Latest Updates
-
ಗೃಹಹಿಂಸೆಯ ಸುಳಿಯಲ್ಲಿ ಸಿಲುಕಿದ್ದೀರಾ? ಸುರಕ್ಷಿತವಾಗಿ ಪಾರಾಗಲು ಈ ಮಾರ್ಗದರ್ಶಿ ಮತ್ತು ತುರ್ತು ಸಹಾಯವಾಣಿಗಳು ನಿಮಗೆ ನೆರವಾಗಲಿವೆ -
ಗಣೇಶ ಹಬ್ಬ 2026: ಬೆಂಗಳೂರಿನಲ್ಲಿ PoP ಮೂರ್ತಿಗಳ ಮೇಲೆ ಕಠಿಣ ನಿಷೇಧ, ಪರಿಸರ ಸ್ನೇಹಿ ಗಣಪತಿಯನ್ನು ಪತ್ತೆ ಹಚ್ಚುವುದು ಹೇಗೆ? -
ವೈ-ವೈ ನೂಡಲ್ಸ್ ಕಂಪನಿಗೆ FSSAI ಬಿಗ್ ಶಾಕ್: ಉತ್ಪಾದನೆ ಸ್ಥಗಿತ, ಅಸಲಿ ಕಾರಣವೇನು? -
ಭಾರತ-ಪಾಕಿಸ್ತಾನ ಹೈ-ವೋಲ್ಟೇಜ್ ಕದನ: ನಾಳೆ ದುಬೈನಲ್ಲಿ ಗೆಲ್ಲೋರು ಯಾರು? -
ಜನ್ಮಾಷ್ಟಮಿ ಉಪವಾಸ: ಸುಸ್ತಾಗದೆ, ಆರೋಗ್ಯಕರವಾಗಿ ವ್ರತ ಆಚರಿಸಲು ಇಲ್ಲಿವೆ ಸರಳ ಟಿಪ್ಸ್! -
'ವೆಡ್ ಇನ್ ಇಂಡಿಯಾ': ಕಡಿಮೆ ಬಜೆಟ್ನಲ್ಲಿ ಅದ್ಧೂರಿ ಮದುವೆಗೆ ಇಲ್ಲಿದೆ 3 ದಿನಗಳ ಮಾಸ್ಟರ್ ಪ್ಲಾನ್! -
ನಿಮ್ಮ ಮನೆಯ ಫ್ಯಾನ್ ಸುರಕ್ಷಿತವೇ? ದೊಡ್ಡ ಅವಘಡ ತಪ್ಪಿಸಲು ಈ 5 ನಿಮಿಷದ ಚೆಕ್ ಮರೆಯದಿರಿ -
ಎಚ್ಚರ! ಬೆಂಗಳೂರಿನಲ್ಲಿ ಶಿಶು ಆಹಾರದ ಮೇಲೆ FSSAI ದಾಳಿ: ನಿಮ್ಮ ಮಗುವಿನ ಆಹಾರ ಸುರಕ್ಷಿತವೇ? -
ಇಂದಿನ ಪೆಟ್ರೋಲ್, ಡೀಸೆಲ್ ದರ ಸ್ಥಿರ: ನಿಮ್ಮ ನಗರದ ಬೆಲೆ ತಿಳಿಯಿರಿ ಮತ್ತು ಮಳೆಗಾಲದ ಮೈಲೇಜ್ ಟಿಪ್ಸ್ ಇಲ್ಲಿದೆ -
ಡೆಂಗ್ಯೂ ಭೀತಿ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಕ್ರಮಗಳನ್ನು ಮರೆಯದಿರಿ!
ಊಟದ ನಂತರ ತಂಪು ನೀರು ಕುಡಿಯುವುದು ಎಷ್ಟು ಸರಿ?
ಕೋಲ್ಡ್ ವಾಟರ್ ಅಥವಾ ತಣ್ಣಿರು ಯಾರಿಗೆ ಪ್ರಿಯವಲ್ಲ ಹೇಳಿ. ದಣಿದ ದೇಹಕ್ಕೆ, ಬಾಯಾರಿದ ಒಡಲಿಗೆ ತಂಪು ನೀರಿನ ಸ್ಪರ್ಶ ಅತ್ಯಂತ ಹಿತಕರವಾದುದು. ಬೇಸಿಗೆಯ ಸಮಯದಲ್ಲಿ ಶೀತಲೀಕರಿಸಿದ ನೀರು ಎಲ್ಲರಿಗೂ ಅತೀ ಅವಶ್ಯಕ.ಜ್ಯೂಸ್ನಿಂದ ಹಿಡಿದು, ಐಸ್ಕ್ರೀಂ ನೀರು ಹೀಗೆ ಎಲ್ಲವೂ ಚಿಲ್ಡ್ ಆಗಿರಬೇಕೆಂದು ಮನ ಬಯಸುತ್ತದೆ. ತಂಪಾದ ಮಂಜುಗಡ್ಡೆ ಭರಿತ ನೀರು ಕುಡಿಯುವ ಮಜವೇ ಬೇರೆ!
ಊಟದ ಮೊದಲಾದರೂ ಊಟದ ನಂತರವಾದರೂ ತಂಪು ನೀರು ಬೇಕೇ ಬೇಕು. ಆದರೆ ಈ ಶೀತಲೀ ನೀರನ್ನು ಊಟದ ನಂತರ ಕುಡಿಯುವುದು ಎಷ್ಟು ಸರಿ ಎಂಬುದು ನಿಮಗೆ ತಿಳಿದಿದೆಯೇ? ಸುಖ ಎಲ್ಲಿದೆಯೋ ಅಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತೆ ತಂಪು ನೀರು ಹೇಗೆ ಸುಖಕರವೋ ಅಷ್ಟೇ ಅಪಾಯಕಾರಿ ಕೂಡ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಬಾಳೆಹಣ್ಣಿನ ಹತ್ತು ಹಲವು ಉಪಯೋಗಗಳು

ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ನಿಮ್ಮ ಬ್ಲಡ್ ಶುಗರ್ ಕಡಿಮೆ ಮಾಡುವುದು ಹೇಗೆ?
ಊಟದ ನಂತರ ನೀವು ಶೀತಲೀಕರಿಸಿದ ನೀರನ್ನು ಕುಡಿಯುವುದರಿಂದ ನೀವು ತಿಂದ ಆಹಾರದಲ್ಲಿರುವ ಎಣ್ಣೆಯುಕ್ತ ಅಂಶವನ್ನು ಇದು ಗಟ್ಟಿಯಾಗಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಈ ಘನ ಆಹಾರವು ಒಮ್ಮೆ ಆಸಿಡ್ನೊಂದಿಗೆ ಪ್ರತಿಕ್ರಿಯಿಸಿದರೆ ಸಾಕು ಅದು ವಿಘಟನೆಯಾಗುತ್ತದೆ ಮತ್ತು ಕರುಳು ಅದನ್ನು ಹೀರಿಕೊಳ್ಳುತ್ತದೆ.
ಕರುಳಿನ ಸಾಲಿನಲ್ಲಿ ಕಾಣಿಸಿಕೊಳ್ಳುವ ಈ ಘನ ಆಹಾರ ಆದಷ್ಟು ಬೇಗನೇ ಕೊಬ್ಬಾಗಿ ಮಾರ್ಪಡುತ್ತದೆ ಮತ್ತು ಕ್ಯಾನ್ಸರ್ಗೆ ಕಾರಣವಾಗುತ್ತದೆ. ಊಟದ ನಂತರ ಬಿಸಿಯಾದ ಸೂಪ್ ಇಲ್ಲವೇ ಬೆಚ್ಚಗಿನ ನೀರನ್ನು ಕುಡಿಯುವುದು ಒಳ್ಳೆಯದಾಗಿದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಪಿತ್ತಜನಕಾಂಗದ ರೋಗಕ್ಕೆ ಪರಿಣಾಮಕಾರಿ ಮನೆ ಮದ್ದುಗಳು
ನಿಮ್ಮ ಜೀರ್ಣಕ್ರಿಯೆಯ ಮೇಲೆ ಇದು ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತದೆ. ತಂಪಾದ ನೀರನ್ನು ಊಟದ ನಂತರ ಕುಡಿಯುವುದರಿಂದ ಇದು ದೇಹದಲ್ಲಿ ಲೋಳೆಯ ಅಂಶವನ್ನು ಹೆಚ್ಚು ಮಾಡುತ್ತದೆ ಈ ಲೋಳೆಯ ಹೆಚ್ಚುವರಿ ಅಂಶವು ರೋಗನಿರೋಧಕ ವ್ಯವಸ್ಥೆಯ ಕಾರ್ಯವನ್ನು ಕುಗ್ಗಿಸುತ್ತದೆ ಮತ್ತು ಶೀಘ್ರವಾಗಿ ಶೀತ ಹಾಗೂ ಕಾಯಿಲೆ ಬೀಳಲು ಕಾರಣವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications