Latest Updates
-
ಉಪ್ಪಿನಕಾಯಿ, ಹಪ್ಪಳ ಇಷ್ಟನಾ? ಎಚ್ಚರ! ಹೃದಯದ ಆರೋಗ್ಯಕ್ಕಾಗಿ ಅಡುಗೆಯಲ್ಲಿ ಈ ಬದಲಾವಣೆ ಮಾಡಲೇಬೇಕು -
ಅಮೆಜಾನ್ ಸೇಲ್ ಮುಗಿಯಲು ಕೆಲವೇ ಗಂಟೆ ಬಾಕಿ: ಈ ಬ್ಯೂಟಿ ಮತ್ತು ಫ್ಯಾಷನ್ ಡೀಲ್ಸ್ ಮಿಸ್ ಮಾಡ್ಬೇಡಿ! -
ತೀವ್ರ ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಆರೋಗ್ಯವಾಗಿರಲು ಈ ಸುರಕ್ಷತಾ ಕ್ರಮಗಳನ್ನು ಮಿಸ್ ಮಾಡ್ಬೇಡಿ! -
ಲಿವ್-ಇನ್ ಸಂಬಂಧದಲ್ಲಿರುವ ಯುವ ಜೋಡಿಗಳಿಗೆ ಶಾಕ್: ಹೈಕೋರ್ಟ್ನಿಂದ ಹೊಸ ಆದೇಶ, ಇನ್ನು ರಕ್ಷಣೆ ಸಿಗಲ್ಲ! -
ಬಿಸಿಲಿಗೆ ಬಾಲ್ಕನಿ ಗಿಡಗಳು ಬಾಡುತ್ತಿವೆಯೇ? ಈ 5 ಸರಳ ಟ್ರಿಕ್ಸ್ ಬಳಸಿ ಗಿಡಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಿ! -
ಹಾಲಿನ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಹಾಳಾಗದಂತೆ ಆರೋಗ್ಯ ಕಾಪಾಡಿಕೊಳ್ಳಲು ಈ ಪರ್ಯಾಯ ಆಹಾರಗಳೇ ದಾರಿ! -
ರೆಡ್ ಕಾರ್ಪೆಟ್ ಮೇಲೆ ಸದ್ದು ಮಾಡುತ್ತಿರುವ 'ಸೀರೆ-ಗೌನ್' ಮ್ಯಾಜಿಕ್: 2026ರ ಈ ಫ್ಯಾಷನ್ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿಯ ಅಬ್ಬರ: ಆರೋಗ್ಯ ಹಾಳಾಗದಂತೆ ವರ್ಕೌಟ್ ಮಾಡಲು ಈ ಬದಲಾವಣೆಗಳನ್ನು ಮಾಡಿಕೊಳ್ಳುವುದು ಅತ್ಯಗತ್ಯ, ಇಲ್ಲದಿದ್ದರೆ ಅಪಾಯ! -
ಬಿಸಿಲು ಅಥವಾ ಮಳೆ: ಹವಾಮಾನದ ಅಬ್ಬರದ ನಡುವೆಯೂ ನಿಮ್ಮ ಮದುವೆ ಸಂಭ್ರಮವನ್ನು ಅಚ್ಚುಕಟ್ಟಾಗಿ ಪ್ಲಾನ್ ಮಾಡುವುದು ಹೇಗೆ? -
ಬಿಸಿಲ ಧಗೆಗೆ ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ನಿಮ್ಮ ಮನೆಯನ್ನು ತಂಪಾಗಿರಿಸಲು ಮತ್ತು ಗಿಡಗಳನ್ನು ಉಳಿಸಲು ಇಲ್ಲಿವೆ ಅದ್ಭುತ ಟಿಪ್ಸ್!
ತೂಕ ಕಡಿಮೆ ಮಾಡುತ್ತೆ ಅನ್ನುವ ಮಿಥ್ಯಗಳು

ತೂಕ ಕಡಿಮೆಯಾಗುತ್ತೆ ಎಂದು ಜನರು ಅನೇಕ ರೀತಿಯ ತಪ್ಪಾದ ಸಲಹೆಗಳನ್ನು ಅನುಸರಿಸಿ ಫಲವನ್ನು ಕಾಣಲು ವಿಫಲರಾಗುತ್ತಾರೆ. ಆರೋಗ್ಯಕರವಲ್ಲದ ಮತ್ತು ಪರಿಣಾಮಕಾರಿಯಲ್ಲದ ಆ ರೀತಿಯ ಮಿಥ್ಯಗಳ ಬಗ್ಗೆ ಮಾಹಿತಿ ಈ ಕೆಳಗೆ ನೀಡಲಾಗಿದೆ ನೋಡಿ:
ಅತೀ ಕಡಿಮೆ ಆಹಾರ ಸೇವಿಸಿದರೆ ಶಾಶ್ವತವಾಗಿ ತೂಕ ಕಡಿಮೆಯಾಗುವುದು: ಕೆಲವರು ತೂಕ ಕಡಿಮೆಯಾಗಬೇಕೆಂದು ಏನೂ ತಿನ್ನುವುದಿಲ್ಲ. ತುಂಬಾ ಹೊಟ್ಟೆ ಹಸಿವು ಆದಾಗ ಸ್ವಲ್ಪ ಆಹಾರ ಸೇವಿಸುತ್ತಾರೆ. ಈ ರೀತಿ ಮಾಡಿದರೆ ದೇಹಕ್ಕೆ ಬೇಕಾದ ಪೋಷಕಾಂಶ ದೊರೆಯದೆ ತೆಳ್ಳಗಾಗುವುದು. ಆದರೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ! ಈ ರೀತಿ ಮಾಡಿದರೆ ನಿಶ್ಯಕ್ತಿ ಉಂಟಾಗುತ್ತದೆ.
ಬಾಯಿಗೆ ರುಚಿಯಲ್ಲದ ಆಹಾರ ದಿನಾ ಸೇವಿಸಿದರೆ ಖಿನ್ನತೆ ಉಂಟಾಗುವುದು. ಇಲ್ಲಿ ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಈ ರೀತಿಯ ಡಯಟ್ (ಆಹಾರಕ್ರಮವನ್ನು) ಜೀವನ ಪೂರ್ತಿ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಇದರಿಂದ ಶಾಶ್ವತ ಪರಿಹಾರ ದೊರಕಲು ಸಾಧ್ಯವಿಲ್ಲ.
ಅಧಿಕ ಪ್ರೊಟೀನ್ ಮತ್ತು ಕಡಿಮೆ ಕಾರ್ಬೋಹೈಡ್ರೇಟ್ ಆಹಾರಕ್ರಮದಿಂದ ತೂಕ ಕಡಿಮೆ ಮಾಡಬಹುದು: ಅಧಿಕ ಪ್ರೊಟೀನ್ ಇರುವ ಆಹಾರಗಳಾದ ಮೊಟ್ಟೆ, ಮಾಂಸ, ಬೀನ್ಸ್ ಹೀಗೆ ಬರೀ ಪ್ರೊಟೀನ್ ಇರುವ ವಸ್ತುಗಳನ್ನು ಮಾತ್ರ ತಿಂದರೆ ಸಾಕಾಗುವುದಿಲ್ಲ. ದೇಹಕ್ಕೆ ಅವಶ್ಯಕವಿರುವ ಕಾರ್ಬೋಹೈಡ್ರೇಟ್ ಪೂರೈಕೆಯಾಗದಿದ್ದರೆ ರಕ್ತದಲ್ಲಿರುವ ಕೊಬ್ಬಿನಂಶ ಕಡಿಮೆಯಾಗುತ್ತದೆ. ಇದರಿಂದ ಯೂರಿಕ್ ಅಸಿಡ್ (ಮೂತ್ರವಿಸರ್ಜನೆಗೆ ತೊಂದರೆ), ಮೊಣಕಾಲು, ಕೈಗಳು ಊದಿಕೊಳ್ಳುವುದು, ಕಿಡ್ನಿಯಲ್ಲಿ ಕಲ್ಲು ಮುಂತಾದ ಸಮಸ್ಯೆ ಕಂಡು ಬರುತ್ತದೆ. ಕಿಡ್ನಿ ಸಮಸ್ಯೆ ಮತ್ತು ಮಧುಮೇಹ ಸಮಸ್ಯೆಯಿರುವವರಿಗೆ ಇದರಿಂದ ಅಧಿಕ ತೊಂದರೆಗಳು ಕಾಣಿಸಿಕೊಳ್ಳುತ್ತದೆ.
ಅನ್ನ ಮತ್ತು ಆಲೂಗೆಡ್ಡೆ ತಿನ್ನಬಾರದು: ತುಕ ಕಡಿಮೆಯಗಲು ಅನ್ನ ಮತ್ತು ಆಲೂಗೆಡ್ಡೆ ಮುಟ್ಟಬಾರದು ಅನ್ನುವುದನ್ನು ಕೇಳಬಹುದು. ಆದರೆ ಇವುಗಳ ಮಿತಿಯಲ್ಲಿ ತಿನ್ನುವುದು ಅವಶ್ಯಕ ಏಕೆಂದರೆ ಇದು ದೇಹಕ್ಕೆ ಶಕ್ತಿಯನ್ನು ತುಂಬುತ್ತದೆ. ಇದರ ಜೊತೆಗೆ ಇತರ ಸೊಪ್ಪು ತರಕಾರಿಗಳು, ನಾರಿನಂಶವಿರುವ ಪದಾರ್ಥಗಳನ್ನು ಹಾಕಿದ ಆಹಾರಕ್ರಮ ಪಾಲಿಸಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications