Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಅಧಿಕ ರಕ್ತದೊತ್ತಡ ತಡೆಯಲು ಗಿಡಮೂಲಿಕೆಗಳು
ಅಧಿಕ ರಕ್ತದೊತ್ತಡ ಪ್ರಸ್ತುತ, ವಿಶ್ವದಾದ್ಯಂತ ಕಂಡು ಬರುತ್ತಿರುವ ಒಂದು ಸಾಂಕ್ರಾಮಿಕ ರೋಗ ಎನಿಸಿಕೊಂಡಿದೆ. ಫಾಸ್ಟ್ ಫುಡ್, ಸೋಡಾ ಮತ್ತು ಒತ್ತಡದ ಜೀವನದಿಂದಾಗಿ ಇಂದು ಭಾರತದಲ್ಲಿ ಸರಾಸರಿ ಪ್ರತಿ ಮೂರು ಜನರಲ್ಲಿ ಒಬ್ಬರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುತ್ತಿದ್ದಾರೆ. ಇದು ಹೃದಯ ಖಾಯಿಲೆ, ಪಾರ್ಶ್ವವಾಯು ಮತ್ತು ಮೂತ್ರಪಿಂಡ ಖಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ.
ಆದರೆ ಇಂಥ ಆರೋಗ್ಯ ಸಮಸ್ಯೆಗಳು ಉಂಟಾದರೆ ನಾವು ಮೊದಲು ಔಷಧಗಳನ್ನು ಸೇವಿಸುತ್ತೇವೆ. ಔಷಧಗಳಿಂದ ಕೆಲವು ಖಾಯಿಲೆಗಳು ತತ್ ಕ್ಷಣಕ್ಕೆ ಗುಣವಾದಂತೆ ಅನ್ನಿಸಿದರೂ ಅದರಿಂದ ಇತರ ತೊಂದರೆಗಳೂ ಅಧಿಕ. ಆದ್ದರಿಂದ ಇಂತಹ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ರಕ್ತದೊತ್ತಡ ಖಾಯಿಲೆಯನ್ನು ನಿಯಂತ್ರಿಸಬಹುದಾದ ಕೆಲವು ಗಿಡಮೂಲಿಕೆಗಳ ಚಿಕಿತ್ಸೆಗಳು ಇಲ್ಲಿವೆ.
ರಕ್ತದೊತ್ತಡಕ್ಕೆ ಗಿಡಮೂಲಿಕೆಯ ಔಷಧಗಳು

ಬೆಳ್ಳುಳ್ಳಿ
ಸಾಮಾನ್ಯವಾಗಿ ಮಧ್ಯಮ ಪ್ರಮಾಣದಲ್ಲಿ ರಕ್ತದೊತ್ತಡವುಂಟಾಗಿರುವ ವ್ಯಕ್ತಿಯು ಬೆಳ್ಳುಳ್ಳಿ ಸೇವನೆಯಿಂದ ತಾಳ್ಮೆಯನ್ನು ತಂದುಕೊಳ್ಳಬಹುದು. ಬೆಳ್ಳುಳ್ಳಿಯಲ್ಲಿರುವ ಆಲಸಿನ್ ಅಂಶ ನೈಟ್ರಿಕ್ ಆಕ್ಸೈಡ್ ಉತ್ವಾದನೆಯನ್ನು ಹೆಚ್ಚಿಸುತ್ತದೆ. ಇದರಿಂದಾಗಿ ರಕ್ತದೊತ್ತಡದ ಪ್ರಮಾಣ ಕಡಿಮೆಯಾಗಿ ಅಪಧಮನಿಯ ಸ್ನಾಯುಗಳು ಸಡಿಲವಾಗುತ್ತವೆ.

ಕರ್ಪೂರವಲ್ಲಿ/ದೊಡ್ಡಪತ್ರೆ
ಸಾಮಾನ್ಯವಾಗಿ ದಕ್ಷಿಣ ಭಾರತದ ಎಲ್ಲಾ ಮನೆಗಳ ತೋಟಗಳಲ್ಲಿ ದೊಡ್ದಪತ್ರೆ ಸಸ್ಯವನ್ನು ಕಾಣಬಹುದು. ಸಂಶೋಧನೆ ಹೇಳುವಂತೆ, ಈ ಸಸ್ಯವು ನಮ್ಮ ದೇಹದಲ್ಲಿ ಅಪಧಮನಿಯ ಮೆದು ಸ್ನಾಯುಗಳನ್ನು ಸಡಿಲಗೊಳಿಸುತ್ತದೆ. ಇದರಿಂದ ರಕ್ತದೊತ್ತಡವು ಕಡಿಮೆಯಾಗುತ್ತದೆ.

ಈರುಳ್ಳಿ
ಈರುಳ್ಳಿಯು ಹೃದಯ ರೋಗ ಮತ್ತು ಪಾರ್ಶ್ವವಾಯು ತಡೆಗಟ್ಟುವ antioxidants ಫ್ಲೇವೋನಾಯ್ಡ್ ಹೊಂದಿದೆ.

ಚಕ್ಕೆ
ಇದು ಹೃದಯರೋಗವನ್ನು ಮಾತ್ರವಲ್ಲದೇ ಮಧುಮೇಹವನ್ನು ತಡೆಗಟ್ಟುತ್ತದೆ. ದಿನವೂ ನೀರಿನಲ್ಲಿ ಚಕ್ಕೆಯನ್ನು ಹಾಕಿ ಅದರ ನೀರು ಕುಡಿದರೆ ಅಧಿಕ ರಕ್ತದೊತ್ತಡ ಸಮಸ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.



Click it and Unblock the Notifications











