Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಹೃದಯದ ಆರೋಗ್ಯಕ್ಕೆ, ನಿತ್ಯ 'ದಾಳಿಂಬೆ ಜ್ಯೂಸ್' ಕುಡಿಯಿರಿ
ದಾಳಿಂಬೆಯಲ್ಲಿ ವಿವಿಧ ಆಂಟಿ ಆಕ್ಸಿಡೆಂಟುಗಳು, ಪಾಲಿಫೆನಾಲ್ ಗಳು ಅತಿ ಹೆಚ್ಚಿನ ಪ್ರಮಾಣದಲ್ಲಿದ್ದು ವಿಶೇಷವಾಗಿ oxidative stress ಅಥವಾ ರಕ್ತದಲ್ಲಿ ಬರುವ ವಿಷಕಾರಿ ವಸ್ತುಗಳನ್ನು ಅಥವಾ ಕಣಗಳನ್ನು ನಿಷ್ಪಲಗೊಳಿಸುವ ಕ್ಷಮತೆ ಕುಂಠಿತವಾಗುವ ಶಕ್ತಿಯನ್ನು ಹೆಚ್ಚಿಸುತ್ತದೆ.
ಅಲ್ಲದೇ ಕ್ಯಾನ್ಸರ್ಗೆ ಕಾರಣವಾಗುವ ಫ್ರೀ ರ್ಯಾಡಿಕಲ್ ಎಂಬ ಕಣಗಳ ಪ್ರಭಾವವನ್ನು ಕಡಿಮೆ ಮಾಡುತ್ತದೆ. ದಾಳಿಂಬೆ ತಿನ್ನಲು ಹಿಂದೇಟು ಹಾಕಲು ಪ್ರಮುಖ ಕಾರಣವೆಂದರೆ ಇದನ್ನು ಸುಲಿದು ಕಾಳುಗಳನ್ನು ಬೇರ್ಪಡಿಸುವ ಕ್ರಿಯೆ. ಇದು ಕೊಂಚ ಸಮಯ ಹಿಡಿಯುವ ಕೆಲಸವಾದ ಕಾರಣ ಹೆಚ್ಚಿನವರು ದಾಳಿಂಬೆಯ ತಂಟೆಗೇ ಹೋಗುವುದಿಲ್ಲ.

ಆದರೆ ಇದರ ಪ್ರಯೋಜನಗಳನ್ನು ಕಂಡುಕೊಂಡಾಗ ಈ ಹಣ್ಣುಗಳ ಕಾಳು ಬೇರ್ಪಡಿಸಲು ವಿನಿಯೋಗಿಸುವ ಸಮಯ ನಿಜಕ್ಕೂ ಸಾರ್ಥಕವಾದುದು ಎಂದು ಕಂಡುಕೊಳ್ಳಬಹುದು. ಹೃದಯದ ಆರೋಗ್ಯ ಉತ್ತಮಗೊಂಡು ನೂರ್ಕಾಲ ಬಾಳಬೇಕು ಎಂದಿದ್ದರೆ ನಿತ್ಯವೂ ಒಂದು ಲೋಟ ಈ ಕಾಳುಗಳನ್ನು ಮಿಕ್ಸಿಗೆ ಹಾಕಿ ಗೊಟಾಯಿಸಿ ಹಿಂಡಿದ ರಸವನ್ನು ಸೇವಿಸಬೇಕು. ಬನ್ನಿ, ಹೃದಯವನ್ನು ಈ ರಸ ಹೇಗೆ ಕಾಪಾಡಿ ನೂರು ವರ್ಷ ಆಯಸ್ಸು ನೀಡುತ್ತದೆ ಎಂಬುದನ್ನು ನೋಡೋಣ...
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ
ದಿನಕ್ಕೊಂದು ಲೋಟ ದಾಳಿಂಬೆ ರಸವನ್ನು ಕುಡಿಯುವ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ( LDL) ಮಟ್ಟ ಕಡಿಮೆಯಾಗಿ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ (HDL) ಮಟ್ಟ ಹೆಚ್ಚಾಗಿ ಒಟ್ಟಾರೆ ಕೊಲೆಸ್ಟ್ರಾಲ್ ಮಟ್ಟ ಆರೋಗ್ಯಕರವಾಗಿರಲು ನೆರವಾಗುತ್ತದೆ. ಇದರಿಂದ ರಕ್ತನಾಳಗಳ ಒಳಗೆ ಸಂಗ್ರಹವಾಗಿದ್ದ ಜಿಡ್ಡು ನಿವಾರಣೆಯಾಗಿ ರಕ್ತಸಂಚಾರ ಸುಗಮಗೊಳ್ಳುತ್ತದೆ. ಸರ್ವತೋಮುಖ ಆರೋಗ್ಯಕ್ಕಾಗಿ ದಾಳಿಂಬೆ ಸೇವಿಸಿ ನೋಡಿ!
ಮಧುಮೇಹ ನಿಯಂತ್ರಣದಲ್ಲಿರಿಸಲು ನೆರವಾಗುತ್ತದೆ
ನಮಗೆ ಗೊತ್ತಿರುವ ಹಾಗೆ ಮಧುಮೇಹವಿದ್ದವರಿಗೆ ಹೃದಯದ ತೊಂದರೆಯೂ ಇರುತ್ತದೆ. ಆದರೆ ಪ್ರತಿದಿನ ಒಂದು ಲೋಟ ದಾಳಿಂಬೆ ರಸವನ್ನು ಕುಡಿಯುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿರಿಸಬಹುದು ಹಾಗೂ ತನ್ಮೂಲಕ ಹೃದಯದ ಆರೋಗ್ಯವನ್ನೂ ಕಾಪಾಡಿಕೊಳ್ಳಬಹುದು. ದಾಳಿಂಬೆಯಲ್ಲಿ ಕಡಿಮೆ ಪ್ರಮಾಣದ ಸಕ್ಕರೆ ಇರುವ ಮತ್ತು ಹೆಚ್ಚು ಪ್ರಮಾಣದ ಆಂಟಿ ಆಕ್ಸಿಡೆಂಟುಗಳು ಇರುವ ಕಾರಣ ಈ ರಸ ಮಧುಮೇಹಿಗಳೂ ಸೇವಿಸಬಹುದಾಗಿದ್ದು ದಿನವಿಡೀ ಬಾಯಾರಿಕೆಯಾಗದಂತೆಯೂ ನೋಡಿಕೊಳ್ಳಬಹುದು.
ರಕ್ತದ ಒತ್ತಡ ಸಮಸ್ಥಿತಿಯಲ್ಲಿರಿಸಲು ನೆರವಾಗುತ್ತದೆ
ಮಾನಸಿಕ ಒತ್ತಡದ ಕಾರಣ ಎದುರಾಗುವ ಅಧಿಕ ರಕ್ತದೊತ್ತಡ ಇಂದು ಸಾಮಾನ್ಯವಾಗಿದ್ದು ಇತ್ತೀಚೆಗೆ ಯುವಜನಾಂಗದಲ್ಲಿಯೂ ಕಂಡುಬರುತ್ತಿದೆ. ಅತಿ ಹೆಚ್ಚಿನ ಸ್ಪರ್ಧೆ ಈ ಒತ್ತಡಕ್ಕೆ ಪ್ರಮುಖ ಕಾರಣ. ಪ್ರತಿದಿನ ಒಂದು ಲೋಟ ದಾಳಿಂಬೆ ರಸವನ್ನು ಕುಡಿಯುವ ಮೂಲಕ ವಿಶೇಷವಾಗಿ ಅಧಿಕ ರಕ್ತದೊತ್ತಡವನ್ನು ಸಮಸ್ಥಿತಿಯಲ್ಲಿರಿಸಲು ಸಾಧ್ಯವಾಗುತ್ತದೆ. ದಾಳಿಂಬೆ ಆರೋಗ್ಯಕ್ಕೆ ಮಾತ್ರವಲ್ಲ, ಸೌಂದರ್ಯಕ್ಕೂ ಬೇಕು
ಅಪಧಮನಿಕಾಠಿಣ್ಯವನ್ನು ಕಡಿಮೆಗೊಳಿಸುತ್ತದೆ
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

