Latest Updates
-
ಕೋಮಾದಲ್ಲಿದ್ದ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂ ಒಪ್ಪಿಗೆ: ಈ ಕೇಸ್ ಬಗ್ಗೆ ನಿಮಗೆ ಗೊತ್ತಾ? -
ಪಂಜಾಬಿ ಸ್ಟೈಲ್ ಮಲೈ ಲಸ್ಸಿ! ಈ ರೀತಿ ಮಾಡಿ ಗಟ್ಟಿ ಕೆನೆಯ ಢಾಬಾ ಸ್ಟೈಲ್ ಲಸ್ಸಿ.. ಬಿಸಿಲ ತಾಪಕ್ಕೆ ಬೆಸ್ಟ್ ಕೂಲ್ ಡ್ರಿಂಕ್ -
ಮಾರ್ಚ್ ಅಂತ್ಯದಲ್ಲಿ ಗಜಕೇಸರಿ ಯೋಗ: ಈ ಮೂರು ರಾಶಿಯ ಜನರಿಗೆ ಒಲಿಯಲಿದೆ ಅದೃಷ್ಟ! -
ನಾಟಿ ಸ್ಟೈಲ್ನಲ್ಲಿ ಸೋಯಾ ಚಾಪ್ಸ್ ಮಾಡಿ: ಚಪಾತಿ, ಅನ್ನ, ಮುದ್ದೆ ಎಲ್ಲದ್ದಕ್ಕೂ ಬೆಸ್ಟ್! -
ತಣ್ಣೀರು ಬೇಕಾ? ಮಡಕೆ ಕೊಳ್ಳುವಾಗ ಈ ತಪ್ಪು ಮಾಡಬೇಡಿ.. ಸಮಸ್ಯೆ ಗ್ಯಾರಂಟಿ!! ಹೇಗೆ ಆಯ್ಕೆ ಮಾಡಬೇಕು? -
ನಿಮ್ಮ ಮನೆಯ ಗಡಿಯಾರ ತಪ್ಪಾದ ದಿಕ್ಕಿನಲ್ಲಿ ಇಡಲಾಗಿದ್ಯಾ? ಈ ಸಣ್ಣ ತಪ್ಪು ದೊಡ್ಡ ಸಮಸ್ಯೆ ತರಬಹುದು! -
ಶುಗರ್ ಇದ್ದರೂ ಯುಗಾದಿಗೆ ಗುಜಿಯಾ ತಿನ್ನಬಹುದು! ಸಕ್ಕರೆ ಬೇಡ.. ರುಚಿ ಅದ್ಭುತ.. ಹೆಲ್ತ್ 100ಕ್ಕೆ 100 ಸೇಫ್! -
ದೇಹ ತಂಪಾಗಿಸಲು, ತೂಕ ಇಳಿಸಲು ಈ ಬಾರ್ಲಿ ಜ್ಯೂಸ್ ಮಾಡಿ! 5 ನಿಮಿಷದೊಳಗೆ ಸಿದ್ದ! -
ರಾಹು-ಕೇತು ಸಂಯೋಗದಿಂದ ಕಾಳಸರ್ಪ ಯೋಗ: ಈ ಎಲ್ಲಾ ರಾಶಿಯವರಿಗೆ ಅದೃಷ್ಟದ ಸಮಯ! -
ಸಂಕಷ್ಟಗಳು ದೂರ, ಐಶ್ವರ್ಯ ಹತ್ತಿರ! ಕೇತು ಸಂಚಾರದಿಂದ ಇವರ ಜೀವನವೇ ಬಂಗಾರ.. ಯಾರಿಗೆ ರಾಜಯೋಗ?
ಹೃದ್ರೋಗ ಬರದಂತೆ ತಡೆಯಲು ಟಿಪ್ಸ್
ಭಾರದತಲ್ಲಿ ಹೃದ್ರೋಗಿಗಳ ಸಂಖ್ಯೆಯು 10 ವರ್ಷಗಳ ಹಿಂದಿನ ಅಂಕಿ ಅಂಶಗಳಿಗೆ ಹೋಲಿಸಿದರೆ ದುಪ್ಪಟ್ಟಾಗಿದೆ. ಈ ರೀತಿ ಹೃದ್ರೋಗ ಹೆಚ್ಚಾಗಲು ಕಾರಣವೇನು? ಉತ್ತರ ಮಾತ್ರ ತುಂಬಾ ಸರಳ, ನಮ್ಮ ಜೀವನ ಶೈಲಿ.
ಈಗೆಲ್ಲಾ ನಾವು ಫಾಸ್ಟ್ ಫುಡ್ಸ್ ಇಷ್ಟಪಡುತ್ತೇವೆ. ಅದರಿಂದ ದೇಹದ ಕೊಲೆಸ್ಟ್ರಾಲ್ ಹೆಚ್ಚಾಗುವುದಲ್ಲದೇ ಮತ್ಯಾವುದೇ ಪ್ರಯೋಜನವಿಲ್ಲ. ಕೆಲವರಿಗೆ ವ್ಯಾಯಾಮ ಮಾಡಲು ಉದಾಸೀನ, ಮತ್ತೆ ಕೆಲವರು ವ್ಯಾಯಾಮ ಮಾಡಲು ಪುರುಸೊತ್ತು ಇಲ್ಲವೆಂದು ದೈಹಿಕ ವ್ಯಾಯಾಮ ಮಾಡುವುದಿಲ್ಲ, ಇದರ ಪರಿಣಾಮ ದೇಹದ ಮೇಲೆ ಬೀರುತ್ತದೆ.
ನಗರ ಪ್ರದೇಶದಲ್ಲಿ ಹೆಚ್ಚಿನವರದು ಒಂದು ಕಡೆ ಕೂತು ಮಾಡುವ ಕೆಲಸವಾಗಿರುತ್ತದೆ. ಈ ರೀತಿ ಕೆಲಸ ಮಾಡುವವರಿಗೆ ದೈಹಿಕ ವ್ಯಾಯಾಮ ಅವಶ್ಯಕ. ಆಹಾರಕ್ರಮದ ಬಗ್ಗೆ ಎಚ್ಚರಿಕೆವಹಿಸಿಬೇಕು.
ಹೃದಯದ ಆರೋಗ್ಯವನ್ನು ಕಾಪಾಡುವ ಸಾಮರ್ಥ್ಯ ಈ ಕೆಳಗಿನ ಆಹಾರಗಳಿಗಿವೆ:

ಕಪ್ಪು ಬೀನ್ಸ್
ಇದರಲ್ಲಿ ಫೋಲೆಟ್, antioxidants, ಮ್ಯಾಗ್ನಿಷಿಯಂ ಹಾಗೂ ನಾರಿನಂಶ ಅಧಿಕವಿದೆ. ಇದು ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆಯಂಶವನ್ನು ಕಡಿಮೆ ಮಾಡುತ್ತದೆ.

ರೆಡ್ ವೈನ್
ಪ್ರತೀದಿನ ಸ್ವಲ್ಪ ರೆಡ್ ವೈನ್ ಕುಡಿದರೆ ರಕ್ತ ಶುದ್ದೀಯಾಗಿರುತ್ತದೆ, ಹೃದಯದ ಸ್ವಾಸ್ಥ್ಯವೂ ಹೆಚ್ಚಾಗುವುದು, ನೆನೆಪಿಡಿ ಮಿತಿ ಮೀರಿ ಕುಡಿದರೆ ರೆಡ್ ವೈನ್ ಕೂಡ ಒಳ್ಳೆಯದಲ್ಲ.

ಆಲೀವ್ ಎಣ್ಣೆ
ಹೃದ್ರೋಗಿ ಬಳಸಬುದಾದ ಸೂಕ್ತವಾದ ಎಣ್ಣೆಯೆಂದರೆ ಆಲೀವ್ ಎಣ್ಣೆ. ಇದು ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ, ಬಾಯಿಗೆ ರುಚಿಯನ್ನೂ ನೀಡುತ್ತದೆ.

ವಾಲ್ ನಟ್ಸ್
ಪ್ರತೀದಿನ ಸ್ವಲ್ಪ ವಾಲ್ ನೆಟ್ಸ್ ತಿಂದರೆ ಹೃದಯದ ಆರೋಗ್ಯ ಹೆಚ್ಚಾಗುವುದು.

ಬಾದಾಮಿ
ಬಾದಾಮಿಯಲ್ಲಿ ನಾರಿನಂಶ ಅಧಿಕವಿರುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು, ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆಯಾದರೆ ಮಧುಮೇಹ ಬರುವ ಸಾಧ್ಯತೆಯೂ ಕಡಿಮೆಯಾಗುವುದು.

ಟೋಫು
ಟೋಫು ನಲ್ಲಿ ಹೃದಯದ ಆರೋಗ್ಯಕ್ಕೆ ಅಗ್ಯತವಿರುವ ಖನಿಜಾಂಶವಿದೆ, ಅಲ್ಲದೆ ಇದು ಹೃದಯ ಭಾಗದಲ್ಲಿ ರಕ್ತ ಹೆಪ್ಪುಗಟ್ಟದಂತೆ ತಡೆಯುತ್ತದೆ.

ಸಿಹಿ ಗೆಣಸು
ಸಿಹಿ ಗೆಣಸು ಕೂಡ ಹೃದಯ ಆರೋಗ್ಯಕ್ಕೆ ಒಳ್ಳೆಯದು. ಇದನ್ನು ತಿಂದರೆ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ, ಆದ್ದರಿಂದ ಮಧುಮೇಹಿಗಳು ಕೂಡ ಮಿತಿಯಲ್ಲಿ ತಿನ್ನಬಹುದು. ಇದರಲ್ಲಿ ಅಧಿಕ ವಿಟಮಿನ್ ಎ, ಲೈಕೊಪೆನೆ ಇದ್ದು ಹೃದಯದ ಸ್ವಾಸ್ಥ್ಯವನ್ನು ಹೆಚ್ಚಿಸುತ್ತದೆ.

ಕಿತ್ತಳೆ
ಪ್ರತೀದಿನ ಒಂದು ಕಿತ್ತಳೆ ತಿಂದರೆ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿ ವಿಟಮಿನ್ ಸಿ ಇದ್ದು, ದೇಹದಲ್ಲಿ ಬೇಡದ ಕೊಬ್ಬಿನಂಶ ಶೇಖರವಾಗುವುದನ್ನು ತಡೆಯುತ್ತದೆ.

ಕ್ಯಾರೆಟ್
ಕ್ಯಾರೆಟ್ ಸಿಹಿಯಾಗಿದ್ದರೂ ದೇಹದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕೆಟ್ಟ ಕೊಲೆಸ್ಟ್ರಾಲ್ ವಿರುದ್ಧ ಹೋರಾಡುತ್ತದೆ, ಇದರಿಂದ ಹೃದಯಕ್ಕೆ ತುಂಬಾ ಒಳ್ಳೆಯದು.

ಸಿಹಿ ಗೆಣಸು
ಸಿಹಿ ಗೆಣಸು ಕೂಡ ಹೃದಯ ಆರೋಗ್ಯಕ್ಕೆ ಒಳ್ಳೆಯದು. ಇದನ್ನು ತಿಂದರೆ ದೇಹದಲ್ಲಿ ಸಕ್ಕರೆಯಂಶ ಹೆಚ್ಚಾಗುವುದಿಲ್ಲ, ಆದ್ದರಿಂದ ಮಧುಮೇಹಿಗಳು ಕೂಡ ಮಿತಿಯಲ್ಲಿ ತಿನ್ನಬಹುದು. ಇದರಲ್ಲಿ ಅಧಿಕ ವಿಟಮಿನ್ ಎ, ಲೈಕೊಪೆನೆ ಇದ್ದು ಹೃದಯದ ಸ್ವಾಸ್ಥ್ಯವನ್ನು ಹೆಚ್ಚಿಸುತ್ತದೆ.

ಅಗಸದ ಬೀಜ(flaxseed)
ಅಗಸದ ಬೀಜದಲ್ಲಿ ಒಮೆಗಾ 3 ಕೊಬ್ಬಿನಂಶವಿದೆ, ಇದನ್ನು ಆಹಾರಕ್ರಮದಲ್ಲಿ ಸೇರಿಸುವುದು ಒಳ್ಳೆಯದು.

ಓಟ್ಸ್
ಓಟ್ಸ್ ತಿಂದರೆ ಸಣ್ಣಗಾಗುವಿರಿ ಮಾತ್ರವಲ್ಲ ದೇಹದ ಆರೋಗ್ಯವನ್ನು ಹೆಚ್ಚಿಸುತ್ತದೆ.

ಕಾಫಿ
ಕಾಫಿಯಲ್ಲಿರುವ ಕೆಫೀನ್ ಕೂಡ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ದಿನದಲ್ಲಿ 2 ಲೋಟಕ್ಕಿಂತ ಹೆಚ್ಚಿನ ಕಾಫಿ ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ.

ಚೆರ್ರಿ
ಚೆರ್ರಿ ಹಣ್ಣಿನಲ್ಲಿರುವ antioxidants ರಕ್ತ ಕಣಗಳಿಗೆ ಹಾನಿಯಾಗದಂತೆ ಕಾಪಾಡಿ ಹೈದಯ ಆರೋಗ್ಯವಾಗಿರುವಂತೆ ಮಾಡುತ್ತದೆ.



Click it and Unblock the Notifications











