Latest Updates
-
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್!
ರೋಗ ನಿರೋಧಕ ಶಕ್ತಿ ಹೆಚ್ಚಿಸಿ, ಬೊಜ್ಜು ಕರಗಿಸುವ ಆಯುರ್ವೇದ ಡಿಟಾಕ್ಸ್ ಡಯಟ್
ಆಗಾಗ ನಮ್ಮ ದೇಹವನ್ನು ಡಿಟಾಕ್ಸ್ ಮಾಡಬೇಕು. ಆಗ ಮಾತ್ರ ನಮ್ಮ ದೇಹದಲ್ಲಿರುವ ಕಶ್ಮಲ ಹೊರ ಹೋಗುವುದು. ದೇಹವನ್ನು ಡಿಟಾಕ್ಸ್ ಮಾಡುವುದರಿಂದ ಅನೇಕ ಕಾಯಿಲೆ ತಡೆಗಟ್ಟಬಹುದು ಹಾಗೂ ಮೈ ಬೊಜ್ಜು ಹೆಚ್ಚುವುದನ್ನು ತಡೆಗಟ್ಟಬಹುದು.
ಆಯುರ್ವೇದ ಪ್ರಕಾರ ದೇಹದಲ್ಲಿ ದೋಷ ಹಾಗೂ ಕಶ್ಮಲ ಹೆಚ್ಚಾದರೆ ಅನೇಕ ತೊಂದರೆಗಳು ಉಂಟಾಗುವುದು. ಆದ್ದರಿಂದ ದೇಹವನ್ನು ಡಿಟಾಕ್ಸ್ ಮಾಡಬೇಕು. ಡಿಟಾಕ್ಸ್ ಮಾಡುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುವುದು.
ದೇಹವನ್ನು ಡಿಟಾಕ್ಸ್ ಮಾಡುವುದು ಹೇಗೆ ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ನಿಮ್ಮ ದೇಹವನ್ನುಒಳಗಿನಿಂದ ಕ್ಲೆನ್ಸ್ ಮಾಡುವುದು ಹೇಗೆ, ಅದಕ್ಕಾಗಿ ನಿಮ್ಮ ಡಯಟ್ ಪ್ಲ್ಯಾನ್ ಹೇಗಿರಬೇಕು ಎಂದು ನೋಡೋಣ ಬನ್ನಿ:

ಡಿಟಾಕ್ಸ್ ಆಹಾರ ಕ್ರಮ
* ಮೊದಲ 2 ದಿನ ಗಂಟೆಗೊಮ್ಮೆ 1 ಕಪ್ ಶುಂಠಿ ನೀರು ಕುಡಿಯಬೇಕು.
ಶುಂಠಿ ನೀರು ತಯಾರಿಸುವುದು ಹೇಗೆ?
3 ಲೀಟರ್ ನೀರಿಗೆ 1-2 ಚಮಚ ಒಣ ಶುಂಠಿ ಪುಡಿ ಹಾಕಿ ಕುದಿಸಿ ಆ ನೀರನ್ನು ಕುಡಿಯಬೇಕು.
3 ಹಾಗೂ 4ನೇ ದಿನ ಹೆಸರು ಬೇಳೆ ಹಾಗೂ ತರಕಾರಿ ಸೂಪ್ ಅನ್ನು 2-3 ಗಂಟೆಗೊಮ್ಮೆ ಸೇವಿಸಬೇಕು.
5 ಹಾಗೂ 6ನೇ ದಿನ ಹೆಸರು ಬೇಳೆ ಸೂಪ್ ಅನ್ನು 2-3 ಗಂಟೆಗೊಮ್ಮೆ ಒಂದು ಬೌಲ್ನಂತೆ ತೆಗೆದುಕೊಳ್ಳಬೇಕು.
7 ನೇ ದಿನ ಬರೀ ತರಕಾರಿ ನಿಮ್ಮ ಆಹಾರಕ್ರಮದಲ್ಲಿ ಸೇರಿಸಿ. ಈ ದಿನ ಈ ಆಹಾರಗಳನ್ನು ಸೇವಿಸಬಹುದು.
* ಹೆಸರು ಕಾಳು ಬೇಯಿಸಿ ತಿನ್ನುವುದು
* ಅಥವಾ ಹೆಸರುಕಾಳಿನ ಕಿಚಡಿ
* ಸಿಹಿ ಕುಂಬಳಕಾಯಿ, ಸೊಪ್ಪು, ಪಾಲಾಕ್, ಬೀನ್ಸ್, ಹಾಗಾಲಕಾಯಿ, ಬ್ರೊಕೋಲಿ, ಬೀಟ್ರೂಟ್, ಸೆಲೆರಿ, ಸೋರೆಕಾಯಿ ಈ ಆಹಾರಗಳನ್ನು ನಿಮ್ಮ ಆಹಾರಕ್ರಮದಲ್ಲಿ ಸೇರಿಸಬಹುದು.

ಇನ್ನು ಈ ಸ್ಮೂತಿ ಮಾಡಿ ಸೇವಿಸುವುದರಿಂದ ಕೂಡ ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.
* ಸ್ಮೂತಿ ರೆಸಿಪಿ 1
1 ಲೋಟ ಪುದೀನಾ ಕೊತ್ತಂಬರಿ ಜ್ಯೂಸ್
ಸ್ವಲ್ಪ ಪುದೀನಾ, ಸ್ವಲ್ಪ ಕೊತ್ತಂಬರಿ ಸೊಪ್ಪು ತೆಗೆದು, ನೀರು ಹಾಕಿ ರುಬ್ಬಿ ಜ್ಯೂಸ್ ಮಾಡಿ ಅದಕ್ಕೆ ಉಪ್ಪು, ಪೆಪ್ಪರ್ ಪೌಡರ್ ಹಾಕಿ ಕುಡಿಯಬಹುದು.
ಸ್ಮೂತಿ ರೆಸಿಪಿ 2
* ಒಂದು ಸಾಧಾರಣ ಗಾತ್ರದ ಸೇಬು+1/2 ಬೀಟ್ರೂಟ್ _ 1 ಕ್ಯಾರೆಟ್+ ಒಂದು ಚಿಕ್ಕ ತುಂಡು ಶುಂಠಿ
ಇವುಗಳನ್ನು ಹಾಕಿ ರುಬ್ಬಿ ಜ್ಯೂಸ್ ತಯಾರಿಸಿ ಕುಡಿಯಿರಿ.

ಡಿಟಾಕ್ಸ್ ಟೀ
* ಲೀಟರ್ ನೀರಿಗೆ ಈ ಕೆಳಗಿನ ಹರ್ಬ್ಸ್ (ಗಿಡ ಮೂಲಿಕೆ) ಹಾಕಿ ಕುದಿಸಿ ಅದನ್ನು ದಿನದಲ್ಲಿ ಕುಡಿಯುತ್ತಾ ಇದ್ದರೆ ದೇಹ ಡಿಟಾಕ್ಸ್ ಆಗುವುದು.
* ಜೀರಿಗೆ: ಅಜೀರ್ಣ, ಗ್ಯಾಸ್ಟ್ರಿಕ್ ಮುಂತಾದ ಸಮಸ್ಯೆ ನಿವಾರಣೆಗೆ ಇದು ಸಹಕಾರಿ.
* ಕೊತ್ತಂಬರಿ ಬೀಜ: ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಹಾಕಿ ಕುದಿಸಿ ಕುಡಿದರೆ ಜೀರ್ಣಕ್ರಿಯೆಗೆ ಸಹಕಾರಿ ದೇಹದ ಉಷ್ಣತೆ ಕಡಿಮೆ ಮಾಡುವುದು.
* ಸೋಂಪು: ಸೋಂಪನ್ನು ಕೂಡ ನೀರಿನಲ್ಲಿ ಹಾಕಿ ಕುದಿಸಿ ಕುಡಿಯುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ದೂರವಗುವುದು, ಅಲ್ಲದೆ ದೇಹದಲ್ಲಿರುವ ಕೊಬ್ಬು ಕರಗಿಸಲು ಸಹಕಾರಿ.
ಹರ್ಬಲ್ ಟೀ ಪ್ರಯೋಜನಗಳು
ಈ ಹರ್ಬಲ್ ಟೀ ಕುಡಿಯುವುದರಿಂದ ದೇಹದಲ್ಲಿ ಜೀರ್ಣಕ್ರಿಯೆ ಚೆನ್ನಾಗಿ ನಡೆಯುವುದು ಹಾಗೂ ದೇಹವು ಆಹಾರದಲ್ಲಿನ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುವುದು, ಜೊತೆಗೆ ದೇಹದಲ್ಲಿರುವ ಕಶ್ಮಲವನ್ನು ಮಲ, ಮೂತ್ರದ ಮೂಲಕ ಹೊರ ಹಾಕುವುದು.

ಇನ್ನು ಈ ರೀತಿ ಮಾಡುವುದರಿಂದಲೂ ನಿಮ್ಮ ದೇಹದ ಆರೋಗ್ಯ ಹೆಚ್ಚಿಸಬಹುದು.
* 1/2 ಚಮಚ ಕಾಳು ಮೆಣಸಿನ ಪುಡಿ+ 1 ಚಮಚ ಶುದ್ಧ ಹಸುವಿನ ತುಪ್ಪವನ್ನು ಮಿಶ್ರ ಮಾಡಿ ಖಾಲಿ ಹೊಟ್ಟೆಯಲ್ಲಿ ಸೇವಿಸಿ.
* 1 ಚಮಚ ಅಜ್ವೈನ್ ಪುಡಿ _ 1 ಚಮಚ ಬೆಲ್ಲದ ಪುಡಿ + 1 ಚಮಚ ಶುದ್ಧ ಹಸುವಿನ ತುಪ್ಪ ಇವುಗಳನ್ನು ಮಿಶ್ರ ಮಾಡಿ ರಾತ್ರಿ ಮಲಗುವ ಮುಂಚೆ ತೆಗೆದುಕೊಳ್ಳಿ. ಈ ರೀತಿ ಪ್ರತಿದಿನ ಮಾಡುವುದರಿಂದ ಆರೋಗ್ಯ ಉತ್ತಮವಾಗುವುದು.



Click it and Unblock the Notifications