ಚಂಡಿಪುರ ವೈರಸ್‌ಗೆ ಅಸುನೀಗಿದ ನಾಲ್ವರು ಮಕ್ಕಳು..! ಇದರ ಲಕ್ಷಣವೇನು? ಹರಡುವುದು ಹೇಗೆ?

ಕಾಲ ಉರುಳಿದಂತೆ ಹೊಸ ಹೊಸ ಕಾಯಿಲೆಗಳು, ವೈರಸ್ ಗಳು ಮಾನವ ಕುಲವನ್ನು ಕಾಡಲು ಆರಂಭಿಸಿದೆ. ಅದ್ರಲ್ಲೂ ಕೋವಿಡ್ ವೈರಸ್ ಹೆಸರು ಕೇಳಿದರೆ ಒಮ್ಮೆ ಎಲ್ಲರು ಆಘಾತಕ್ಕೊಳಗಾಗುತ್ತಾರೆ. ಇದಾದ ಬಳಿಕ ನಮ್ಮ ನಡುವೆ ಹತ್ತಾರು ವೈರಸ್ ಪ್ರಕರಣಗಳು ಸುಳಿದಿವೆ. ಎಬೋಲಾ, ಡೆಂಘ್ಯು, ವೆಸ್ಟ್‌ ನೈಲ್, ಮಲೇರಿಯಾ, ಝಿಕಾ ಹೀಗೆ ಒಂದಲ್ಲಾ ಒಂದು ವೈರಸ್‌ಗಳು ಹರಡುತ್ತಲೇ ಇರುತ್ತದೆ.

ಈಗ ಮತ್ತೊಂದು ಹೊಸ ವೈರಸ್ ಕಾಡಲು ಆರಂಭಿಸಿದ್ದು, 4 ಮಂದಿ ಮಕ್ಕಳು ಈ ವೈರಸ್‌ಗೆ ಈಗ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಹೌದು ಗುಜರಾತ್‌ನಲ್ಲಿ ಹೊಸದೊಂದು ವೈರಸ್ ಪತ್ತೆಯಾಗಿದೆ. ಚಂಡೀಪುರ ವೈರಸ್ ಎಂದು ಕರೆಲಾಗುತ್ತಿರುವ ಈ ವೈರಸ್‌ನಿಂದಾಗಿ 4 ಮಕ್ಕಳು ಅಸುನೀಗಿದ್ದಾರೆ ಎಂದು ವರದಿಯಾಗಿದೆ.

Four Children Died From Chandipur Virus

ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ಚಂಡಿಪುರ ವೈರಸ್‌ನ ಶಂಕಿತ ಸೋಂಕು ನಾಲ್ಕು ಮಕ್ಕಳನ್ನು ಬಲಿ ತೆಗೆದುಕೊಂಡಿದೆ ಮತ್ತು ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಇಬ್ಬರು ಮಕ್ಕಳು ಜಿಲ್ಲೆಯ ಹಿಮ್ಮತ್‌ನಗರದ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಲ್ಲಾ ಆರು ಮಕ್ಕಳ ರಕ್ತದ ಮಾದರಿಗಳನ್ನು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್‌ಐವಿ) ದೃಢೀಕರಣಕ್ಕಾಗಿ ಕಳುಹಿಸಲಾಗಿದೆ ಮತ್ತು ಅವರ ಫಲಿತಾಂಶಗಳಿಗಾಗಿ ಕಾಯಲಾಗುತ್ತಿದೆ. ಈ ವೈರಸ್ ಹೇಗೆ ಹರಡುತ್ತಿದೆ, ಇದರ ಅಪಾಯವೇನು? ಸಾವಿನ ಪ್ರಮಾಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದ್ದು, ಜನರಲ್ಲಿ ಹೊಸ ಆತಂಕ ಸೃಷ್ಟಿಯಾಗಿದೆ.

ಚಂಡಿಪುರ ವೈರಸ್‌ನ ಲಕ್ಷಣಗಳೇನು ಗೊತ್ತಾ?

ಅಚ್ಚರಿ ಅಂದರೆ ಈ ಚಂಡೀಪುರ ವೈರಸ್ ಸಹ ಸೊಳ್ಳೆಗಳಿಂದಲೇ ಹರಡುತ್ತದೆ. ಸೊಳ್ಳೆಗಳು ಕಚ್ಚುವುದರಿಂದ ಈ ವೈರಸ್ ಹರಡುತ್ತದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಈ ವೈರಸ್ ವಿಪರೀತ ಜ್ವರ ಉಂಟು ಮಾಡುತ್ತದೆ. ಜ್ವರದಂತೆಯೇ ರೋಗಲಕ್ಷಣಗಳು ಮತ್ತು ತೀವ್ರವಾದ ಎನ್ಸೆಫಾಲಿಟಿಸ್ (ಮೆದುಳಿನ ಉರಿಯೂತ) ಸಹ ಕಂಡುಬರುತ್ತದೆ. ಈ ವೈರಸ್ ತಗುಲಿದ ಬಳಿಕ ತೀವ್ರ ಅನಾರೋಗ್ಯ, ಕೋಮಾ ಮತ್ತು ಸಾವಿನ ತ್ವರಿತ ಪ್ರಗತಿಗೆ ಕಾರಣವಾಗಬಹುದು.

ರೋಗಕಾರಕವು ರಾಬ್ಡೋವಿರಿಡೆ ಕುಟುಂಬದ ವೆಸಿಕ್ಯುಲೋವೈರಸ್‌ನ ವಂಶದಿಂದ ಬಂದಿದ್ದಾಗಿದೆ. ಸೊಳ್ಳೆಯಿಂದ ಮಾತ್ರವಲ್ಲ ಈ ವೈರಸ್ ನೊಣಗಳು, ಒಣಗು ಸೇರಿ ಪ್ರಾಣಿಗಳ ಮೈಮೇಲೆ ಕೂರುವ ಕೀಟಗಳ ಮೂಲಕವೂ ಹರಡಬಹುದು ಎಂದು ಅಂದಾಜಿಸಲಾಗಿದೆ. ಅದರೆ ಈ ಕುರಿತು ಇನ್ನಷ್ಟೇ ಅಧ್ಯಯನ ನಡೆಯುತ್ತಿದೆ.

ಜುಲೈ 10 ರಂದು ನಾಲ್ಕು ಮಕ್ಕಳು ಸಾವನ್ನಪ್ಪಿದ ನಂತರ ಹಿಮ್ಮತ್‌ನಗರ ಸಿವಿಲ್ ಆಸ್ಪತ್ರೆಯ ಮಕ್ಕಳ ವೈದ್ಯರು ಚಂಡಿಪುರ ವೈರಸ್‌ನ ಪಾತ್ರವನ್ನು ಶಂಕಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ವೈರಸ್ ಮತ್ತಷ್ಟು ಹರಡುವುದನ್ನು ತಡೆಗಟ್ಟುವ ಸಲುವಾಗಿ ಪೀಡಿತ ಪ್ರದೇಶಗಳಲ್ಲಿ ಕೀಟಗಳು ಮತ್ತು ಸೊಳ್ಳೆಗಳನ್ನು ಕೊಲ್ಲಲು ಕ್ರಮ ಕೈಗೊಳ್ಳಲಾಗಿದೆ.

ಚಂಡಿಪುರ ವೈರಸ್‌ನ ತಡೆಯುವುದು ಹೇಗೆ?

ಎಲ್ಲಾ ವೈರಸ್‌ಗಳಿಗೂ ಮೂಲ ಹುಡುಕಿದರೆ ಅವು ನಮ್ಮ ನಿರ್ಲಕ್ಷದಿಂದ ಹರಡುವುದೇ ಹೆಚ್ಚಾಗಿದೆ. ಅದ್ರಲ್ಲೂ ಈ ಸೊಳ್ಳೆಗಳಿಂದ ಹರಡುವ ವೈರಸ್‌ಗಳು ನಮ್ಮ ಜೀವಕ್ಕೆ ಹಾನಿ ಉಂಟು ಮಾಡುತ್ತಿದೆ. ಈಗ ಚಂಡಿಪುರ ವೈರಸ್ ಮೂಲ ಸಹ ಸೊಳ್ಳೆಗಳಾಗಿವೆ. ಹೀಗಾಗಿ ಸೊಳ್ಳೆಗಳ ಕಡಿತದಿಂದ ಪಾರಾಗುವುದು ಈ ವೈರಸ್ ಹರಡುವಿಕೆಯಿಂದ ಪಾರಾಗಲು ಇರುವ ಮೊದಲ ತಡೆಗಟ್ಟುವ ಕ್ರಮವಾಗಿದೆ.

ಇನ್ನೊಂದೆಡೆ ಪ್ರಾಣಿಗಳ ಸಂಪರ್ಕಕ್ಕೆ ಬಾರದೆ ಇರುವುದು, ಮನೆ ಬಳಿ ನೀರು ನಿಲ್ಲದಂತೆ, ಸೊಳ್ಳೆಗಳ ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಮನೆ ಸುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಅಲ್ಲದೆ ಸಣ್ಣ ಜ್ವರ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಉತ್ತಮ.

Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.

English summary

Four Children Died From Chandipur Virus..! How Chandipura Virus Spreads

A new virus has been detected in Gujarat. 4 children are reported to have died due to this virus which is called as Chandipur virus.
Story first published: Monday, July 15, 2024, 11:00 [IST]
X
Desktop Bottom Promotion