Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ಕಿಡ್ನಿ ಬೀನ್ಸ್ ಮಧುಮೇಹಿಗಳಿಗೆ ತುಂಬಾನೇ ಒಳ್ಳೆಯದು, ಏಕೆ ಗೊತ್ತಾ?
ಮಧುಮೇಹ ಬಂದರೆ ಯಾವ ಆಹಾರ ತಿನ್ನಬೇಕು, ಯಾವುದು ತಿನ್ನಬಾರದು ಎಂಬ ಗೊಂದಲ ಅನೇಕರಲ್ಲಿದೆ. ಮಧುಮೇಹ ಬಂದ ಮೇಲೆ ರುಚಿ ರುಚಿಯಾದ ಆಹಾರಗಳನ್ನು ತಿನ್ನಲು ಸಾಧ್ಯವಿಲ್ಲ, ಬರೀ ಪಥ್ಯದಂಥ ಆಹಾರಗಳನ್ನು ಸೇವಿಸಬೇಕು ಎಂದು ಯೋಚಿಸುತ್ತಾರೆ, ಹಾಗೇನೂ ಇಲ್ಲ ಮಧುಮೇಹ ಬಂದ ಮೇಲೂ ನೀವೂ ರುಚಿಯಾದ ಆಹಾರಗಳನ್ನು ಸವಿಯಬಹುದು, ಆದರೆ ನಿಮ್ಮ ಆಹಾರಕ್ರಮದಲ್ಲಿ ಸಕ್ಕರೆಯಂಶ ಹೆಚ್ಚು ಮಾಡದಂಥ ಆಹಾರಗಳನ್ನು ಸೇವಿಸಬೇಕು. ಅಂಥದ್ದೊಂದು ಆಹಾರದ ಬಗ್ಗೆ ನಾವಿಲ್ಲಿ ಹೇಳುತ್ತಿದ್ದೇವೆ, ಅದೇ ರಾಜ್ಮಾ...
ರಾಜ್ಮಾದಿಂದ ತಯಾರಿಸಿದ ಗ್ರೇವಿಯನ್ನು ಚಪಾತಿ ಅಥವಾ ರಾಗಿ ರೊಟ್ಟಿ, ಜೋಳದ ರೊಟ್ಟಿ ಇವುಗಳ ಜೊತೆ ತಿನ್ನಲು ಎಷ್ಟು ರುಚಿಯಾಗಿರುತ್ತೆ ಅಲ್ವಾ? ಕಿಡ್ನಿ ಬೀನ್ಸ್ ಅಥವಾ ರಾಜ್ಮಾವನ್ನು ನಿಮ್ಮ ಆಹಾರಕ್ರಮದಲ್ಲಿ ಧೈರ್ಯವಾಗಿ ಸೇರಿಸಬಹುದು, ಏಕೆಂದರೆ ಇದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಿಸುವಲ್ಲಿ ತುಂಬಾನೇ ಸಹಕಾರಿ.
ಹೌದು ಮಧುಮೇಹಿಗಳು ತಮ್ಮಆಹಾರಕ್ರಮದಲ್ಲಿ ಸೇರಿಸಬಹುದಾದ ಅತ್ಯುತ್ತಮವಾದ ಆಹಾರಗಳಲ್ಲಿ ಕಿಡ್ನಿ ಬೀನ್ಸ್ ಕೂಡ ಒಂದಾಗಿದೆ. ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವುದರಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಿಸುವುದಿಲ್ಲ.
ಕಿಡ್ನಿ ಬೀನ್ಸ್ ಈ ಕಾರಣಕ್ಕೆ ಮಧುಮೇಹಿಗಳಿಗೆ ತುಂಬಾ ಒಳ್ಳೆಯದು:

1. ಅಧಿಕ ನಾರಿನಂಶ
ಕಿಡ್ನಿ ಬೀನ್ಸ್ನಲ್ಲಿ ನಾರಿನಂಶ ಅಧಿಕವಿದೆ, ಇದರಲ್ಲಿ ಕೊಬ್ಬಿನಂಶ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಇದೆ. 100 ಗ್ರಾಂ ಕಿಡ್ನಿ ಬೀನ್ಸ್ನಲ್ಲಿ 6.4 ಗ್ರಾಂ ನಾರಿನಂಶವಿದೆ. ಇದು ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟುತ್ತೆ ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ. ನಾರಿನಂಶ ಜೀರ್ಣಕ್ರಿಯೆಗೂ ಒಳ್ಳೆಯದು.

2. ಅಧಿಕ ಪ್ರೊಟೀನ್ ಇದೆ
ಅಮೆರಿಕನ್ ಡಯಾಬಿಟಿಸ್ ಅಸೋಸಿಯೇಷನ್ ಮಧುಮೇಹಿಗಳು ಪ್ರೊಟೀನ್ ಅಧಿಕವಿರುವ ಆಹಾರ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತದೆ. ಒಂದು ಕಪ್ ಕಿಡ್ನಿ ಬೀನ್ಸ್ ತಿಂದರೆ 14 ಗ್ರಾಣನಷ್ಟು ಪ್ರೊಟೀನ್ ದೊರೆಯುವುದು. ಅಲ್ಲದೆ ರಾಜ್ಮಾ ಅಥವಾ ಕಿಡ್ನಿ ಬೀನ್ಸ್ ತಿಂದರೆ ಬೇಗನೆ ಹಸಿವು ಉಂಟಾಗಲ್ಲ.

3. ಪೊಟಾಷ್ಯಿಯಂ ಅಧಿಕವಿದೆ
ಮಧುಮೇಹಿಗಳಿಗೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು. ಆದರೆ ರಾಜ್ಮಾದಲ್ಲಿ ಪೊಟಾಷ್ಯಿಯಂ ಅಧಿಕವಿರುವುದರಿಂದ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಗಟ್ಟುತ್ತೆ, ಹೃದಯ ಆರೋಗ್ಯವನ್ನು ವೃದ್ಧಿಸುತ್ತೆ, ಹೃದಯಾಘಾತದ ಸಾಧ್ಯತೆ ಕಡಿಮೆ ಮಾಡುತ್ತೆ. ಅಲ್ಲದೆ ಸೋಡಿಯಂನಿಂದ ಉಂಟಾಗುವ ಪರಿಣಾಮವನ್ನು ತಗ್ಗಿಸಲು ಇದು ಸಹಕಾರಿ.

4. ಕಾರ್ಬೋಹೈಡ್ರೇಟ್ಸ್
ಕಿಡ್ನಿ ಬೀನ್ಸ್ನಲ್ಲಿ ಕಾರ್ಬೋಹೈಡ್ರೇಟ್ಸ್ ಇದ್ದರೂ ಅದು ನಿಧಾನಕ್ಕೆ ಬಿಡುಗಡೆಯಾಗುವುದರಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚುವುದಿಲ್ಲ. ಕಾರ್ಬ್ಸ್, ಪ್ರೊಟೀನ್, ನಾರಿನಂಶ ಇವೆಲ್ಲಾ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಅಲ್ಲದೆ ಬೇಗನೆ ಹಸಿವು ಉಂಟಾಗುವುದಿಲ್ಲ.

5. ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದೆ
ಮಧುಮೇಹಿಗಳು ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಆಹಾರಗಳನ್ನು ಸೇವಿಸಬೇಕು. ಕಿಡ್ನಿ ಬೀನ್ಸ್ನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು, ನಾರಿನಂಶ ಅಧಿಕವಿರುವುದರಿಂದ ಮಧುಮೇಹಿಗಳು ತಮ್ಮ ಆಹಾರಕ್ರಮದಲ್ಲಿ ಸೇರಿಸಬಹುದಾದ ರುಚಿಕರವಾದ ಆಹಾರ ಇದಾಗಿದೆ.



Click it and Unblock the Notifications











