Latest Updates
-
ಪರಿಸರ ಸ್ನೇಹಿ ಡೇಟಿಂಗ್: ₹300 ರೊಳಗೆ ನಿಮ್ಮ ಪ್ರೀತಿಯನ್ನು ಹಸಿರಾಗಿಸುವ 12 ಅದ್ಭುತ ಐಡಿಯಾಗಳು! -
ಬೆಂಗಳೂರು ಮಳೆ: ಮನೆಯಲ್ಲಿ ನೀರು ನುಗ್ಗಿದೆಯೇ? ತೇವ ಮತ್ತು ದುರ್ವಾಸನೆ ಹೋಗಲಾಡಿಸಲು ಇಲ್ಲಿವೆ ಸರಳ ಟಿಪ್ಸ್! -
ಡೆಂಗ್ಯೂ ಆತಂಕ: ಮಧುಮೇಹಿಗಳು ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿದೆ ವಿಶೇಷ ಆಹಾರ ಪ್ಲಾನ್ -
iPhone 18 ಸೇಲ್: ನಿಮ್ಮ ಹೊಸ ಫೋನ್ ಪಡೆಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ದೆಹಲಿ-ಎನ್ಸಿಆರ್ ಮಳೆ ಎಚ್ಚರಿಕೆ: ಹೊರಗೆ ಹೋಗುವ ಬದಲು ಮನೆಯಲ್ಲೇ ಮಾಡಿ 12 ನಿಮಿಷದ ವರ್ಕೌಟ್! -
ಸೆಪ್ಟೆಂಬರ್ 15ರ ಲವ್ ರಾಶಿಫಲ: ನಿಮ್ಮ ಸಂಗಾತಿಯ ಮನ ಗೆಲ್ಲಲು ಈ 2 ನಿಮಿಷದ ಸೂತ್ರ ಬಳಸಿ! -
ಮಳೆಗಾಲದ ಎಚ್ಚರಿಕೆ: ಮುಂಬೈ-ಪುಣೆಯಲ್ಲಿ ಮನೆ ಸೋರಿಕೆ ತಡೆಯಲು 30 ನಿಮಿಷದ ಸಿಂಪಲ್ ಟಿಪ್ಸ್ -
ಅಡುಗೆಮನೆ ಬಜೆಟ್ ಏರಿಕೆ: ₹30 ಕ್ಕಿಂತ ಕಡಿಮೆ ವೆಚ್ಚದಲ್ಲಿ ಆರೋಗ್ಯಕರ ಪ್ರೋಟೀನ್ ಆಹಾರ ಪಡೆಯುವುದು ಹೇಗೆ? -
iOS 27 ಅಪ್ಡೇಟ್ ನಂತರ ಫೋನ್ ಬ್ಯಾಟರಿ ಬೇಗ ಖಾಲಿಯಾಗುತ್ತಿದೆಯೇ? ಗಾಬರಿಯಾಗಬೇಡಿ, ಈ ಟಿಪ್ಸ್ ಫಾಲೋ ಮಾಡಿ! -
ಗಣೇಶ ವಿಸರ್ಜನೆ: ಮೂರ್ತಿ ಹೊರುವಾಗ ಬೆನ್ನು ನೋವು ಕಾಡದಿರಲು ಈ ಸರಳ ಟಿಪ್ಸ್ ಪಾಲಿಸಿ
ಕಿಡ್ನಿ ಬೀನ್ಸ್ ಮಧುಮೇಹಿಗಳಿಗೆ ತುಂಬಾನೇ ಒಳ್ಳೆಯದು, ಏಕೆ ಗೊತ್ತಾ?
ಮಧುಮೇಹ ಬಂದರೆ ಯಾವ ಆಹಾರ ತಿನ್ನಬೇಕು, ಯಾವುದು ತಿನ್ನಬಾರದು ಎಂಬ ಗೊಂದಲ ಅನೇಕರಲ್ಲಿದೆ. ಮಧುಮೇಹ ಬಂದ ಮೇಲೆ ರುಚಿ ರುಚಿಯಾದ ಆಹಾರಗಳನ್ನು ತಿನ್ನಲು ಸಾಧ್ಯವಿಲ್ಲ, ಬರೀ ಪಥ್ಯದಂಥ ಆಹಾರಗಳನ್ನು ಸೇವಿಸಬೇಕು ಎಂದು ಯೋಚಿಸುತ್ತಾರೆ, ಹಾಗೇನೂ ಇಲ್ಲ ಮಧುಮೇಹ ಬಂದ ಮೇಲೂ ನೀವೂ ರುಚಿಯಾದ ಆಹಾರಗಳನ್ನು ಸವಿಯಬಹುದು, ಆದರೆ ನಿಮ್ಮ ಆಹಾರಕ್ರಮದಲ್ಲಿ ಸಕ್ಕರೆಯಂಶ ಹೆಚ್ಚು ಮಾಡದಂಥ ಆಹಾರಗಳನ್ನು ಸೇವಿಸಬೇಕು. ಅಂಥದ್ದೊಂದು ಆಹಾರದ ಬಗ್ಗೆ ನಾವಿಲ್ಲಿ ಹೇಳುತ್ತಿದ್ದೇವೆ, ಅದೇ ರಾಜ್ಮಾ...
ರಾಜ್ಮಾದಿಂದ ತಯಾರಿಸಿದ ಗ್ರೇವಿಯನ್ನು ಚಪಾತಿ ಅಥವಾ ರಾಗಿ ರೊಟ್ಟಿ, ಜೋಳದ ರೊಟ್ಟಿ ಇವುಗಳ ಜೊತೆ ತಿನ್ನಲು ಎಷ್ಟು ರುಚಿಯಾಗಿರುತ್ತೆ ಅಲ್ವಾ? ಕಿಡ್ನಿ ಬೀನ್ಸ್ ಅಥವಾ ರಾಜ್ಮಾವನ್ನು ನಿಮ್ಮ ಆಹಾರಕ್ರಮದಲ್ಲಿ ಧೈರ್ಯವಾಗಿ ಸೇರಿಸಬಹುದು, ಏಕೆಂದರೆ ಇದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಿಸುವಲ್ಲಿ ತುಂಬಾನೇ ಸಹಕಾರಿ.
ಹೌದು ಮಧುಮೇಹಿಗಳು ತಮ್ಮಆಹಾರಕ್ರಮದಲ್ಲಿ ಸೇರಿಸಬಹುದಾದ ಅತ್ಯುತ್ತಮವಾದ ಆಹಾರಗಳಲ್ಲಿ ಕಿಡ್ನಿ ಬೀನ್ಸ್ ಕೂಡ ಒಂದಾಗಿದೆ. ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವುದರಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಿಸುವುದಿಲ್ಲ.
ಕಿಡ್ನಿ ಬೀನ್ಸ್ ಈ ಕಾರಣಕ್ಕೆ ಮಧುಮೇಹಿಗಳಿಗೆ ತುಂಬಾ ಒಳ್ಳೆಯದು:

1. ಅಧಿಕ ನಾರಿನಂಶ
ಕಿಡ್ನಿ ಬೀನ್ಸ್ನಲ್ಲಿ ನಾರಿನಂಶ ಅಧಿಕವಿದೆ, ಇದರಲ್ಲಿ ಕೊಬ್ಬಿನಂಶ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಇದೆ. 100 ಗ್ರಾಂ ಕಿಡ್ನಿ ಬೀನ್ಸ್ನಲ್ಲಿ 6.4 ಗ್ರಾಂ ನಾರಿನಂಶವಿದೆ. ಇದು ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟುತ್ತೆ ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ. ನಾರಿನಂಶ ಜೀರ್ಣಕ್ರಿಯೆಗೂ ಒಳ್ಳೆಯದು.

2. ಅಧಿಕ ಪ್ರೊಟೀನ್ ಇದೆ
ಅಮೆರಿಕನ್ ಡಯಾಬಿಟಿಸ್ ಅಸೋಸಿಯೇಷನ್ ಮಧುಮೇಹಿಗಳು ಪ್ರೊಟೀನ್ ಅಧಿಕವಿರುವ ಆಹಾರ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತದೆ. ಒಂದು ಕಪ್ ಕಿಡ್ನಿ ಬೀನ್ಸ್ ತಿಂದರೆ 14 ಗ್ರಾಣನಷ್ಟು ಪ್ರೊಟೀನ್ ದೊರೆಯುವುದು. ಅಲ್ಲದೆ ರಾಜ್ಮಾ ಅಥವಾ ಕಿಡ್ನಿ ಬೀನ್ಸ್ ತಿಂದರೆ ಬೇಗನೆ ಹಸಿವು ಉಂಟಾಗಲ್ಲ.

3. ಪೊಟಾಷ್ಯಿಯಂ ಅಧಿಕವಿದೆ
ಮಧುಮೇಹಿಗಳಿಗೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು. ಆದರೆ ರಾಜ್ಮಾದಲ್ಲಿ ಪೊಟಾಷ್ಯಿಯಂ ಅಧಿಕವಿರುವುದರಿಂದ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಗಟ್ಟುತ್ತೆ, ಹೃದಯ ಆರೋಗ್ಯವನ್ನು ವೃದ್ಧಿಸುತ್ತೆ, ಹೃದಯಾಘಾತದ ಸಾಧ್ಯತೆ ಕಡಿಮೆ ಮಾಡುತ್ತೆ. ಅಲ್ಲದೆ ಸೋಡಿಯಂನಿಂದ ಉಂಟಾಗುವ ಪರಿಣಾಮವನ್ನು ತಗ್ಗಿಸಲು ಇದು ಸಹಕಾರಿ.

4. ಕಾರ್ಬೋಹೈಡ್ರೇಟ್ಸ್
ಕಿಡ್ನಿ ಬೀನ್ಸ್ನಲ್ಲಿ ಕಾರ್ಬೋಹೈಡ್ರೇಟ್ಸ್ ಇದ್ದರೂ ಅದು ನಿಧಾನಕ್ಕೆ ಬಿಡುಗಡೆಯಾಗುವುದರಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚುವುದಿಲ್ಲ. ಕಾರ್ಬ್ಸ್, ಪ್ರೊಟೀನ್, ನಾರಿನಂಶ ಇವೆಲ್ಲಾ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಅಲ್ಲದೆ ಬೇಗನೆ ಹಸಿವು ಉಂಟಾಗುವುದಿಲ್ಲ.

5. ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದೆ
ಮಧುಮೇಹಿಗಳು ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಆಹಾರಗಳನ್ನು ಸೇವಿಸಬೇಕು. ಕಿಡ್ನಿ ಬೀನ್ಸ್ನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು, ನಾರಿನಂಶ ಅಧಿಕವಿರುವುದರಿಂದ ಮಧುಮೇಹಿಗಳು ತಮ್ಮ ಆಹಾರಕ್ರಮದಲ್ಲಿ ಸೇರಿಸಬಹುದಾದ ರುಚಿಕರವಾದ ಆಹಾರ ಇದಾಗಿದೆ.



Click it and Unblock the Notifications
