Latest Updates
-
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ! -
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ!
ಮಧುಮೇಹ ನಿಯಂತ್ರಣಕ್ಕೆ ಮಾವಿನ ಎಲೆ, ಕಹಿಬೇವು ಹೇಗೆ ಬಳಸಬೇಕು?
ವಿಶ್ವದಲ್ಲಿಯೇ ಮಧುಮೇಹಿಗಳು ಅಧಿಕ ಹೊಂದಿರುವ ದೇಶ ಭಾರತವಾಗಿದೆ. ಈ ಜೀವನಶೈಲಿ ಸಮಸ್ಯೆ ಅನೇಕರನ್ನು ಕಾಡುತ್ತಿದೆ. ಕೆಲವರಿಗೆ ವಂಶಪಾರಂಪರ್ಯವಾಗಿ ಬಂದರೆ ಇನ್ನು ಕೆಲವರಲ್ಲಿ ಬದಲಾದ ಜೀವನಶೈಲಿಯಿಂದಾಗಿ ಮಧುಮೇಹದ ಸಮಸ್ಯೆ ಉಂಟಾಗುತ್ತಿದೆ.
ಮಧುಮೇಹ ಬಂದ್ರೆ ಕಾಯಿಲೆಯನ್ನು ನಿಯಂತ್ರಿಸಬಹುದೇ ಹೊರತು ಇದರಿಂದ ಸಂಪೂರ್ಣವಾಗಿ ಗುಣಮುಖರಾಗಲು ಸಾಧ್ಯವಿಲ್ಲ. ಮಧುಮೇಹಿಗಳು ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಟ್ಟರೆ ಇತರರಂತೆ ಸಾಮಾನ್ಯ ಬದುಕು ಸಾಗಿಸಬಹುದು.
ಮಧುಮೇಹವನ್ನು ನಿಯಂತ್ರಣದಲ್ಲಿ ಇಡುವಲ್ಲಿ ಗಿಡಮೂಲಿಕೆಗಳು ಪರಿಣಾಮಕಾರಿಯೆಂದು ಆಯುರ್ವೇದದಲ್ಲಿ ಹೇಳಲಾಗಿದೆ. ನೈಸರ್ಗಿಕವಾಗಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಹಲವಾರು ವಿಧಾನಗಳಿವೆ. ನಾವಿಲ್ಲಿ ಮಾವಿನ ಎಲೆ ಹಾಗೂ ಕಹಿಬೇವು ಬಳಸಿ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಿಸುವುದು ಹೇಗೆ ಎಂದು ಹೇಳಿದ್ದೇವೆ ನೋಡಿ:

ಮಾವಿನ ಎಲೆ
ಮಾವಿನ ಕಾಯಿ, ಮಾವಿನ ಹಣ್ಣಿನ ರುಚಿ ನಮಗೆಲ್ಲಾ ಗೊತ್ತು ಇನ್ನು ಎಲೆಯನ್ನು ತೋರಣಕ್ಕೆ ಬಳಸುತ್ತೇವೆ, ಆದರೆ ಎಲೆಯಲ್ಲಿ ಅದ್ಭುತ ಔಷಧೀಯ ಗುಣಗಳಿದ್ದು ಈ ಎಲೆಯನ್ನು ಔಷಧವಾಗಿ ಹೇಗೆ ಬಳಸಬೇಕೆಂದು ಕೆಲವರಿಗಷ್ಟೇ ಗೊತ್ತಿರುತ್ತದೆ.
ಮಾವಿನ ಎಲೆಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಇದ್ದು ಇದನ್ನು ಮಧುಮೇಹ ನಿಯಂತ್ರಣಕ್ಕೆ ಎರಡು ರೀತಿಯಲ್ಲಿ ಬಳಸಬಹುದು.

ಬಳಸುವ ವಿಧಾನ
ವಿಧಾನ 1
ಮಾವಿನ ಎಲೆಯನ್ನು ಅರಿದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅರ್ಧ ಚಮಚದಷ್ಟು ಪ್ರತಿದಿನ ಸೇವಿಸಬೇಕು. ಹೀಗೆ ಮಾಡುವುದರಿಂದ ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿರುತ್ತದೆ.
ವಿಧಾನ 2
6-10 ಮಾವಿನ ಎಲೆಯನ್ನು ಒಂದು ಲೋಟ ನಿರಿನಲ್ಲಿ ಹಾಕಿಡಿ, ಆ ನೀರನ್ನು ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.

ಕಹಿಬೇವು
ಮಧುಮೇಹಿಗಳಿಗೆ ಕಹಿಬೇವು ತುಂಬಾನೇ ಒಳ್ಳೆಯದು. ಕಹಿಬೇವನ್ನು ಈ ರೀತಿ ಮಬಳಸಿದರೆ ಮಧುಮೇಹ ನಿಯಂತ್ರಣದಲ್ಲಿಡಬಹುದು.
* ಕಹಿಬೇವಿನ ಎಲೆಯನ್ನು ಹಿಸುಕಿ ಪುಡಿ-ಪುಡಿ ಮಾಡಿ.
* ಒಂದು ಪ್ಯಾನ್ನಲ್ಲಿ 2 ಲೋಟ ನೀರು ಹಾಕಿ ಅದರಲ್ಲಿ ಈ ಎಲೆ ಹಾಕಿ ಕುದಿಸಿ.
* ಕುದಿಸಿದ ನೀರನ್ನು ಸೋಸಿ ಈ ನೀರನ್ನು ಕುಡಿಯಬಹುದು.
ಇನ್ನು ಕಹಿ ಬೇವಿನ ಎಲೆ ಹಾಗೇ ತಿಂದರು ಕೂಡ ಆರೋಗ್ಯಕ್ಕೆ ಒಳ್ಳೆಯದು.
ಸೂಚನೆ: ನೀವು ಈ ವಿಧಾನಗಳನ್ನು ತಯಾರಿಸುವ ಮುನ್ನ ನಿಮ್ಮ ವೈದ್ಯರ ಅಥವಾ ಆಯುರ್ವೇದ ವೈದ್ಯರ ಸಲಹೆ ಪಡೆಯಿರಿ.



Click it and Unblock the Notifications