕೆಮಿಸ್ಟ್ರಿನಲ್ಲಿ ಪ್ರಕಟವಾದ ಅಧ್ಯಯನ ಲೇಖನದಲ್ಲಿ ವಿವರಿಸಲಾಗಿದೆ.
ದಿನಕ್ಕೆ ಎಷ್ಟು ಖರ್ಜೂರ ತಿನ್ನಬಹುದು?
ಮಧುಮೇಹಿಗಳು ದಿನದಲ್ಲಿ 2-3 ಖರ್ಜೂರ ತಿನ್ನಬಹುದಾಗಿದೆ. ಆದ್ದರಿಂದ ಖರ್ಜೂರದಲ್ಲಿ ಸಕ್ಕರೆಯಂಶವಿದೆ, ಕ್ಯಾಲೋರಿ ಇದೆ ಎಂದು ತಲೆಕೆಡಿಸಿಕೊಳ್ಳದೆ ಮಿತಿಯಲ್ಲಿ ತಿಂದು ಖರ್ಜೂರದ ಆರೋಗ್ಯಕರ ಗುಣಗಳ ಲಾಭವನ್ನು ಪಡೆಯಬಹುದಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications