Latest Updates
-
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು! -
ಮಳೆಗಾಲದಲ್ಲಿ ಆರೋಗ್ಯದ ರಕ್ಷಣೆ: ಕೇವಲ 20 ರೂಪಾಯಿಯಲ್ಲಿ ಸಿಗುವ ಈ ಆಹಾರಗಳು ನಿಮ್ಮನ್ನು ರೋಗಗಳಿಂದ ಕಾಪಾಡುತ್ತವೆ!
ತೆಳ್ಳಗಾಗಲು ಜಿಮ್ ಏಕೆ? ಅಡುಗೆ ಮನೆಯೇ ಸಾಕು!

ಅರಿಶಿಣ: ಒಂದು ಚಿಕ್ಕ ತುಂಡು ಅರಿಶಿಣ ದಿನಾ ತಿಂದರೆ ಹೃದಯದ ಸ್ವಾಸ್ಥ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನುತ್ತಾ ಬಂದರೆ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಇದು ದೇಹದಲ್ಲಿ ರಕ್ತ ಸಂಚಲನ ಸರಾಗವಾಗಿ ನಡೆಯಲು ತುಂಬಾ ಸಹಕಾರಿಯಾಗಿದೆ.
ಚಕ್ಕೆ: ಚಕ್ಕೆ ಜೀರ್ಣಕ್ರಿಯೆ ಹೆಚ್ಚಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ, ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ಮಾಡಿ ದೇಹದಲ್ಲಿರುವ ಅಧಿಕ ಕೊಬ್ಬನ್ನು ಕಡಿಮೆ ಮಾಡುತ್ತದೆ.
ಹಸಿಮೆಣಸಿನ ಕಾಯಿ: ಮೆಣಸಿನ ಕಾಯಿ ತಿಂದರೆ ಕೊಬ್ಬು ಕರಗಿಸಲು ಸಹಕಾರಿಯಾಗಿದೆ, ತುಂಬಾ ಸಪ್ಪೆ ಊಟ ಮಾಡಿದರೂ ಆರೋಗ್ಯಕ್ಕೆ ಒಳ್ಳೆಯದಲ್ಲ, ತುಂಬಾ ಖಾರದ ಊಟ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ.
ಕರಿಬೇವಿನ ಎಲೆ: ಕರಿ ಬೇವಿನ ಎಲೆ ಪ್ರತಿದಿನ ತಿನ್ನುತ್ತಾ ಬಂದರೆ ದೇಹದ ತೂಕ ಕಡಿಮೆಯಾಗುತ್ತದೆ. ಇದು ದೇಹದಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಿ, ಅಧಿಕ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸುತ್ತದೆ. ಸ್ವಲ್ಪ ಗುಂಡಗೆ ಇರುವವರು ಪ್ರತಿ ಹೊತ್ತಿನ ಊಟದ ಜೊತೆ 5-6 ಕರಿಬೇವಿನ ಎಲೆ ತಿನ್ನುತ್ತಾ ಬಂದರೆ ಸಮತೂಕವನ್ನು ಪಡೆಯಬಹುದು.
ಬೆಳ್ಳುಳ್ಳಿ: ಬೆಳ್ಳುಳ್ಳಿಯನ್ನು ಗಂಧಕದ ಅಂಶ ಹೆಚ್ಚಾಗಿರುವುದರಿಂದ ಕೊಲೆಸ್ಟ್ರಾಲ್ ಮತ್ತು ಅನಾರೋಗ್ಯಕರ ಕೊಬ್ಬನ್ನು ಕಡಿಮೆ ಮಾಡಲು ಸಹಕಾರ ಮಾಡುತ್ತದೆ.
ಸಾಸಿವೆ ಎಣ್ಣೆ: ಅಡುಗೆಗೆ ಸಾಸಿವೆ ಎಣ್ಣೆ ಬಳಸುವುದು ತುಂಬಾ ಒಳ್ಳೆಯದು. ಇದರಲ್ಲಿ antioxidants ಅಂಶ ಇರುವುದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು.
ಎಲೆಕೋಸು: ಎಲೆಕೋಸನ್ನು ಹಸಿಯಾಗಿ ತಿಂದರೆ ತೂಕ ಕಡಿಮೆಯಾಗಲು ತುಂಬಾ ಸಹಕಾರಿ. ಎಲೆಕೋಸಿನಿಂದ ತಯಾರಿಸಿದ ಅಡುಗೆ ಪದಾರ್ಥಗಳ ಸೇವನೆ ಒಳ್ಳೆಯದು.
ಹೆಸರು ಕಾಳು: ಮೊಳಕೆ ಬರಿಸಿದ ಹೆಸರುಕಾಳಿನಲ್ಲಿ ವಿಟಮಿನ್ ಎ, ಬಿ, ಸಿ ಮತ್ತು ಇ ಹಾಗೂ ಅನೇಕ ಖನಿಜಾಂಶಗಳಿರುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ, ಕಬ್ಬಿಣದಂಶ, ಅಧಿಕ ನಾರಿನಂಶ ಕೊಲೆಸ್ಟ್ರಾಲ್ ಪ್ರಮಾಣವನ್ನ ಕಡಿಮೆ ಮಾಡಲು ಸಹಕಾರಿಯಾಗಿದೆ. ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಜೇನು: ಬೆಳಗ್ಗಿನ ಜಾವ ಒಂದು ಚಮಚ ಜೇನನ್ನು ಒಂದು ಲೋಟ ಬಿಸಿ ನೀರಿಗೆ ಹಾಕಿ ಕುಡಿದರೆ ದೇಹದ ತೂಕ ಕಡಿಮೆಯಾಗುವುದು.
ಮಜ್ಜಿಗೆ: ಮಜ್ಜಿಗೆಯಲ್ಲಿ ಅಧಿಕ ಕೊಬ್ಬಿನಂಶವಿರುವುದಿಲ್ಲ. ಇದನ್ನು ಪ್ರತಿನಿತ್ಯ ಸೇವಿಸಿದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶದ ಜೊತೆ ಸಮತೂಕದ ಮೈಕಟ್ಟು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications