Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
ತೆಳ್ಳಗಾಗಲು ಜಿಮ್ ಏಕೆ? ಅಡುಗೆ ಮನೆಯೇ ಸಾಕು!

ಅರಿಶಿಣ: ಒಂದು ಚಿಕ್ಕ ತುಂಡು ಅರಿಶಿಣ ದಿನಾ ತಿಂದರೆ ಹೃದಯದ ಸ್ವಾಸ್ಥ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನುತ್ತಾ ಬಂದರೆ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಇದು ದೇಹದಲ್ಲಿ ರಕ್ತ ಸಂಚಲನ ಸರಾಗವಾಗಿ ನಡೆಯಲು ತುಂಬಾ ಸಹಕಾರಿಯಾಗಿದೆ.
ಚಕ್ಕೆ: ಚಕ್ಕೆ ಜೀರ್ಣಕ್ರಿಯೆ ಹೆಚ್ಚಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ, ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ಮಾಡಿ ದೇಹದಲ್ಲಿರುವ ಅಧಿಕ ಕೊಬ್ಬನ್ನು ಕಡಿಮೆ ಮಾಡುತ್ತದೆ.
ಹಸಿಮೆಣಸಿನ ಕಾಯಿ: ಮೆಣಸಿನ ಕಾಯಿ ತಿಂದರೆ ಕೊಬ್ಬು ಕರಗಿಸಲು ಸಹಕಾರಿಯಾಗಿದೆ, ತುಂಬಾ ಸಪ್ಪೆ ಊಟ ಮಾಡಿದರೂ ಆರೋಗ್ಯಕ್ಕೆ ಒಳ್ಳೆಯದಲ್ಲ, ತುಂಬಾ ಖಾರದ ಊಟ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ.
ಕರಿಬೇವಿನ ಎಲೆ: ಕರಿ ಬೇವಿನ ಎಲೆ ಪ್ರತಿದಿನ ತಿನ್ನುತ್ತಾ ಬಂದರೆ ದೇಹದ ತೂಕ ಕಡಿಮೆಯಾಗುತ್ತದೆ. ಇದು ದೇಹದಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಿ, ಅಧಿಕ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸುತ್ತದೆ. ಸ್ವಲ್ಪ ಗುಂಡಗೆ ಇರುವವರು ಪ್ರತಿ ಹೊತ್ತಿನ ಊಟದ ಜೊತೆ 5-6 ಕರಿಬೇವಿನ ಎಲೆ ತಿನ್ನುತ್ತಾ ಬಂದರೆ ಸಮತೂಕವನ್ನು ಪಡೆಯಬಹುದು.
ಬೆಳ್ಳುಳ್ಳಿ: ಬೆಳ್ಳುಳ್ಳಿಯನ್ನು ಗಂಧಕದ ಅಂಶ ಹೆಚ್ಚಾಗಿರುವುದರಿಂದ ಕೊಲೆಸ್ಟ್ರಾಲ್ ಮತ್ತು ಅನಾರೋಗ್ಯಕರ ಕೊಬ್ಬನ್ನು ಕಡಿಮೆ ಮಾಡಲು ಸಹಕಾರ ಮಾಡುತ್ತದೆ.
ಸಾಸಿವೆ ಎಣ್ಣೆ: ಅಡುಗೆಗೆ ಸಾಸಿವೆ ಎಣ್ಣೆ ಬಳಸುವುದು ತುಂಬಾ ಒಳ್ಳೆಯದು. ಇದರಲ್ಲಿ antioxidants ಅಂಶ ಇರುವುದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು.
ಎಲೆಕೋಸು: ಎಲೆಕೋಸನ್ನು ಹಸಿಯಾಗಿ ತಿಂದರೆ ತೂಕ ಕಡಿಮೆಯಾಗಲು ತುಂಬಾ ಸಹಕಾರಿ. ಎಲೆಕೋಸಿನಿಂದ ತಯಾರಿಸಿದ ಅಡುಗೆ ಪದಾರ್ಥಗಳ ಸೇವನೆ ಒಳ್ಳೆಯದು.
ಹೆಸರು ಕಾಳು: ಮೊಳಕೆ ಬರಿಸಿದ ಹೆಸರುಕಾಳಿನಲ್ಲಿ ವಿಟಮಿನ್ ಎ, ಬಿ, ಸಿ ಮತ್ತು ಇ ಹಾಗೂ ಅನೇಕ ಖನಿಜಾಂಶಗಳಿರುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ, ಕಬ್ಬಿಣದಂಶ, ಅಧಿಕ ನಾರಿನಂಶ ಕೊಲೆಸ್ಟ್ರಾಲ್ ಪ್ರಮಾಣವನ್ನ ಕಡಿಮೆ ಮಾಡಲು ಸಹಕಾರಿಯಾಗಿದೆ. ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಜೇನು: ಬೆಳಗ್ಗಿನ ಜಾವ ಒಂದು ಚಮಚ ಜೇನನ್ನು ಒಂದು ಲೋಟ ಬಿಸಿ ನೀರಿಗೆ ಹಾಕಿ ಕುಡಿದರೆ ದೇಹದ ತೂಕ ಕಡಿಮೆಯಾಗುವುದು.
ಮಜ್ಜಿಗೆ: ಮಜ್ಜಿಗೆಯಲ್ಲಿ ಅಧಿಕ ಕೊಬ್ಬಿನಂಶವಿರುವುದಿಲ್ಲ. ಇದನ್ನು ಪ್ರತಿನಿತ್ಯ ಸೇವಿಸಿದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶದ ಜೊತೆ ಸಮತೂಕದ ಮೈಕಟ್ಟು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications