Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ತೆಳ್ಳಗಾಗಲು ಜಿಮ್ ಏಕೆ? ಅಡುಗೆ ಮನೆಯೇ ಸಾಕು!

ಅರಿಶಿಣ: ಒಂದು ಚಿಕ್ಕ ತುಂಡು ಅರಿಶಿಣ ದಿನಾ ತಿಂದರೆ ಹೃದಯದ ಸ್ವಾಸ್ಥ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನುತ್ತಾ ಬಂದರೆ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತದೆ. ಇದು ದೇಹದಲ್ಲಿ ರಕ್ತ ಸಂಚಲನ ಸರಾಗವಾಗಿ ನಡೆಯಲು ತುಂಬಾ ಸಹಕಾರಿಯಾಗಿದೆ.
ಚಕ್ಕೆ: ಚಕ್ಕೆ ಜೀರ್ಣಕ್ರಿಯೆ ಹೆಚ್ಚಿಸುವಲ್ಲಿ ತುಂಬಾ ಪರಿಣಾಮಕಾರಿಯಾಗಿದೆ, ಜೀರ್ಣಕ್ರಿಯೆ ಸರಿಯಾಗಿ ನಡೆಯುವಂತೆ ಮಾಡಿ ದೇಹದಲ್ಲಿರುವ ಅಧಿಕ ಕೊಬ್ಬನ್ನು ಕಡಿಮೆ ಮಾಡುತ್ತದೆ.
ಹಸಿಮೆಣಸಿನ ಕಾಯಿ: ಮೆಣಸಿನ ಕಾಯಿ ತಿಂದರೆ ಕೊಬ್ಬು ಕರಗಿಸಲು ಸಹಕಾರಿಯಾಗಿದೆ, ತುಂಬಾ ಸಪ್ಪೆ ಊಟ ಮಾಡಿದರೂ ಆರೋಗ್ಯಕ್ಕೆ ಒಳ್ಳೆಯದಲ್ಲ, ತುಂಬಾ ಖಾರದ ಊಟ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ.
ಕರಿಬೇವಿನ ಎಲೆ: ಕರಿ ಬೇವಿನ ಎಲೆ ಪ್ರತಿದಿನ ತಿನ್ನುತ್ತಾ ಬಂದರೆ ದೇಹದ ತೂಕ ಕಡಿಮೆಯಾಗುತ್ತದೆ. ಇದು ದೇಹದಲ್ಲಿರುವ ಕಶ್ಮಲಗಳನ್ನು ಹೋಗಲಾಡಿಸಿ, ಅಧಿಕ ಸಂಗ್ರಹವಾಗಿರುವ ಕೊಬ್ಬನ್ನು ಕರಗಿಸುತ್ತದೆ. ಸ್ವಲ್ಪ ಗುಂಡಗೆ ಇರುವವರು ಪ್ರತಿ ಹೊತ್ತಿನ ಊಟದ ಜೊತೆ 5-6 ಕರಿಬೇವಿನ ಎಲೆ ತಿನ್ನುತ್ತಾ ಬಂದರೆ ಸಮತೂಕವನ್ನು ಪಡೆಯಬಹುದು.
ಬೆಳ್ಳುಳ್ಳಿ: ಬೆಳ್ಳುಳ್ಳಿಯನ್ನು ಗಂಧಕದ ಅಂಶ ಹೆಚ್ಚಾಗಿರುವುದರಿಂದ ಕೊಲೆಸ್ಟ್ರಾಲ್ ಮತ್ತು ಅನಾರೋಗ್ಯಕರ ಕೊಬ್ಬನ್ನು ಕಡಿಮೆ ಮಾಡಲು ಸಹಕಾರ ಮಾಡುತ್ತದೆ.
ಸಾಸಿವೆ ಎಣ್ಣೆ: ಅಡುಗೆಗೆ ಸಾಸಿವೆ ಎಣ್ಣೆ ಬಳಸುವುದು ತುಂಬಾ ಒಳ್ಳೆಯದು. ಇದರಲ್ಲಿ antioxidants ಅಂಶ ಇರುವುದರಿಂದ ಹೃದಯದ ಆರೋಗ್ಯಕ್ಕೆ ಒಳ್ಳೆಯದು.
ಎಲೆಕೋಸು: ಎಲೆಕೋಸನ್ನು ಹಸಿಯಾಗಿ ತಿಂದರೆ ತೂಕ ಕಡಿಮೆಯಾಗಲು ತುಂಬಾ ಸಹಕಾರಿ. ಎಲೆಕೋಸಿನಿಂದ ತಯಾರಿಸಿದ ಅಡುಗೆ ಪದಾರ್ಥಗಳ ಸೇವನೆ ಒಳ್ಳೆಯದು.
ಹೆಸರು ಕಾಳು: ಮೊಳಕೆ ಬರಿಸಿದ ಹೆಸರುಕಾಳಿನಲ್ಲಿ ವಿಟಮಿನ್ ಎ, ಬಿ, ಸಿ ಮತ್ತು ಇ ಹಾಗೂ ಅನೇಕ ಖನಿಜಾಂಶಗಳಿರುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ, ಕಬ್ಬಿಣದಂಶ, ಅಧಿಕ ನಾರಿನಂಶ ಕೊಲೆಸ್ಟ್ರಾಲ್ ಪ್ರಮಾಣವನ್ನ ಕಡಿಮೆ ಮಾಡಲು ಸಹಕಾರಿಯಾಗಿದೆ. ದೇಹದಲ್ಲಿ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಜೇನು: ಬೆಳಗ್ಗಿನ ಜಾವ ಒಂದು ಚಮಚ ಜೇನನ್ನು ಒಂದು ಲೋಟ ಬಿಸಿ ನೀರಿಗೆ ಹಾಕಿ ಕುಡಿದರೆ ದೇಹದ ತೂಕ ಕಡಿಮೆಯಾಗುವುದು.
ಮಜ್ಜಿಗೆ: ಮಜ್ಜಿಗೆಯಲ್ಲಿ ಅಧಿಕ ಕೊಬ್ಬಿನಂಶವಿರುವುದಿಲ್ಲ. ಇದನ್ನು ಪ್ರತಿನಿತ್ಯ ಸೇವಿಸಿದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶದ ಜೊತೆ ಸಮತೂಕದ ಮೈಕಟ್ಟು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications











