Just In
Don't Miss
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಡ್ನಿ ಬೀನ್ಸ್ ಮಧುಮೇಹಿಗಳಿಗೆ ತುಂಬಾನೇ ಒಳ್ಳೆಯದು, ಏಕೆ ಗೊತ್ತಾ?
ಮಧುಮೇಹ ಬಂದರೆ ಯಾವ ಆಹಾರ ತಿನ್ನಬೇಕು, ಯಾವುದು ತಿನ್ನಬಾರದು ಎಂಬ ಗೊಂದಲ ಅನೇಕರಲ್ಲಿದೆ. ಮಧುಮೇಹ ಬಂದ ಮೇಲೆ ರುಚಿ ರುಚಿಯಾದ ಆಹಾರಗಳನ್ನು ತಿನ್ನಲು ಸಾಧ್ಯವಿಲ್ಲ, ಬರೀ ಪಥ್ಯದಂಥ ಆಹಾರಗಳನ್ನು ಸೇವಿಸಬೇಕು ಎಂದು ಯೋಚಿಸುತ್ತಾರೆ, ಹಾಗೇನೂ ಇಲ್ಲ ಮಧುಮೇಹ ಬಂದ ಮೇಲೂ ನೀವೂ ರುಚಿಯಾದ ಆಹಾರಗಳನ್ನು ಸವಿಯಬಹುದು, ಆದರೆ ನಿಮ್ಮ ಆಹಾರಕ್ರಮದಲ್ಲಿ ಸಕ್ಕರೆಯಂಶ ಹೆಚ್ಚು ಮಾಡದಂಥ ಆಹಾರಗಳನ್ನು ಸೇವಿಸಬೇಕು. ಅಂಥದ್ದೊಂದು ಆಹಾರದ ಬಗ್ಗೆ ನಾವಿಲ್ಲಿ ಹೇಳುತ್ತಿದ್ದೇವೆ, ಅದೇ ರಾಜ್ಮಾ...
ರಾಜ್ಮಾದಿಂದ ತಯಾರಿಸಿದ ಗ್ರೇವಿಯನ್ನು ಚಪಾತಿ ಅಥವಾ ರಾಗಿ ರೊಟ್ಟಿ, ಜೋಳದ ರೊಟ್ಟಿ ಇವುಗಳ ಜೊತೆ ತಿನ್ನಲು ಎಷ್ಟು ರುಚಿಯಾಗಿರುತ್ತೆ ಅಲ್ವಾ? ಕಿಡ್ನಿ ಬೀನ್ಸ್ ಅಥವಾ ರಾಜ್ಮಾವನ್ನು ನಿಮ್ಮ ಆಹಾರಕ್ರಮದಲ್ಲಿ ಧೈರ್ಯವಾಗಿ ಸೇರಿಸಬಹುದು, ಏಕೆಂದರೆ ಇದು ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಿಸುವಲ್ಲಿ ತುಂಬಾನೇ ಸಹಕಾರಿ.
ಹೌದು ಮಧುಮೇಹಿಗಳು ತಮ್ಮಆಹಾರಕ್ರಮದಲ್ಲಿ ಸೇರಿಸಬಹುದಾದ ಅತ್ಯುತ್ತಮವಾದ ಆಹಾರಗಳಲ್ಲಿ ಕಿಡ್ನಿ ಬೀನ್ಸ್ ಕೂಡ ಒಂದಾಗಿದೆ. ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವುದರಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚಿಸುವುದಿಲ್ಲ.
ಕಿಡ್ನಿ ಬೀನ್ಸ್ ಈ ಕಾರಣಕ್ಕೆ ಮಧುಮೇಹಿಗಳಿಗೆ ತುಂಬಾ ಒಳ್ಳೆಯದು:
1. ಅಧಿಕ ನಾರಿನಂಶ
ಕಿಡ್ನಿ ಬೀನ್ಸ್ನಲ್ಲಿ ನಾರಿನಂಶ ಅಧಿಕವಿದೆ, ಇದರಲ್ಲಿ ಕೊಬ್ಬಿನಂಶ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಇದೆ. 100 ಗ್ರಾಂ ಕಿಡ್ನಿ ಬೀನ್ಸ್ನಲ್ಲಿ 6.4 ಗ್ರಾಂ ನಾರಿನಂಶವಿದೆ. ಇದು ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದನ್ನು ತಡೆಗಟ್ಟುತ್ತೆ ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ. ನಾರಿನಂಶ ಜೀರ್ಣಕ್ರಿಯೆಗೂ ಒಳ್ಳೆಯದು.
2. ಅಧಿಕ ಪ್ರೊಟೀನ್ ಇದೆ
ಅಮೆರಿಕನ್ ಡಯಾಬಿಟಿಸ್ ಅಸೋಸಿಯೇಷನ್ ಮಧುಮೇಹಿಗಳು ಪ್ರೊಟೀನ್ ಅಧಿಕವಿರುವ ಆಹಾರ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುತ್ತದೆ. ಒಂದು ಕಪ್ ಕಿಡ್ನಿ ಬೀನ್ಸ್ ತಿಂದರೆ 14 ಗ್ರಾಣನಷ್ಟು ಪ್ರೊಟೀನ್ ದೊರೆಯುವುದು. ಅಲ್ಲದೆ ರಾಜ್ಮಾ ಅಥವಾ ಕಿಡ್ನಿ ಬೀನ್ಸ್ ತಿಂದರೆ ಬೇಗನೆ ಹಸಿವು ಉಂಟಾಗಲ್ಲ.
3. ಪೊಟಾಷ್ಯಿಯಂ ಅಧಿಕವಿದೆ
ಮಧುಮೇಹಿಗಳಿಗೆ ಹೃದಯಾಘಾತವಾಗುವ ಸಾಧ್ಯತೆ ಹೆಚ್ಚು. ಆದರೆ ರಾಜ್ಮಾದಲ್ಲಿ ಪೊಟಾಷ್ಯಿಯಂ ಅಧಿಕವಿರುವುದರಿಂದ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಗಟ್ಟುತ್ತೆ, ಹೃದಯ ಆರೋಗ್ಯವನ್ನು ವೃದ್ಧಿಸುತ್ತೆ, ಹೃದಯಾಘಾತದ ಸಾಧ್ಯತೆ ಕಡಿಮೆ ಮಾಡುತ್ತೆ. ಅಲ್ಲದೆ ಸೋಡಿಯಂನಿಂದ ಉಂಟಾಗುವ ಪರಿಣಾಮವನ್ನು ತಗ್ಗಿಸಲು ಇದು ಸಹಕಾರಿ.
4. ಕಾರ್ಬೋಹೈಡ್ರೇಟ್ಸ್
ಕಿಡ್ನಿ ಬೀನ್ಸ್ನಲ್ಲಿ ಕಾರ್ಬೋಹೈಡ್ರೇಟ್ಸ್ ಇದ್ದರೂ ಅದು ನಿಧಾನಕ್ಕೆ ಬಿಡುಗಡೆಯಾಗುವುದರಿಂದ ರಕ್ತದಲ್ಲಿ ಸಕ್ಕರೆಯಂಶ ಹೆಚ್ಚುವುದಿಲ್ಲ. ಕಾರ್ಬ್ಸ್, ಪ್ರೊಟೀನ್, ನಾರಿನಂಶ ಇವೆಲ್ಲಾ ರಕ್ತದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ. ಅಲ್ಲದೆ ಬೇಗನೆ ಹಸಿವು ಉಂಟಾಗುವುದಿಲ್ಲ.
5. ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದೆ
ಮಧುಮೇಹಿಗಳು ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಆಹಾರಗಳನ್ನು ಸೇವಿಸಬೇಕು. ಕಿಡ್ನಿ ಬೀನ್ಸ್ನಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇದ್ದು, ನಾರಿನಂಶ ಅಧಿಕವಿರುವುದರಿಂದ ಮಧುಮೇಹಿಗಳು ತಮ್ಮ ಆಹಾರಕ್ರಮದಲ್ಲಿ ಸೇರಿಸಬಹುದಾದ ರುಚಿಕರವಾದ ಆಹಾರ ಇದಾಗಿದೆ.