Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಭಾರತದ ಅರ್ಧದಷ್ಟು ಜನಸಂಖ್ಯೆ ದೈಹಿಕ ಕಸರತ್ತಿನಿಂದ ಹೊರಗೆ..! ಏಕೆ ಗೊತ್ತಾ?
ಭಾರತದಲ್ಲಿ ಸ್ಥೂಲಕಾಯತೆ ಸಮಸ್ಯೆ ಅಧಿಕವಾಗುತ್ತಿದೆ. ಈ ನಡುವೆ ಬಹಳಷ್ಟು ಮಂದಿ ವ್ಯಾಯಾಮದಿಂದ ಹೊರಗುಳಿದಿದ್ದಾರೆ ಎಂಬುದು ತಿಳಿದುಬಂದಿದೆ. ಭಾರತದಲ್ಲಿ ಸುಮಾರು ಅರ್ಧದಷ್ಟು ಜನಸಂಖ್ಯೆ ದೈಹಿಕ ಚಟುವಟಿಕೆಯಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ.
2022ರಲ್ಲಿ ಪುರುಷರಿಗಿಂತ ಹೆಚ್ಚು ಮಹಿಳೆಯರು ಈ ವ್ಯಾಯಾಮದಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ. ವಿಶ್ವ ಆರೋಗ್ಯ ಸಂಸ್ಥೆಯ ಹೊಸ ಮಾಹಿತಿಯ ಪ್ರಕಾರ, ಭಾರತದ ವಯಸ್ಕ ಜನಸಂಖ್ಯೆಯ ಅರ್ಧದಷ್ಟು ಜನರು ಅಗತ್ಯ ದೈಹಿಕ ಚಟುವಟಿಕೆಯಲ್ಲಿ ತೊಡಗಿಲ್ಲ ಎಂದು ತಿಳಿದುಬಂದಿದೆ.

ದಿ ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್ನಲ್ಲಿ ಪ್ರಕಟವಾದ ಹೊಸ ಮಾಹಿತಿಯು ಭಾರತದಲ್ಲಿ ಸಾಕಷ್ಟು ದೈಹಿಕ ಚಟುವಟಿಕೆಯ ಹರಡುವಿಕೆಯು 200 ರಲ್ಲಿ 22.3% ರಿಂದ 2022 ರಲ್ಲಿ 49.4% ಕ್ಕೆ ಏರಿದೆ ಎಂದು ತೋರಿಸುತ್ತಿದೆ. 2022 ರಲ್ಲಿ ಪುರುಷರಿಗಿಂತ (42%) ಹೆಚ್ಚು ಮಹಿಳೆಯರು (57.2%) ಸಾಕಷ್ಟು ವ್ಯಾಯಾಮದಲ್ಲಿ ತೊಡಗಿಲ್ ಎಂಬುದು ತಿಳಿದುಬರುತ್ತದೆ.
ಇದೇ ಪ್ರವೃತ್ತಿ ಮುಂದುವರಿದರೆ 2030 ರ ವೇಳೆಗೆ ಭಾರತದ ವಯಸ್ಕ ಜನಸಂಖ್ಯೆಯ ಶೇ.60 ಕ್ಕಿಂತ ಹೆಚ್ಚು ಜನರು ದೈಹಿಕ ಚಟುವಟಿಕೆಯಿಂದ ಹೊರಗುಳಿದ ಪ್ರಮಾಣದಲ್ಲಿ ಇರಲಿದ್ದಾರೆ. ಇದು ಹೃದಯ ಸಮಸ್ಯೆ, ಟೈಪ್ 2 ಮಧುಮೇಹ ಸೇರಿದಂತೆ ಹಲವು ದೈಹಿಕ ಚಟುವಟಿಕೆಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗಲಿದ್ದಾರೆ ಎಂದು ತಿಳಿದುಬಂದಿದೆ.
ವಯಸ್ಕರು ವಾರಕ್ಕೆ ಕನಿಷ್ಠ 150 ರಿಂದ 300 ನಿಮಿಷಗಳ ಕಾಲ ಸಾಮಾನ್ಯ ವ್ಯಾಯಾಮ ಅಥವಾ 75 ರಿಂದ 150 ನಿಮಿಷಗಳ ಕಠಿಣ ರೀತಿಯ ದೈಹಿಕ ವ್ಯಾಯಾಮದಲ್ಲಿ ತೊಡಗಬೇಕಂತೆ. ಆದರೆ ಈ ಸಮಯಕ್ಕಿಂಯ ಕಡಿಮೆ ಅಥವಾ ದೈಹಿಕ ಕಸರತ್ತಿನಲ್ಲಿ ಭಾಗಿಯಾಗದೇ ಇರುವುದು ಹೃದಯ ಸಮಸ್ಯೆ, ಮಧುಮೇಹ, ಬುದ್ಧಮಾಂದ್ಯತೆ, ಕ್ಯಾನ್ಸರ್ ಸೇರಿದಂತೆ ವಿವಿಧ ರೀತಿಯ ಅನಾರೋಗ್ಯಕ್ಕೆ ಅವರು ಒಳಗಾಗಬಹುದು ಎಂದ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
ಜಾಗತಿಕವಾಗಿ 195 ದೇಶಗಳಲ್ಲಿ ಸಾಕಷ್ಟು ದೈಹಿಕ ಚಟುವಟಿಕೆಯ ಕಾರ್ಯದಲ್ಲಿ ಭಾರತವು 12ನೇ ಸ್ಥಾನದಲ್ಲಿದೆ. ಪ್ರಪಂಚದಾದ್ಯಂತ ಸುಮಾರು ಶೇ.31 ವಯಸ್ಕರು ಅಥವಾ ಸರಿಸುಮಾರು 1.8 ಶತಕೋಟಿ ಜನರು 2022 ರಲ್ಲಿ ಶಿಫಾರಸು ಮಾಡಲಾಗಿರುವ ದೈಹಿಕ ಚಟುವಟಿಕೆಗಳ ಕಾಯಘಗಳನ್ನು ಮಾಡಲು ವಿಫಲರಾಗಿದ್ದಾರೆ ಎಂದು ವರದಿ ತಿಳಿಸಿದೆ. ಇದರಿಂದ ಯುವ ಪೀಳಿಗೆ ಹೆಚ್ಚು ಹೊತ್ತು ದೈಹಿಕ ಕಸರತ್ತಿನಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬುದನ್ನು ಸೂಚಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ಯುವ ಜನತೆ ಜಂಕ್ ಫುಡ್ಗಳು, ಆಹಾರ ಕ್ರಮದಲ್ಲಿ ಬದಲಾವಣೆ ಸೇರಿದಂತೆ ಕರಿದ ತಿಂಡಿಗಳತ್ತ ವಾಲುತ್ತಿದ್ದಾರೆ ಇದು ಸ್ಥೂಲಕಾಯತೆ ಸೇರಿದಂತೆ, ಹಲವು ರೀತಿಯ ಸಮಸ್ಯೆಗೆ ಕಾರಣವಾಗುತ್ತಿದೆ. ಯುವ ಸಮುದಾಯವು ದೈಹಿಕ ಚಟುವಟಿಕೆಯ ಬದಲಾಗಿ ಕುಳಿತಲ್ಲೇ ಕಾಲ ಕಳೆಯಲು ಮುಂದಾಗುತ್ತಿದ್ದಾರೆ. ಅದರಲ್ಲೂ ಟಿವಿ, ಮೊಬೈಲ್, ಗೇಮಿಂಗ್ ಸೇರಿದಂತೆ ಯುವಪೀಳಿಗೆ ಮನೆಯಲ್ಲೇ ಕುಳಿತು ತೂಕ ಹೆಚ್ಚಳದಂತಹ ಸಮಸ್ಯೆಗೆ ಒಳಗಾಗುತ್ತಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಈ ಸಮಸ್ಯೆಗಳು ಹೆಚ್ಚಾಗಿವೆ ಏಷ್ಯಾ ಪೆಸಿಫಿಕ್ನಲ್ಲಿ ಸುಮಾರು ಶೇ.48ರಷ್ಟು ಮಂದಿ ದೈಹಿಕ ಕಸರತ್ತಿನಿಂದ ಹೊರಗುಳಿದಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಂಭವವಿದೆ. ಈ ಸಂಖ್ಯೆ ಭಾರತದಲ್ಲೂ ಹೆಚ್ಚಳವಾಗುತ್ತಿದ್ದು, ದೈಹಿಕ ಚಟುವಿಟಿಕೆ ದೇಹಕ್ಕೆ ಬಹಳ ಮುಖ್ಯ. ದೈಹಿಕ ಚಟುವಟಿಕೆಯಿಂದ ಮಾನಸಿಕ ಆರೋಗ್ಯಕ್ಕೂ ಉತ್ತಮ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications