Latest Updates
-
ರಕ್ಷಾಬಂಧನ ವಿಶೇಷ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪ್ರಯಾಣಕ್ಕೂ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು!
ಕಿಡ್ನಿ ಬೀನ್ಸ್ ಮಧುಮೇಹಿಗಳಿಗೆ ತುಂಬಾನೇ ಒಳ್ಳೆಯದು, ಏಕೆ ಗೊತ್ತಾ?
ಮಧುಮೇಹ ಬಂದರೆ ಯಾವ ಆಹಾರ ತಿನ್ನಬೇಕು, ಯಾವುದು ತಿನ್ನಬಾರದು ಎಂಬ ಗೊಂದಲ ಅನೇಕರಲ್ಲಿದೆ. ಮಧುಮೇಹ ಬಂದ ಮೇಲೆ ರುಚಿ ರುಚಿಯಾದ ಆಹಾರಗಳನ್ನು ತಿನ್ನಲು ಸಾಧ್ಯವಿಲ್ಲ, ಬರೀ ಪಥ್ಯದಂಥ ಆಹಾರಗಳನ್ನು ಸೇವಿಸಬೇಕು ಎಂದು ಯೋಚಿಸುತ್ತಾರೆ, ಹಾಗೇನೂ ಇಲ್ಲ ಮಧುಮೇಹ ಬಂದ ಮೇಲೂ ನೀವೂ ರುಚಿಯಾದ ಆಹಾರಗಳನ್ನು ಸವಿಯಬಹುದು, ಆದರೆ ನಿಮ್ಮ ಆಹಾರಕ್ರಮದಲ್ಲಿ ಸಕ್ಕರೆಯಂಶ ಹೆಚ್ಚು ಮಾಡದಂಥ ಆಹಾರಗಳನ್ನು ಸೇವಿಸಬೇಕು. ಅಂಥದ್ದೊಂದು ಆಹಾರದ ಬಗ್ಗೆ ನಾವಿಲ್ಲಿ ಹೇಳುತ್ತಿದ್ದೇವೆ, ಅದೇ ರಾಜ್ಮಾ...
ರಾಜ್ಮಾದಿಂದ ತಯಾರಿಸಿದ ಗ್ರೇವಿಯನ್ನು ಚಪಾತಿ ಅಥವಾ ರಾಗಿ ರೊಟ್ಟಿ, ಜೋಳದ ರೊಟ್ಟಿ ಇವುಗಳ ಜೊತೆ ತಿನ್ನಲು ಎಷ್ಟು ರುಚಿಯಾಗಿರುತ್ತೆ ಅಲ್ವಾ? ಕಿಡ್ನಿ ಬೀನ್ಸ್ ಅಥವಾ ರಾಜ್ಮಾವನ್ನು ನಿಮ್ಮ ಆಹಾರಕ್ರಮದಲ್ಲಿ ಧೈರ್ಯವಾಗಿ ಸೇರಿಸಬಹುದು, ಏಕೆಂದರೆ ಇದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಿಸುವಲ್ಲಿ ತುಂಬಾನೇ ಸಹಕಾರಿ.
ಹೌದು ಮಧುಮೇಹಿಗಳು ತಮ್ಮಆಹಾರಕ್ರಮದಲ್ಲಿ ಸೇರಿಸಬಹುದಾದ ಅತ್ಯುತ್ತಮವಾದ ಆಹಾರಗಳಲ್ಲಿ ಕಿಡ್ನಿ ಬೀನ್ಸ್ ಕೂಡ ಒಂದಾಗಿದೆ. ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವುದರಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಿಸುವುದಿಲ್ಲ.
ಕಿಡ್ನಿ ಬೀನ್ಸ್ ಈ ಕಾರಣಕ್ಕೆ ಮಧುಮೇಹಿಗಳಿಗೆ ತುಂಬಾ ಒಳ್ಳೆಯದು:

1. ಅಧಿಕ ನಾರಿನಂಶ
ಕಿಡ್ನಿ ಬೀನ್ಸ್ನಲ್ಲಿ ನಾರಿನಂಶ ಅಧಿಕವಿದೆ, ಇದರಲ್ಲಿ ಕೊಬ್ಬಿನಂಶ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಇದೆ. 100 ಗ್ರಾಂ ಕಿಡ್ನಿ ಬೀನ್ಸ್ನಲ್ಲಿ 6.4 ಗ್ರಾಂ ನಾರಿನಂಶವಿದೆ. ಇದು ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟುತ್ತೆ ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ. ನಾರಿನಂಶ ಜೀರ್ಣಕ್ರಿಯೆಗೂ ಒಳ್ಳೆಯದು.

2. ಅಧಿಕ ಪ್ರೊಟೀನ್ ಇದೆ
ಅಮೆರಿಕನ್ ಡಯಾಬಿಟಿಸ್ ಅಸೋಸಿಯೇಷನ್ ಮಧುಮೇಹಿಗಳು ಪ್ರೊಟೀನ್ ಅಧಿಕವಿರುವ ಆಹಾರ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತದೆ. ಒಂದು ಕಪ್ ಕಿಡ್ನಿ ಬೀನ್ಸ್ ತಿಂದರೆ 14 ಗ್ರಾಣನಷ್ಟು ಪ್ರೊಟೀನ್ ದೊರೆಯುವುದು. ಅಲ್ಲದೆ ರಾಜ್ಮಾ ಅಥವಾ ಕಿಡ್ನಿ ಬೀನ್ಸ್ ತಿಂದರೆ ಬೇಗನೆ ಹಸಿವು ಉಂಟಾಗಲ್ಲ.

3. ಪೊಟಾಷ್ಯಿಯಂ ಅಧಿಕವಿದೆ
ಮಧುಮೇಹಿಗಳಿಗೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು. ಆದರೆ ರಾಜ್ಮಾದಲ್ಲಿ ಪೊಟಾಷ್ಯಿಯಂ ಅಧಿಕವಿರುವುದರಿಂದ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಗಟ್ಟುತ್ತೆ, ಹೃದಯ ಆರೋಗ್ಯವನ್ನು ವೃದ್ಧಿಸುತ್ತೆ, ಹೃದಯಾಘಾತದ ಸಾಧ್ಯತೆ ಕಡಿಮೆ ಮಾಡುತ್ತೆ. ಅಲ್ಲದೆ ಸೋಡಿಯಂನಿಂದ ಉಂಟಾಗುವ ಪರಿಣಾಮವನ್ನು ತಗ್ಗಿಸಲು ಇದು ಸಹಕಾರಿ.

4. ಕಾರ್ಬೋಹೈಡ್ರೇಟ್ಸ್
ಕಿಡ್ನಿ ಬೀನ್ಸ್ನಲ್ಲಿ ಕಾರ್ಬೋಹೈಡ್ರೇಟ್ಸ್ ಇದ್ದರೂ ಅದು ನಿಧಾನಕ್ಕೆ ಬಿಡುಗಡೆಯಾಗುವುದರಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚುವುದಿಲ್ಲ. ಕಾರ್ಬ್ಸ್, ಪ್ರೊಟೀನ್, ನಾರಿನಂಶ ಇವೆಲ್ಲಾ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಅಲ್ಲದೆ ಬೇಗನೆ ಹಸಿವು ಉಂಟಾಗುವುದಿಲ್ಲ.

5. ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದೆ
ಮಧುಮೇಹಿಗಳು ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಆಹಾರಗಳನ್ನು ಸೇವಿಸಬೇಕು. ಕಿಡ್ನಿ ಬೀನ್ಸ್ನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು, ನಾರಿನಂಶ ಅಧಿಕವಿರುವುದರಿಂದ ಮಧುಮೇಹಿಗಳು ತಮ್ಮ ಆಹಾರಕ್ರಮದಲ್ಲಿ ಸೇರಿಸಬಹುದಾದ ರುಚಿಕರವಾದ ಆಹಾರ ಇದಾಗಿದೆ.



Click it and Unblock the Notifications