Latest Updates
-
ಡೇಟಿಂಗ್ ಆ್ಯಪ್ ಬಳಕೆದಾರರೇ ಎಚ್ಚರ: ಈ ಕೆಫೆಗಳೇ ನಿಮ್ಮ ಜೇಬಿಗೆ ಕತ್ತರಿ! -
ದೆಹಲಿ-ಎನ್ಸಿಆರ್ ಬಿರುಗಾಳಿ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಹೀಗೆ ಮಾಡಿ -
AJIO ಮಿಡ್ನೈಟ್ ಮೇನಿಯಾ: ಸ್ನೀಕರ್ಸ್ ಮೇಲೆ ಭರ್ಜರಿ ಆಫರ್ ಪಡೆಯೋದು ಹೇಗೆ? -
ಹವಾಮಾನ ಇಲಾಖೆ ಎಚ್ಚರಿಕೆ: ಬಿರುಗಾಳಿ ಮಳೆಯಲ್ಲಿ ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ಸಂಬಂಧಗಳ ಆತಂಕ ಕಾಡ್ತಿದೆಯಾ? ನೆಮ್ಮದಿ ನೀಡುವ ಉಚಿತ ಸಹಾಯವಾಣಿಗಳು -
IMD ಮಳೆ ಮುನ್ಸೂಚನೆ: ಬಾಲ್ಕನಿ ಸುರಕ್ಷತೆಗೆ ಈ ಕ್ರಮಗಳನ್ನು ಪಾಲಿಸಿ -
ಆರೋಗ್ಯಕರ ಆಹಾರ ಪದ್ಧತಿ: ಬೇಸಿಗೆಯಲ್ಲಿ ಲವಲವಿಕೆಯಿಂದ ಇರಲು ಹೀಗೆ ಮಾಡಿ -
ಅನುಷ್ಕಾ ಶರ್ಮಾ ಸ್ಟೇಡಿಯಂ-ಕೋರ್ ಲುಕ್: ಕ್ರಿಕೆಟ್ ಸೀಸನ್ನ ಹೊಸ ಕ್ರೇಜ್ -
ಇಂದಿನ ರಾಶಿ ಭವಿಷ್ಯ: ನಿಮ್ಮ ಜೀವನದಲ್ಲಿ ಕಾದಿದೆ ಅಚ್ಚರಿಯ ಬದಲಾವಣೆ! -
ಅಹಮದಾಬಾದ್ ದೋಸೆ ಹಿಟ್ಟಿನ ಆತಂಕ: ನಿಮ್ಮ ಮಕ್ಕಳ ಆರೋಗ್ಯಕ್ಕೆ ಈ ಎಚ್ಚರಿಕೆ ಅಗತ್ಯ!
ಹೃದಯಾಘಾತದ 7 ಲಕ್ಷಣಗಳು-ಯಾವುದಕ್ಕೂ ಎಚ್ಚರಿಕೆಯಿಂದಿರಿ!
ಫಾಸ್ಟ್ ಫುಡ್ ಯುಗದಲ್ಲಿ ನಾವು ಕೂಡ ತುಂಬಾ ಫಾಸ್ಟ್ ಆಗಿಯೇ ಇರಬೇಕಾಗುತ್ತದೆ. ಈಗ ನಾವು ಎಷ್ಟು ಫಾಸ್ಟ್ ಆಗಿದ್ದೇವೆ ಎಂದರೆ ನಮ್ಮ ಆರೋಗ್ಯದ ಕಡೆ ಗಮನಹರಿಸಲು ಸಮಯವೇ ಇಲ್ಲದಂತಾಗಿದೆ. ಸಿಕ್ಕಿದ್ದೆಲ್ಲವನ್ನೂ ತಿಂದುಕೊಂಡು ನಮ್ಮ ದೇಹವನ್ನು ಅನಾರೋಗ್ಯದ ಗೂಡನ್ನಾಗಿ ಮಾಡಿಕೊಂಡಿದ್ದೇವೆ. ಇದರಿಂದ ರೋಗನಿರೋಧಕ ಶಕ್ತಿಯು ದೇಹದಲ್ಲಿ ಕಡಿಮೆಯಾಗುತ್ತಾ ಹೋಗುತ್ತಿದೆ. ಎಲ್ಲವನ್ನು ನಾವಾಗಿಯೇ ತಂದುಕೊಂಡಿರುವುದು. ಗುಣಪಡಿಸುವುದಕ್ಕಿಂತ ಮುನ್ನೆಚ್ಚರಿಕೆ ಒಳ್ಳೆಯದು ಎನ್ನುವ ಮಾತಿದೆ. ಹೃದಯದ ಆರೋಗ್ಯಕ್ಕೆ- ಪುರಾತನ ಕಾಲದ ಆಯುರ್ವೇದ ಚಿಕಿತ್ಸೆ
ಆದರೆ ಕೆಲವೊಂದು ಸಂದರ್ಭಗಳಲ್ಲಿ ನಮಗೆ ಈ ರೀತಿಯ ಅನಾರೋಗ್ಯ ಕಾಡಬಹುದು ಎಂದು ಗೊತ್ತಾಗುವುದೇ ಇಲ್ಲ. ಇನ್ನು ಕೆಲವು ಸಲ ನಾವು ಇದನ್ನು ಕಡೆಗಣಿಸುತ್ತೇವೆ. ಏನೇ ಆದರೂ ಆರೋಗ್ಯದ ನಿರ್ಲಕ್ಷ್ಯ ಅಕ್ಷಮ್ಯ ಅಪರಾಧ ಎನ್ನಬಹುದಾಗಿದೆ. ಅದರಲ್ಲೂ ಹೃದಯದ ಬಗ್ಗೆ ನಾವು ಹೆಚ್ಚಿನ ಜಾಗ್ರತೆ ವಹಿಸಿಕೊಳ್ಳಬೇಕು. ಹೃದಯಾಘಾತ ಬರದಂತೆ ತಡೆಯಬೇಕೆ?
ಇಂದಿನ ದಿನಗಳಲ್ಲಿ ಇದರ ಬಗ್ಗೆ ಜಾಗೃತಿಯೂ ನಡೆಯುತ್ತಾ ಇದೆ. ಆದರೆ ಹೃದಯಾಘಾತ ಬರಬಹುದು ಎಂದು ನಮಗೆ ತಿಳಿಯುವುದಾದರೂ ಹೇಗೆ? ಹೃದಯಾಘಾತವಾಗಬಹುದು ಎಂಬ ಬಗ್ಗೆ ನಮಗೆ ಏನಾದರೂ ಲಕ್ಷಣಗಗಳಿಂದ ತಿಳಿದುಕೊಳ್ಳಬಹುದೇ ಎನ್ನುವ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳಿ. ಹೃದಯಾಘಾತವಾಗುತ್ತದೆ ಎನ್ನುವ ಮುನ್ಸೂಚನೆಗಳನ್ನು ಇಲ್ಲಿ ನೀಡಲಾಗಿದೆ.

ಎದೆ ಭಾಗದಲ್ಲಿ ಬಿಗಿಹಿಡಿತ
ಎದೆಭಾಗದಲ್ಲಿ ಬಿಗಿಹಿಡಿತ, ಒತ್ತಡ, ಉರಿಯುವಂತಾಗುವುದು ಇತ್ಯಾದಿ ಕಾಣಿಸಿಕೊಳ್ಳುತ್ತಿದ್ದರೆ ನೀವು ವೈದ್ಯರನ್ನು ಭೇಟಿಯಾಗುವುದು ಉತ್ತಮ.

ವಿವರಿಸಲಾಗದ ನಿಶ್ಯಕ್ತಿ
ಯಾವುದೇ ಕಾರಣವಿಲ್ಲದೆ ಹಠಾತ್ ಆಗಿ ನಿಶ್ಯಕ್ತಿ ಕಾಣಿಸಿಕೊಳ್ಳುವುದು ಹೃದಯಾಘಾತದ ಲಕ್ಷಣವಾಗಿರಬಹುದು. ಹೃದಯಾಘಾತಕ್ಕೆ ಒಂದು ತಿಂಗಳ ಮೊದಲು ಹೀಗಾಗುತ್ತದೆ.

ದೀರ್ಘಸಮಯದ ಶೀತ
ದೀರ್ಘಸಮಯದಿಂದ ಶೀತದ ಸೋಂಕಿನಿಂದ ಬಳಲುತ್ತಿದ್ದರೆ ಇದು ಹೃದಯಾಘಾತದ ಎಚ್ಚರಿಕೆಯಾಗಿರಬಹುದು. ಹೃದಯಕ್ಕೆ ಸರಿಯಾಗಿ ಆಮ್ಲಜನಕ ಸಿಗದೆ ಇರುವಾಗ ಪ್ರತಿರಕ್ಷಣಾ ವ್ಯವಸ್ಥೆ ಮೇಲೆ ಪರಿಣಾಮ ಉಂಟಾಗುವುದು.

ಊತ
ದೇಹದ ಭಾಗಗಳಾದ ಪಾದ, ಹೊಟ್ಟೆ ಮತ್ತು ಕೈ ಇತ್ಯಾದಿ ಊದಿಕೊಂಡರೆ ಹೃದಯವು ಅಸಹಜ ರೀತಿಯಲ್ಲಿ ರಕ್ತವನ್ನು ಹೊರಹಾಕುತ್ತಿದೆ ಎಂದರ್ಥ. ಇದರಿಂದಾಗಿ ಅಪಧಮನಿಗಳಲ್ಲಿ ಉರಿ ಕಾಣಿಸಿಕೊಳ್ಳಬಹುದು.

ಉಸಿರು ಕಟ್ಟುವುದು
ಹೃದಯವು ನಿತ್ರಾಣವಾದಾಗ ಅದು ಶ್ವಾಸಕೋಶಕ್ಕೆ ಸರಿಯಾಗಿ ರಕ್ತಸಂಚಾರ ಮಾಡಲು ವಿಫಲವಾಗುತ್ತದೆ. ಇದರಿಂದ ಉಸಿರಾಟದಲ್ಲಿ ತೊಂದರೆಯಾಗುವುದು.

ತಲೆಸುತ್ತುವುದು
ಯಾವುದೇ ಕಾರಣವಿಲ್ಲದೆ ತಲೆಸುತ್ತುವಿಕೆ ಉಂಟಾಗುತ್ತಿದ್ದರೆ ಮತ್ತು ಯಾವಾಗಲೂ ತಲೆನೋವು ಕಾಣಿಸುತ್ತಿದ್ದರೆ ನಿತ್ರಾಣವಾಗಿರುವ ಹೃದಯವು ಮೆದುಳಿಗೆ ಸರಿಯಾಗಿ ರಕ್ತವನ್ನು ಸರಬರಾಜು ಮಾಡುತ್ತಿಲ್ಲವೆಂದರ್ಥ. ಇದು ಹೃದಯಾಘಾತದ ಒಂದು ಲಕ್ಷಣವಾಗಿರಬಹುದು.

ವಾಕರಿಕೆ
ಆರೋಗ್ಯಕರವಾದ ಆಹಾರವನ್ನು ತಿನ್ನುತ್ತಾ ಇದ್ದರೂ ಯಾವಾಗಲೂ ಅಜೀರ್ಣ, ಹೃದಯದಲ್ಲಿ ಉರಿ ಮತ್ತು ವಾಕರಿಕೆ ಕಂಡು ಬರುತ್ತಿದ್ದರೆ ಹೃದಯಾಘಾತವು ಕೇವಲ ಒಂದು ತಿಂಗಳಲ್ಲೇ ನಿಮ್ಮನ್ನು ಕಾಡಲಿದೆ ಎನ್ನಬಹುದು. ಆದಷ್ಟು ಬೇಗ ನೀವು ವೈದ್ಯರನ್ನು ಭೇಟಿಯಾಗಿ ಅವರಿಂದ ಸಲಹೆ ಪಡೆದುಕೊಳ್ಳುವುದು ಉತ್ತಮ.



Click it and Unblock the Notifications







