Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಭಾರತದ ಅರ್ಧದಷ್ಟು ಜನಸಂಖ್ಯೆ ದೈಹಿಕ ಕಸರತ್ತಿನಿಂದ ಹೊರಗೆ..! ಏಕೆ ಗೊತ್ತಾ?
ಭಾರತದಲ್ಲಿ ಸ್ಥೂಲಕಾಯತೆ ಸಮಸ್ಯೆ ಅಧಿಕವಾಗುತ್ತಿದೆ. ಈ ನಡುವೆ ಬಹಳಷ್ಟು ಮಂದಿ ವ್ಯಾಯಾಮದಿಂದ ಹೊರಗುಳಿದಿದ್ದಾರೆ ಎಂಬುದು ತಿಳಿದುಬಂದಿದೆ. ಭಾರತದಲ್ಲಿ ಸುಮಾರು ಅರ್ಧದಷ್ಟು ಜನಸಂಖ್ಯೆ ದೈಹಿಕ ಚಟುವಟಿಕೆಯಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.
2022ರಲ್ಲಿ ಪುರುಷರಿಗಿಂತ ಹೆಚ್ಚು ಮಹಿಳೆಯರು ಈ ವ್ಯಾಯಾಮದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ. ವಿಶ್ವ ಆರೋಗ್ಯ ಸಂಸ್ಥೆಯ ಹೊಸ ಮಾಹಿತಿಯ ಪ್ರಕಾರ, ಭಾರತದ ವಯಸ್ಕ ಜನಸಂಖ್ಯೆಯ ಅರ್ಧದಷ್ಟು ಜನರು ಅಗತ್ಯ ದೈಹಿಕ ಚಟುವಟಿಕೆಯಲ್ಲಿ ತೊಡಗಿಲ್ಲ ಎಂದು ತಿಳಿದುಬಂದಿದೆ.

ದಿ ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್ನಲ್ಲಿ ಪ್ರಕಟವಾದ ಹೊಸ ಮಾಹಿತಿಯು ಭಾರತದಲ್ಲಿ ಸಾಕಷ್ಟು ದೈಹಿಕ ಚಟುವಟಿಕೆಯ ಹರಡುವಿಕೆಯು 200 ರಲ್ಲಿ 22.3% ರಿಂದ 2022 ರಲ್ಲಿ 49.4% ಕ್ಕೆ ಏರಿದೆ ಎಂದು ತೋರಿಸುತ್ತಿದೆ. 2022 ರಲ್ಲಿ ಪುರುಷರಿಗಿಂತ (42%) ಹೆಚ್ಚು ಮಹಿಳೆಯರು (57.2%) ಸಾಕಷ್ಟು ವ್ಯಾಯಾಮದಲ್ಲಿ ತೊಡಗಿಲ್ ಎಂಬುದು ತಿಳಿದುಬರುತ್ತದೆ.
ಇದೇ ಪ್ರವೃತ್ತಿ ಮುಂದುವರಿದರೆ 2030 ರ ವೇಳೆಗೆ ಭಾರತದ ವಯಸ್ಕ ಜನಸಂಖ್ಯೆಯ ಶೇ.60 ಕ್ಕಿಂತ ಹೆಚ್ಚು ಜನರು ದೈಹಿಕ ಚಟುವಟಿಕೆಯಿಂದ ಹೊರಗುಳಿದ ಪ್ರಮಾಣದಲ್ಲಿ ಇರಲಿದ್ದಾರೆ. ಇದು ಹೃದಯ ಸಮಸ್ಯೆ, ಟೈಪ್ 2 ಮಧುಮೇಹ ಸೇರಿದಂತೆ ಹಲವು ದೈಹಿಕ ಚಟುವಟಿಕೆಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗಲಿದ್ದಾರೆ ಎಂದು ತಿಳಿದುಬಂದಿದೆ.
ವಯಸ್ಕರು ವಾರಕ್ಕೆ ಕನಿಷ್ಠ 150 ರಿಂದ 300 ನಿಮಿಷಗಳ ಕಾಲ ಸಾಮಾನ್ಯ ವ್ಯಾಯಾಮ ಅಥವಾ 75 ರಿಂದ 150 ನಿಮಿಷಗಳ ಕಠಿಣ ರೀತಿಯ ದೈಹಿಕ ವ್ಯಾಯಾಮದಲ್ಲಿ ತೊಡಗಬೇಕಂತೆ. ಆದರೆ ಈ ಸಮಯಕ್ಕಿಂಯ ಕಡಿಮೆ ಅಥವಾ ದೈಹಿಕ ಕಸರತ್ತಿನಲ್ಲಿ ಭಾಗಿಯಾಗದೇ ಇರುವುದು ಹೃದಯ ಸಮಸ್ಯೆ, ಮಧುಮೇಹ, ಬುದ್ಧಮಾಂದ್ಯತೆ, ಕ್ಯಾನ್ಸರ್ ಸೇರಿದಂತೆ ವಿವಿಧ ರೀತಿಯ ಅನಾರೋಗ್ಯಕ್ಕೆ ಅವರು ಒಳಗಾಗಬಹುದು ಎಂದ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಜಾಗತಿಕವಾಗಿ 195 ದೇಶಗಳಲ್ಲಿ ಸಾಕಷ್ಟು ದೈಹಿಕ ಚಟುವಟಿಕೆಯ ಕಾರ್ಯದಲ್ಲಿ ಭಾರತವು 12ನೇ ಸ್ಥಾನದಲ್ಲಿದೆ. ಪ್ರಪಂಚದಾದ್ಯಂತ ಸುಮಾರು ಶೇ.31 ವಯಸ್ಕರು ಅಥವಾ ಸರಿಸುಮಾರು 1.8 ಶತಕೋಟಿ ಜನರು 2022 ರಲ್ಲಿ ಶಿಫಾರಸು ಮಾಡಲಾಗಿರುವ ದೈಹಿಕ ಚಟುವಟಿಕೆಗಳ ಕಾಯಘಗಳನ್ನು ಮಾಡಲು ವಿಫಲರಾಗಿದ್ದಾರೆ ಎಂದು ವರದಿ ತಿಳಿಸಿದೆ. ಇದರಿಂದ ಯುವ ಪೀಳಿಗೆ ಹೆಚ್ಚು ಹೊತ್ತು ದೈಹಿಕ ಕಸರತ್ತಿನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬುದನ್ನು ಸೂಚಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ಯುವ ಜನತೆ ಜಂಕ್ ಫುಡ್ಗಳು, ಆಹಾರ ಕ್ರಮದಲ್ಲಿ ಬದಲಾವಣೆ ಸೇರಿದಂತೆ ಕರಿದ ತಿಂಡಿಗಳತ್ತ ವಾಲುತ್ತಿದ್ದಾರೆ ಇದು ಸ್ಥೂಲಕಾಯತೆ ಸೇರಿದಂತೆ, ಹಲವು ರೀತಿಯ ಸಮಸ್ಯೆಗೆ ಕಾರಣವಾಗುತ್ತಿದೆ. ಯುವ ಸಮುದಾಯವು ದೈಹಿಕ ಚಟುವಟಿಕೆಯ ಬದಲಾಗಿ ಕುಳಿತಲ್ಲೇ ಕಾಲ ಕಳೆಯಲು ಮುಂದಾಗುತ್ತಿದ್ದಾರೆ. ಅದರಲ್ಲೂ ಟಿವಿ, ಮೊಬೈಲ್, ಗೇಮಿಂಗ್ ಸೇರಿದಂತೆ ಯುವಪೀಳಿಗೆ ಮನೆಯಲ್ಲೇ ಕುಳಿತು ತೂಕ ಹೆಚ್ಚಳದಂತಹ ಸಮಸ್ಯೆಗೆ ಒಳಗಾಗುತ್ತಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಈ ಸಮಸ್ಯೆಗಳು ಹೆಚ್ಚಾಗಿವೆ ಏಷ್ಯಾ ಪೆಸಿಫಿಕ್ನಲ್ಲಿ ಸುಮಾರು ಶೇ.48ರಷ್ಟು ಮಂದಿ ದೈಹಿಕ ಕಸರತ್ತಿನಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಂಭವವಿದೆ. ಈ ಸಂಖ್ಯೆ ಭಾರತದಲ್ಲೂ ಹೆಚ್ಚಳವಾಗುತ್ತಿದ್ದು, ದೈಹಿಕ ಚಟುವಿಟಿಕೆ ದೇಹಕ್ಕೆ ಬಹಳ ಮುಖ್ಯ. ದೈಹಿಕ ಚಟುವಟಿಕೆಯಿಂದ ಮಾನಸಿಕ ಆರೋಗ್ಯಕ್ಕೂ ಉತ್ತಮ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
