Latest Updates
-
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು! -
ವಿಶ್ವ ಫಿಸಿಯೋಥೆರಪಿ ದಿನ: ಹೃದಯದ ಆರೋಗ್ಯ ಮತ್ತು ನೋವು ಮುಕ್ತ ಜೀವನಕ್ಕೆ 12 ನಿಮಿಷದ ಮ್ಯಾಜಿಕ್ ವರ್ಕೌಟ್! -
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು?
ಅಧಿಕ ರಕ್ತದೊತ್ತಡ ತಡೆಯಲು ಗಿಡಮೂಲಿಕೆಗಳು
ಅಧಿಕ ರಕ್ತದೊತ್ತಡ ಪ್ರಸ್ತುತ, ವಿಶ್ವದಾದ್ಯಂತ ಕಂಡು ಬರುತ್ತಿರುವ ಒಂದು ಸಾಂಕ್ರಾಮಿಕ ರೋಗ ಎನಿಸಿಕೊಂಡಿದೆ. ಫಾಸ್ಟ್ ಫುಡ್, ಸೋಡಾ ಮತ್ತು ಒತ್ತಡದ ಜೀವನದಿಂದಾಗಿ ಇಂದು ಭಾರತದಲ್ಲಿ ಸರಾಸರಿ ಪ್ರತಿ ಮೂರು ಜನರಲ್ಲಿ ಒಬ್ಬರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುತ್ತಿದ್ದಾರೆ. ಇದು ಹೃದಯ ಖಾಯಿಲೆ, ಪಾರ್ಶ್ವವಾಯು ಮತ್ತು ಮೂತ್ರಪಿಂಡ ಖಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.
ಆದರೆ ಇಂಥ ಆರೋಗ್ಯ ಸಮಸ್ಯೆಗಳು ಉಂಟಾದರೆ ನಾವು ಮೊದಲು ಔಷಧಗಳನ್ನು ಸೇವಿಸುತ್ತೇವೆ. ಔಷಧಗಳಿಂದ ಕೆಲವು ಖಾಯಿಲೆಗಳು ತತ್ ಕ್ಷಣಕ್ಕೆ ಗುಣವಾದಂತೆ ಅನ್ನಿಸಿದರೂ ಅದರಿಂದ ಇತರ ತೊಂದರೆಗಳೂ ಅಧಿಕ. ಆದ್ದರಿಂದ ಇಂತಹ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ರಕ್ತದೊತ್ತಡ ಖಾಯಿಲೆಯನ್ನು ನಿಯಂತ್ರಿಸಬಹುದಾದ ಕೆಲವು ಗಿಡಮೂಲಿಕೆಗಳ ಚಿಕಿತ್ಸೆಗಳು ಇಲ್ಲಿವೆ.
ರಕ್ತದೊತ್ತಡಕ್ಕೆ ಗಿಡಮೂಲಿಕೆಯ ಔಷಧಗಳು

ಬೆಳ್ಳುಳ್ಳಿ
ಸಾಮಾನ್ಯವಾಗಿ ಮಧ್ಯಮ ಪ್ರಮಾಣದಲ್ಲಿ ರಕ್ತದೊತ್ತಡವುಂಟಾಗಿರುವ ವ್ಯಕ್ತಿಯು ಬೆಳ್ಳುಳ್ಳಿ ಸೇವನೆಯಿಂದ ತಾಳ್ಮೆಯನ್ನು ತಂದುಕೊಳ್ಳಬಹುದು. ಬೆಳ್ಳುಳ್ಳಿಯಲ್ಲಿರುವ ಆಲಸಿನ್ ಅಂಶ ನೈಟ್ರಿಕ್ ಆಕ್ಸೈಡ್ ಉತ್ವಾದನೆಯನ್ನು ಹೆಚ್ಚಿಸುತ್ತದೆ. ಇದರಿಂದಾಗಿ ರಕ್ತದೊತ್ತಡದ ಪ್ರಮಾಣ ಕಡಿಮೆಯಾಗಿ ಅಪಧಮನಿಯ ಸ್ನಾಯುಗಳು ಸಡಿಲವಾಗುತ್ತವೆ.

ಕರ್ಪೂರವಲ್ಲಿ/ದೊಡ್ಡಪತ್ರೆ
ಸಾಮಾನ್ಯವಾಗಿ ದಕ್ಷಿಣ ಭಾರತದ ಎಲ್ಲಾ ಮನೆಗಳ ತೋಟಗಳಲ್ಲಿ ದೊಡ್ದಪತ್ರೆ ಸಸ್ಯವನ್ನು ಕಾಣಬಹುದು. ಸಂಶೋಧನೆ ಹೇಳುವಂತೆ, ಈ ಸಸ್ಯವು ನಮ್ಮ ದೇಹದಲ್ಲಿ ಅಪಧಮನಿಯ ಮೆದು ಸ್ನಾಯುಗಳನ್ನು ಸಡಿಲಗೊಳಿಸುತ್ತದೆ. ಇದರಿಂದ ರಕ್ತದೊತ್ತಡವು ಕಡಿಮೆಯಾಗುತ್ತದೆ.

ಈರುಳ್ಳಿ
ಈರುಳ್ಳಿಯು ಹೃದಯ ರೋಗ ಮತ್ತು ಪಾರ್ಶ್ವವಾಯು ತಡೆಗಟ್ಟುವ antioxidants ಫ್ಲೇವೋನಾಯ್ಡ್ ಹೊಂದಿದೆ.

ಚಕ್ಕೆ
ಇದು ಹೃದಯರೋಗವನ್ನು ಮಾತ್ರವಲ್ಲದೇ ಮಧುಮೇಹವನ್ನು ತಡೆಗಟ್ಟುತ್ತದೆ. ದಿನವೂ ನೀರಿನಲ್ಲಿ ಚಕ್ಕೆಯನ್ನು ಹಾಕಿ ಅದರ ನೀರು ಕುಡಿದರೆ ಅಧಿಕ ರಕ್ತದೊತ್ತಡ ಸಮಸ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.



Click it and Unblock the Notifications
