Latest Updates
-
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ!
ಹೃದ್ರೋಗ ಬರದಂತೆ ತಡೆಯಲು ಟಿಪ್ಸ್
ಭಾರದತಲ್ಲಿ ಹೃದ್ರೋಗಿಗಳ ಸಂಖ್ಯೆಯು 10 ವರ್ಷಗಳ ಹಿಂದಿನ ಅಂಕಿ ಅಂಶಗಳಿಗೆ ಹೋಲಿಸಿದರೆ ದುಪ್ಪಟ್ಟಾಗಿದೆ. ಈ ರೀತಿ ಹೃದ್ರೋಗ ಹೆಚ್ಚಾಗಲು ಕಾರಣವೇನು? ಉತ್ತರ ಮಾತ್ರ ತುಂಬಾ ಸರಳ, ನಮ್ಮ ಜೀವನ ಶೈಲಿ.
ಈಗೆಲ್ಲಾ ನಾವು ಫಾಸ್ಟ್ ಫುಡ್ಸ್ ಇಷ್ಟಪಡುತ್ತೇವೆ. ಅದರಿಂದ ದೇಹದ ಕೊಲೆಸ್ಟ್ರಾಲ್ ಹೆಚ್ಚಾಗುವುದಲ್ಲದೇ ಮತ್ಯಾವುದೇ ಪ್ರಯೋಜನವಿಲ್ಲ. ಕೆಲವರಿಗೆ ವ್ಯಾಯಾಮ ಮಾಡಲು ಉದಾಸೀನ, ಮತ್ತೆ ಕೆಲವರು ವ್ಯಾಯಾಮ ಮಾಡಲು ಪುರುಸೊತ್ತು ಇಲ್ಲವೆಂದು ದೈಹಿಕ ವ್ಯಾಯಾಮ ಮಾಡುವುದಿಲ್ಲ, ಇದರ ಪರಿಣಾಮ ದೇಹದ ಮೇಲೆ ಬೀರುತ್ತದೆ.
ನಗರ ಪ್ರದೇಶದಲ್ಲಿ ಹೆಚ್ಚಿನವರದು ಒಂದು ಕಡೆ ಕೂತು ಮಾಡುವ ಕೆಲಸವಾಗಿರುತ್ತದೆ. ಈ ರೀತಿ ಕೆಲಸ ಮಾಡುವವರಿಗೆ ದೈಹಿಕ ವ್ಯಾಯಾಮ ಅವಶ್ಯಕ. ಆಹಾರಕ್ರಮದ ಬಗ್ಗೆ ಎಚ್ಚರಿಕೆವಹಿಸಿಬೇಕು.
ಹೃದಯದ ಆರೋಗ್ಯವನ್ನು ಕಾಪಾಡುವ ಸಾಮರ್ಥ್ಯ ಈ ಕೆಳಗಿನ ಆಹಾರಗಳಿಗಿವೆ:

ಕಪ್ಪು ಬೀನ್ಸ್
ಇದರಲ್ಲಿ ಫೋಲೆಟ್, antioxidants, ಮ್ಯಾಗ್ನಿಷಿಯಂ ಹಾಗೂ ನಾರಿನಂಶ ಅಧಿಕವಿದೆ. ಇದು ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆಯಂಶವನ್ನು ಕಡಿಮೆ ಮಾಡುತ್ತದೆ.

ರೆಡ್ ವೈನ್
ಪ್ರತೀದಿನ ಸ್ವಲ್ಪ ರೆಡ್ ವೈನ್ ಕುಡಿದರೆ ರಕ್ತ ಶುದ್ದೀಯಾಗಿರುತ್ತದೆ, ಹೃದಯದ ಸ್ವಾಸ್ಥ್ಯವೂ ಹೆಚ್ಚಾಗುವುದು, ನೆನೆಪಿಡಿ ಮಿತಿ ಮೀರಿ ಕುಡಿದರೆ ರೆಡ್ ವೈನ್ ಕೂಡ ಒಳ್ಳೆಯದಲ್ಲ.

ಆಲೀವ್ ಎಣ್ಣೆ
ಹೃದ್ರೋಗಿ ಬಳಸಬುದಾದ ಸೂಕ್ತವಾದ ಎಣ್ಣೆಯೆಂದರೆ ಆಲೀವ್ ಎಣ್ಣೆ. ಇದು ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ, ಬಾಯಿಗೆ ರುಚಿಯನ್ನೂ ನೀಡುತ್ತದೆ.

ವಾಲ್ ನಟ್ಸ್
ಪ್ರತೀದಿನ ಸ್ವಲ್ಪ ವಾಲ್ ನೆಟ್ಸ್ ತಿಂದರೆ ಹೃದಯದ ಆರೋಗ್ಯ ಹೆಚ್ಚಾಗುವುದು.

ಬಾದಾಮಿ
ಬಾದಾಮಿಯಲ್ಲಿ ನಾರಿನಂಶ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾದರೆ ಮಧುಮೇಹ ಬರುವ ಸಾಧ್ಯತೆಯೂ ಕಡಿಮೆಯಾಗುವುದು.

ಟೋಫು
ಟೋಫು ನಲ್ಲಿ ಹೃದಯದ ಆರೋಗ್ಯಕ್ಕೆ ಅಗ್ಯತವಿರುವ ಖನಿಜಾಂಶವಿದೆ, ಅಲ್ಲದೆ ಇದು ಹೃದಯ ಭಾಗದಲ್ಲಿ ರಕ್ತ ಹೆಪ್ಪುಗಟ್ಟದಂತೆ ತಡೆಯುತ್ತದೆ.

ಸಿಹಿ ಗೆಣಸು
ಸಿಹಿ ಗೆಣಸು ಕೂಡ ಹೃದಯ ಆರೋಗ್ಯಕ್ಕೆ ಒಳ್ಳೆಯದು. ಇದನ್ನು ತಿಂದರೆ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ, ಆದ್ದರಿಂದ ಮಧುಮೇಹಿಗಳು ಕೂಡ ಮಿತಿಯಲ್ಲಿ ತಿನ್ನಬಹುದು. ಇದರಲ್ಲಿ ಅಧಿಕ ವಿಟಮಿನ್ ಎ, ಲೈಕೊಪೆನೆ ಇದ್ದು ಹೃದಯದ ಸ್ವಾಸ್ಥ್ಯವನ್ನು ಹೆಚ್ಚಿಸುತ್ತದೆ.

ಕಿತ್ತಳೆ
ಪ್ರತೀದಿನ ಒಂದು ಕಿತ್ತಳೆ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿ ವಿಟಮಿನ್ ಸಿ ಇದ್ದು, ದೇಹದಲ್ಲಿ ಬೇಡದ ಕೊಬ್ಬಿನಂಶ ಶೇಖರವಾಗುವುದನ್ನು ತಡೆಯುತ್ತದೆ.

ಕ್ಯಾರೆಟ್
ಕ್ಯಾರೆಟ್ ಸಿಹಿಯಾಗಿದ್ದರೂ ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುತ್ತದೆ, ಇದರಿಂದ ಹೃದಯಕ್ಕೆ ತುಂಬಾ ಒಳ್ಳೆಯದು.

ಸಿಹಿ ಗೆಣಸು
ಸಿಹಿ ಗೆಣಸು ಕೂಡ ಹೃದಯ ಆರೋಗ್ಯಕ್ಕೆ ಒಳ್ಳೆಯದು. ಇದನ್ನು ತಿಂದರೆ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ, ಆದ್ದರಿಂದ ಮಧುಮೇಹಿಗಳು ಕೂಡ ಮಿತಿಯಲ್ಲಿ ತಿನ್ನಬಹುದು. ಇದರಲ್ಲಿ ಅಧಿಕ ವಿಟಮಿನ್ ಎ, ಲೈಕೊಪೆನೆ ಇದ್ದು ಹೃದಯದ ಸ್ವಾಸ್ಥ್ಯವನ್ನು ಹೆಚ್ಚಿಸುತ್ತದೆ.

ಅಗಸದ ಬೀಜ(flaxseed)
ಅಗಸದ ಬೀಜದಲ್ಲಿ ಒಮೆಗಾ 3 ಕೊಬ್ಬಿನಂಶವಿದೆ, ಇದನ್ನು ಆಹಾರಕ್ರಮದಲ್ಲಿ ಸೇರಿಸುವುದು ಒಳ್ಳೆಯದು.

ಓಟ್ಸ್
ಓಟ್ಸ್ ತಿಂದರೆ ಸಣ್ಣಗಾಗುವಿರಿ ಮಾತ್ರವಲ್ಲ ದೇಹದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಕಾಫಿ
ಕಾಫಿಯಲ್ಲಿರುವ ಕೆಫೀನ್ ಕೂಡ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ದಿನದಲ್ಲಿ 2 ಲೋಟಕ್ಕಿಂತ ಹೆಚ್ಚಿನ ಕಾಫಿ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ.

ಚೆರ್ರಿ
ಚೆರ್ರಿ ಹಣ್ಣಿನಲ್ಲಿರುವ antioxidants ರಕ್ತ ಕಣಗಳಿಗೆ ಹಾನಿಯಾಗದಂತೆ ಕಾಪಾಡಿ ಹೈದಯ ಆರೋಗ್ಯವಾಗಿರುವಂತೆ ಮಾಡುತ್ತದೆ.



Click it and Unblock the Notifications