Just In
- just now 2024 ಏಪ್ರಿಲ್ ತಿಂಗಳ ರಾಶಿಫಲ: 12 ರಾಶಿಗಳ ವೃತ್ತಿ, ಆರ್ಥಿಕ, ಸಂಬಂಧ, ಆರೋಗ್ಯ ಭವಿಷ್ಯ
- 51 min ago ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- 2 hrs ago ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- 4 hrs ago ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
Don't Miss
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- News ಬೆಂಗಳೂರಿನಲ್ಲಿ 647 ಎಕರೆಯಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪಿಸಲು ಕೆಐಎಡಿಬಿ ಯೋಜನೆ
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಧುಮೇಹ ನಿಯಂತ್ರಣಕ್ಕೆ ಮಾವಿನ ಎಲೆ, ಕಹಿಬೇವು ಹೇಗೆ ಬಳಸಬೇಕು?
ವಿಶ್ವದಲ್ಲಿಯೇ ಮಧುಮೇಹಿಗಳು ಅಧಿಕ ಹೊಂದಿರುವ ದೇಶ ಭಾರತವಾಗಿದೆ. ಈ ಜೀವನಶೈಲಿ ಸಮಸ್ಯೆ ಅನೇಕರನ್ನು ಕಾಡುತ್ತಿದೆ. ಕೆಲವರಿಗೆ ವಂಶಪಾರಂಪರ್ಯವಾಗಿ ಬಂದರೆ ಇನ್ನು ಕೆಲವರಲ್ಲಿ ಬದಲಾದ ಜೀವನಶೈಲಿಯಿಂದಾಗಿ ಮಧುಮೇಹದ ಸಮಸ್ಯೆ ಉಂಟಾಗುತ್ತಿದೆ.
ಮಧುಮೇಹ ಬಂದ್ರೆ ಕಾಯಿಲೆಯನ್ನು ನಿಯಂತ್ರಿಸಬಹುದೇ ಹೊರತು ಇದರಿಂದ ಸಂಪೂರ್ಣವಾಗಿ ಗುಣಮುಖರಾಗಲು ಸಾಧ್ಯವಿಲ್ಲ. ಮಧುಮೇಹಿಗಳು ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಟ್ಟರೆ ಇತರರಂತೆ ಸಾಮಾನ್ಯ ಬದುಕು ಸಾಗಿಸಬಹುದು.
ಮಧುಮೇಹವನ್ನು ನಿಯಂತ್ರಣದಲ್ಲಿ ಇಡುವಲ್ಲಿ ಗಿಡಮೂಲಿಕೆಗಳು ಪರಿಣಾಮಕಾರಿಯೆಂದು ಆಯುರ್ವೇದದಲ್ಲಿ ಹೇಳಲಾಗಿದೆ. ನೈಸರ್ಗಿಕವಾಗಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಹಲವಾರು ವಿಧಾನಗಳಿವೆ. ನಾವಿಲ್ಲಿ ಮಾವಿನ ಎಲೆ ಹಾಗೂ ಕಹಿಬೇವು ಬಳಸಿ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಿಸುವುದು ಹೇಗೆ ಎಂದು ಹೇಳಿದ್ದೇವೆ ನೋಡಿ:
ಮಾವಿನ ಎಲೆ
ಮಾವಿನ ಕಾಯಿ, ಮಾವಿನ ಹಣ್ಣಿನ ರುಚಿ ನಮಗೆಲ್ಲಾ ಗೊತ್ತು ಇನ್ನು ಎಲೆಯನ್ನು ತೋರಣಕ್ಕೆ ಬಳಸುತ್ತೇವೆ, ಆದರೆ ಎಲೆಯಲ್ಲಿ ಅದ್ಭುತ ಔಷಧೀಯ ಗುಣಗಳಿದ್ದು ಈ ಎಲೆಯನ್ನು ಔಷಧವಾಗಿ ಹೇಗೆ ಬಳಸಬೇಕೆಂದು ಕೆಲವರಿಗಷ್ಟೇ ಗೊತ್ತಿರುತ್ತದೆ.
ಮಾವಿನ ಎಲೆಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಇದ್ದು ಇದನ್ನು ಮಧುಮೇಹ ನಿಯಂತ್ರಣಕ್ಕೆ ಎರಡು ರೀತಿಯಲ್ಲಿ ಬಳಸಬಹುದು.
ಬಳಸುವ ವಿಧಾನ
ವಿಧಾನ 1
ಮಾವಿನ ಎಲೆಯನ್ನು ಅರಿದು, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅರ್ಧ ಚಮಚದಷ್ಟು ಪ್ರತಿದಿನ ಸೇವಿಸಬೇಕು. ಹೀಗೆ ಮಾಡುವುದರಿಂದ ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿರುತ್ತದೆ.
ವಿಧಾನ 2
6-10 ಮಾವಿನ ಎಲೆಯನ್ನು ಒಂದು ಲೋಟ ನಿರಿನಲ್ಲಿ ಹಾಕಿಡಿ, ಆ ನೀರನ್ನು ಬೆಳಗ್ಗೆ ಎದ್ದು ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ.
ಕಹಿಬೇವು
ಮಧುಮೇಹಿಗಳಿಗೆ ಕಹಿಬೇವು ತುಂಬಾನೇ ಒಳ್ಳೆಯದು. ಕಹಿಬೇವನ್ನು ಈ ರೀತಿ ಮಬಳಸಿದರೆ ಮಧುಮೇಹ ನಿಯಂತ್ರಣದಲ್ಲಿಡಬಹುದು.
* ಕಹಿಬೇವಿನ ಎಲೆಯನ್ನು ಹಿಸುಕಿ ಪುಡಿ-ಪುಡಿ ಮಾಡಿ.
* ಒಂದು ಪ್ಯಾನ್ನಲ್ಲಿ 2 ಲೋಟ ನೀರು ಹಾಕಿ ಅದರಲ್ಲಿ ಈ ಎಲೆ ಹಾಕಿ ಕುದಿಸಿ.
* ಕುದಿಸಿದ ನೀರನ್ನು ಸೋಸಿ ಈ ನೀರನ್ನು ಕುಡಿಯಬಹುದು.
ಇನ್ನು ಕಹಿ ಬೇವಿನ ಎಲೆ ಹಾಗೇ ತಿಂದರು ಕೂಡ ಆರೋಗ್ಯಕ್ಕೆ ಒಳ್ಳೆಯದು.
ಸೂಚನೆ: ನೀವು ಈ ವಿಧಾನಗಳನ್ನು ತಯಾರಿಸುವ ಮುನ್ನ ನಿಮ್ಮ ವೈದ್ಯರ ಅಥವಾ ಆಯುರ್ವೇದ ವೈದ್ಯರ ಸಲಹೆ ಪಡೆಯಿರಿ.