Latest Updates
-
ಶ್ರಾವಣ ಸೋಮವಾರದ ಉಪವಾಸ: ಆಫೀಸ್ ಕೆಲಸದ ನಡುವೆ 120 ರೂಪಾಯಿಯಲ್ಲಿ ಆರೋಗ್ಯಕರ ಲಂಚ್ಬಾಕ್ಸ್ ಸಿದ್ಧಪಡಿಸುವುದು ಹೇಗೆ? -
ವಿಶ್ವ ಸಿಂಹ ದಿನ: ಸಿಂಹದಂತೆ ಗರ್ಜಿಸುವ ಶಕ್ತಿ ಪಡೆಯಲು 10 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಸೂರ್ಯಗ್ರಹಣದ ಗೊಂದಲ: ಹಿರಿಯರ ನಂಬಿಕೆಗಳ ನಡುವೆ ಯುವ ದಂಪತಿಗಳು ಶಾಂತಿ ಕಾಪಾಡುವುದು ಹೇಗೆ? -
ಲಾಲ್ಬಾಗ್ ಫಲಪುಷ್ಪ ಪ್ರದರ್ಶನ: ನಿಮ್ಮ ಬಾಲ್ಕನಿಯಲ್ಲಿಯೇ ಸೃಷ್ಟಿಸಿ ಹಸಿರು ಸ್ವರ್ಗ! -
ಕೇರಳದ ಉಚಿತ ಓಣಂ ಕಿಟ್: ದಿನಸಿ ಪದಾರ್ಥಗಳು ಹಾಳಾಗದಂತೆ ಇಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಆಗಸ್ಟ್ ಕ್ರಾಂತಿ ದಿನ: ಸೋಶಿಯಲ್ ಮೀಡಿಯಾದಲ್ಲಿ ದೇಶಭಕ್ತಿ ಮೆರೆಯಲು ಇಲ್ಲಿದೆ ಬೆಸ್ಟ್ ಐಡಿಯಾಸ್! -
ಮಳೆಗಾಲದ ಓಟದ ನಂತರ ಕಾಲು ನೋವೇ? ಕೀಲುಗಳ ರಕ್ಷಣೆಗೆ ಈ 12 ನಿಮಿಷದ ಸರಳ ವ್ಯಾಯಾಮಗಳು -
ಶ್ರಾವಣ ಶಿವರಾತ್ರಿ 2026: ಮಳೆಗಾಲದಲ್ಲಿ ಜಾಗರಣೆ ಮಾಡುವಾಗ ಈ ಮುನ್ನೆಚ್ಚರಿಕೆ ಮರೆಯದಿರಿ, ಪೂಜೆ ಸುಗಮವಾಗಲಿ! -
ಬೆಂಗಳೂರಿನ ಹೈ-ಎಂಡ್ ಹೋಟೆಲ್ಗಳಲ್ಲಿ ಕೊಳೆತ ಆಹಾರ: ನೀವು ತಿನ್ನುವ ಊಟ ನಿಜಕ್ಕೂ ಸುರಕ್ಷಿತವೇ? -
2026ರ ಫ್ರೀಡಂ ಸೇಲ್: ಆನ್ಲೈನ್ ಶಾಪಿಂಗ್ನಲ್ಲಿ ಹಣ ಉಳಿಸಲು ಈ ಸ್ಮಾರ್ಟ್ ಟಿಪ್ಸ್ ಮಿಸ್ ಮಾಡ್ಬೇಡಿ!
ಊಟದ ನಂತರ ತಂಪು ನೀರು ಕುಡಿಯುವುದು ಎಷ್ಟು ಸರಿ?
ಕೋಲ್ಡ್ ವಾಟರ್ ಅಥವಾ ತಣ್ಣಿರು ಯಾರಿಗೆ ಪ್ರಿಯವಲ್ಲ ಹೇಳಿ. ದಣಿದ ದೇಹಕ್ಕೆ, ಬಾಯಾರಿದ ಒಡಲಿಗೆ ತಂಪು ನೀರಿನ ಸ್ಪರ್ಶ ಅತ್ಯಂತ ಹಿತಕರವಾದುದು. ಬೇಸಿಗೆಯ ಸಮಯದಲ್ಲಿ ಶೀತಲೀಕರಿಸಿದ ನೀರು ಎಲ್ಲರಿಗೂ ಅತೀ ಅವಶ್ಯಕ.ಜ್ಯೂಸ್ನಿಂದ ಹಿಡಿದು, ಐಸ್ಕ್ರೀಂ ನೀರು ಹೀಗೆ ಎಲ್ಲವೂ ಚಿಲ್ಡ್ ಆಗಿರಬೇಕೆಂದು ಮನ ಬಯಸುತ್ತದೆ. ತಂಪಾದ ಮಂಜುಗಡ್ಡೆ ಭರಿತ ನೀರು ಕುಡಿಯುವ ಮಜವೇ ಬೇರೆ!
ಊಟದ ಮೊದಲಾದರೂ ಊಟದ ನಂತರವಾದರೂ ತಂಪು ನೀರು ಬೇಕೇ ಬೇಕು. ಆದರೆ ಈ ಶೀತಲೀ ನೀರನ್ನು ಊಟದ ನಂತರ ಕುಡಿಯುವುದು ಎಷ್ಟು ಸರಿ ಎಂಬುದು ನಿಮಗೆ ತಿಳಿದಿದೆಯೇ? ಸುಖ ಎಲ್ಲಿದೆಯೋ ಅಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂಬಂತೆ ತಂಪು ನೀರು ಹೇಗೆ ಸುಖಕರವೋ ಅಷ್ಟೇ ಅಪಾಯಕಾರಿ ಕೂಡ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಬಾಳೆಹಣ್ಣಿನ ಹತ್ತು ಹಲವು ಉಪಯೋಗಗಳು

ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ನಿಮ್ಮ ಬ್ಲಡ್ ಶುಗರ್ ಕಡಿಮೆ ಮಾಡುವುದು ಹೇಗೆ?
ಊಟದ ನಂತರ ನೀವು ಶೀತಲೀಕರಿಸಿದ ನೀರನ್ನು ಕುಡಿಯುವುದರಿಂದ ನೀವು ತಿಂದ ಆಹಾರದಲ್ಲಿರುವ ಎಣ್ಣೆಯುಕ್ತ ಅಂಶವನ್ನು ಇದು ಗಟ್ಟಿಯಾಗಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಈ ಘನ ಆಹಾರವು ಒಮ್ಮೆ ಆಸಿಡ್ನೊಂದಿಗೆ ಪ್ರತಿಕ್ರಿಯಿಸಿದರೆ ಸಾಕು ಅದು ವಿಘಟನೆಯಾಗುತ್ತದೆ ಮತ್ತು ಕರುಳು ಅದನ್ನು ಹೀರಿಕೊಳ್ಳುತ್ತದೆ.
ಕರುಳಿನ ಸಾಲಿನಲ್ಲಿ ಕಾಣಿಸಿಕೊಳ್ಳುವ ಈ ಘನ ಆಹಾರ ಆದಷ್ಟು ಬೇಗನೇ ಕೊಬ್ಬಾಗಿ ಮಾರ್ಪಡುತ್ತದೆ ಮತ್ತು ಕ್ಯಾನ್ಸರ್ಗೆ ಕಾರಣವಾಗುತ್ತದೆ. ಊಟದ ನಂತರ ಬಿಸಿಯಾದ ಸೂಪ್ ಇಲ್ಲವೇ ಬೆಚ್ಚಗಿನ ನೀರನ್ನು ಕುಡಿಯುವುದು ಒಳ್ಳೆಯದಾಗಿದೆ.
ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ಪಿತ್ತಜನಕಾಂಗದ ರೋಗಕ್ಕೆ ಪರಿಣಾಮಕಾರಿ ಮನೆ ಮದ್ದುಗಳು
ನಿಮ್ಮ ಜೀರ್ಣಕ್ರಿಯೆಯ ಮೇಲೆ ಇದು ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತದೆ. ತಂಪಾದ ನೀರನ್ನು ಊಟದ ನಂತರ ಕುಡಿಯುವುದರಿಂದ ಇದು ದೇಹದಲ್ಲಿ ಲೋಳೆಯ ಅಂಶವನ್ನು ಹೆಚ್ಚು ಮಾಡುತ್ತದೆ ಈ ಲೋಳೆಯ ಹೆಚ್ಚುವರಿ ಅಂಶವು ರೋಗನಿರೋಧಕ ವ್ಯವಸ್ಥೆಯ ಕಾರ್ಯವನ್ನು ಕುಗ್ಗಿಸುತ್ತದೆ ಮತ್ತು ಶೀಘ್ರವಾಗಿ ಶೀತ ಹಾಗೂ ಕಾಯಿಲೆ ಬೀಳಲು ಕಾರಣವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications