Latest Updates
-
ತೀವ್ರ ಶಾಖದ ಅಲೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಎಚ್ಚರ! -
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ
ಸೆಕೆಗಾಲದಲ್ಲಿ ತಿನ್ನಲೇಬೇಕಾದ 4 ಆಹಾರಗಳು

ಕಲ್ಲಂಗಡಿ: ಕಲ್ಲಂಗಡಿ, ಕರ್ಬೂಜ ಹಣ್ಣುಗಳನ್ನು ಈ ಸಮಯದಲ್ಲಿ ಹೆಚ್ಚಾಗಿ ತಿನ್ನಬೇಕು. ಈ ಹಣ್ಣುಗಳನ್ನು ತಿನ್ನುವುದು ಮಧುಮೇಹ ರೋಗಿಗಳ ಆರೋಗ್ಯಕ್ಕೆ ಕೂಡ ಒಳ್ಳೆಯದು. ಸೆಕೆಗೆ ತಂಪು ನೀಡುವುದರ ಜೊತೆಗೆ ದೇಹದಲ್ಲಿ ನೀರಿನಂಶ ಕಾಪಾಡುತ್ತದೆ.
ಮಾವಿನ ಹಣ್ಣು: ಮಾವಿನ ಹಣ್ಣಿನಲ್ಲಿ ನಾರಿನಂಶ ಅಧಿಕವಿರುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಸನ್ ಟ್ಯಾನ್ ಹೋಗಲಾಡಿಸಲು, ಸೆಕೆಯಲ್ಲಿ ಕೂದಲಿಗೆ ಕವಲೊಡೆಯದಂತೆ ತಡೆಯಲು ಮಾವಿನ ಹಣ್ಣು ತಿನ್ನುವುದು ಒಳ್ಳೆಯದು. ಇದರಲ್ಲಿ ವಿಟಮಿನ್ ಎ ಇರುವುದರಿಂದ ತ್ವಚೆ ಹೊಳಪು ಹೆಚ್ಚುತ್ತದೆ. ಅಲ್ಲದ ವಿಟಮಿನ್ ಸಿ ಇದ್ದು ಇದು ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಅಲ್ಲದೆ ಇದರಲ್ಲಿ ಅಧಿಕ ಪ್ರಮಾಣದಲ್ಲಿ ಕಾರ್ಬೋಹೈಡ್ರೇಟ್ ಇರುವುದರಿಂದ ತುಂಬಾ ತೆಳ್ಳಗೆ ಇದ್ದವರು ಇದನ್ನು ತಿನ್ನುವುದು ಒಳ್ಳೆಯದು. ದಪ್ಪಗಿದ್ದವರು ಮಿತಿಯಲ್ಲಿ ತಿನ್ನಬೇಕು.
ಬೀಟ್ರೂಟ್: ಬೀಟ್ರೂಟ್ನಲ್ಲಿ ವಿಟಮಿನ್ ಸಿ, ಬಿ3, ಬಿ6 ಇದ್ದು ದೇಹದಲ್ಲಿರುವ ಕಶ್ಮಲಗಳನ್ನು ಹೊರಗೆ ಹಾಕುತ್ತದೆ. ಅಲ್ಲದೆ ದೇಹದಲ್ಲಿ ರಕ್ತ ಹೆಚ್ಚಾಗುವಂತೆ ಮಾಡುತ್ತದೆ.
ನಿಂಬೆ ಹಣ್ಣು: ದಿನಕ್ಕೆ ಒಂದು ಲೋಟ ನಿಂಬೆ ಜ್ಯೂಸ್ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಬೆಳಗ್ಗೆ ಒಂದು ಲೋಟ ನಿಂಬೆ ಜ್ಯೂಸ್ ಕುಡಿದರೆ ತೂಕ ಕಮ್ಮಿಯಾಗುವುದರ ಜೊತೆಗೆ ಆಹಾರದಲ್ಲಿರುವ ಅಸಿಡಿಟಿ ಪ್ರಮಾಣವನ್ನು ನಿಯಂತ್ರಣದಲ್ಲಿಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications









