Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಆರೋಗ್ಯದ ಆಗರ, ಹಣ್ಣು-ತರಕಾರಿಗಳ ವೈಶಿಷ್ಟ್ಯವೇನು?
ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಮಾತಿನಂತೆ ನಾವು ತೆಗೆದುಕೊಳ್ಳಬೇಕಾದ ಆಹಾರ ಕ್ರಮದಲ್ಲಿ ನಮಗೆ ಹೆಚ್ಚಿನ ಕಾಳಜಿ ಇರಬೇಕು. ಹೊಟ್ಟೆ ತುಂಬಿಸಲು ಏನಾದರೊಂದನ್ನು ಸೇವಿಸಿದರಾಯಿತು ಎಂಬ ನಿರ್ಲಕ್ಷ್ಯವೇ ರೋಗಕ್ಕೆ ಆಹ್ವಾನವನ್ನು ನೀಡುತ್ತದೆ. ಆದರೆ ಸಣ್ಣ ವಯಸ್ಸಿನಿಂದಲೇ ಸಾಧ್ಯವಾದಷ್ಟು ಹೆಚ್ಚಿನ ಪ್ರಮಾಣದಲ್ಲಿ ಪೌಷ್ಠಿಕ ಆಹಾರಗಳ ಸೇವನೆಗೆ ಒತ್ತು ನೀಡಬೇಕು.
ಆಹಾರಗಳು ನಮ್ಮ ಶರೀರವನ್ನು ಪೋಷಣೆ ಮಾದುವುದಲ್ಲದೆ ನಮ್ಮ ದೈನಂದಿನ ಚಟುವಟಿಕೆಗಳಿಗೆ ಉತ್ತೇಜನಕೊಡುತ್ತದೆಂದು ಎಲ್ಲರಿಗೂ ತಿಳಿದ ವಿಷಯ. ಆದರೆ ಅದೇ ಆಹಾರದಿಂದ ಕೆಲವು ಕಾಯಿಲೆಗಳನ್ನು - ಅಂದರೆ ಅಧಿಕ ರಕ್ತದೊತ್ತಡ, ಅಸ್ತಮಾ, ಚರ್ಮ ತುರಿಕೆ ಮತ್ತು ಮೂತ್ರಕೋಶ ಸೋಂಕು - ಇಂತಹ ಕಾಯಿಲೆಗಳನ್ನು ತಡೆಗಟ್ಟಬಹುದು. ಕೆಲವೊಂದು ಹಣ್ಣುಗಳು ಹಾಗೂ ತರಕಾರಿಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ. ನಿಮ್ಮನ್ನು ಆರೋಗ್ಯಕರವಾಗಿಸಲು ಅಗತ್ಯವಾಗಿರುವ ಪೋಷಕಾಂಶಗಳು ಇವುಗಳು ಒಳಗೊಂಡಿವೆ. ದಿನವೂ ಈ ಆಹಾರಗಳನ್ನು ನಿಮಗೆ ಸೇವಿಸಬಹುದು.
ಸೇಬು ಹಣ್ಣು

ಸೇಬಿನಲ್ಲಿ ಫ್ಲಾವನೋಯ್ಡ್ಗಳು (ಆಂಟಿ-ಆಕ್ಸಿಡೆಂಟ್ಗಳು) ಅಧಿಕವಾಗಿರುತ್ತವೆ. ಇವುಗಳು ಅಸ್ತಮಾ ಮತ್ತು ಮಧುಮೇಹವನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ. ಇದರ ಜೊತೆಗೆ ಸೇಬುಗಳು ನಮ್ಮ ಹಲ್ಲುಗಳಿಗೆ ಬಿಳುಪನ್ನು ಸಹ ನೀಡುತ್ತವೆ ಮತ್ತು ಮೌತ್ ಫ್ರೆಶ್ನರ್ ಆಗಿ ಸಹ ಕಾರ್ಯ ನಿರ್ವಹಿಸುತ್ತವೆ.ಇದು ಸಹ ಮಧುಮೇಹದ ವಿರುದ್ಧ ಕೂಡ ಹೋರಾಡುತ್ತದೆ.
ಕೊತ್ತಂಬರಿ ಸೊಪ್ಪು
ಕೊತ್ತಂಬರಿಯಲ್ಲಿರುವ ಆರು ಪ್ರಮುಖ ಆಮ್ಲಗಳಲ್ಲಿ ಲಿನೋಲಿಕ್ ಆಸಿಡ್ ಎಂಬ ಆಮ್ಲವೂ ಇದೆ. ಇದು ರಕ್ತದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ (LDL - Low density Lipoprotiens) ಗಳನ್ನು ಕಡಿಮೆ ಮಾಡಲು ಪ್ರಮುಖವಾಗಿದೆ. ಇದರೊಂದಿಗೆ ಓಲಿಕ್ ಆಮ್ಲ, ಪಾಮಿಟಿಕ್ ಆಮ್ಲ, ಸ್ಟಿಯಾರಿಕ್ ಅಮ್ಲ ಮತ್ತು ವಿಟಮಿನ್ ಸಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕೆಡಿಮೆಗೊಳಿಸಲು ನೆರವಾಗುತ್ತವೆ.
ದ್ರಾಕ್ಷಿ
ದ್ರಾಕ್ಷಿಯಲ್ಲಿ ಸಮೃದ್ಧವಾದ ರೆಸ್ವೆರಟ್ರೊಲ್ ಇರುತ್ತದೆ. ಇದು ಸಹ ಒಂದು ಬಗೆಯ ಆಂಟಿಆಕ್ಸಿಡೆಂಟ್ ಆಗಿದ್ದು, ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣು ಕ್ಯಾನ್ಸರ್ ಕೋಶಗಳನ್ನು (ಕೋಲನ್ ಕ್ಯಾನ್ಸರ್ ಮತ್ತು ಜಠರದ ಕ್ಯಾನ್ಸರ್) ಬೆಳೆಯದಂತೆ ಕಾಪಾಡುತ್ತದೆ. ಮಧುಮೇಹಿಗಳು ಇದನ್ನು ಸೇವಿಸಬಹುದು.
ಹೂಕೋಸು
ಹೂಕೋಸು ಹಾಗೂ ಇತರ ಕ್ಯಾಬೇಜು ವರ್ಗಕ್ಕೆ ಸೇರಿದ ತರಕಾರಿಗಳು ರಕ್ತದೊತ್ತಡವನ್ನು ಹಾಗೂ ಮೂತ್ರಪಿ೦ಡಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಬಲ್ಲವು. ವಿಜ್ಞಾನಿಗಳು ಹಾಗೂ ಸ೦ಶೋಧನಾ ಅಧ್ಯಯನಗಳು ಹೇಳಿರುವ ಪ್ರಕಾರ, DNA methylation ಅನ್ನು ಸುಧಾರಿಸುವಲ್ಲಿ sulforaphane ನ ಪ್ರಯೋಜನಗಳು ಅಡಗಿವೆ. ಇದ೦ತೂ ಜೀವಕೋಶಗಳ ಸಹಜವಾದ ಕಾರ್ಯನಿರ್ವಹಣೆಗೆ ಹಾಗೂ ಸಮರ್ಪಕ gene ಅಭಿವ್ಯಕ್ತಿಗೆ, ವಿಶೇಷವಾಗಿ endothelium ಎ೦ದು ಕರೆಯಲ್ಪಡುವ, ಸುಲಭವಾಗಿ ಹಾನಿಗೊಳಪಡುವ ರಕ್ತನಾಳಗಳ ಒಳಮೇಲ್ಮೈಗಳ ವಿಚಾರದಲ್ಲ೦ತೂ ಇದು ಬಹು ಅವಶ್ಯವಾದುದಾಗಿದೆ. ಹೀಗಾಗಿ ಹೂಕೋಸನ್ನು ನಿಮ್ಮ ಆಹಾರಕ್ರಮಕ್ಕೆ ಸೇರಿಸಿಕೊ೦ಡಲ್ಲಿ, ಅದು ನಿಮ್ಮ ಹೃದಯದ ಸ್ವಾಸ್ಥ್ಯಕ್ಕೆ ಪೂರಕವಾಗಿರಬಲ್ಲದು.
ಮಾವಿನ ಹಣ್ಣು
ಮಾವಿನ ಹಣ್ಣಿನಲ್ಲಿರುವ ಜಿಯಾಕ್ಸಾಂತಿನ್ ಮತ್ತು ಲೂಟೇನ್ ಎಂಬ ಆಂಟಿಆಕ್ಸಿಡೆಂಟ್ಗಳು ಮಧುಮೇಹ ಮತ್ತು ಕೆಲವೊಂದು ನಿರ್ದಿಷ್ಟ ಬಗೆಯ ಕಣ್ಣಿನ ಡಿಸಾರ್ಡರ್ಗಳನ್ನು ನಿವಾರಿಸಲು ಸಹಾಯ ಮಾಡುತ್ತವೆ.
ಬ್ರೊಕೊಲಿ
ಬ್ರೊಕೊಲಿಯಲ್ಲಿ ವಿಟಮಿನ್ಗಳು, ಖನಿಜಗಳು, ನಾರಿನಾಂಶ ಮತ್ತು ಆಂಟಿಆಕ್ಸಿಡೆಂಟ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇವುಗಳಿಂದ ಮುಕ್ತ ಮೂಲ ಸ್ವರೂಪಗಳಿಗಾಗುವ ಅಪಾಯವನ್ನು ತಡೆಗಟ್ಟಬಹುದು. ಇದು ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆಗೊಳಿಸಲು ಒಂದು ಅತ್ಯಂತ ವಿಶಿಷ್ಟವಾದ ಆಹಾರ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications




