Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
ಹೃದಯಾಘಾತವನ್ನು ತಡೆಯುವಂತಹ ಶಕ್ತಿ ಇಂತಹ ಆಹಾರಗಳಲ್ಲಿದೆ!
ನೈಸರ್ಗಿಕವಾಗಿ ಹಣ್ಣುಗಳು ಹಾಗೂ ತರಕಾರಿಗಳನ್ನು ತಿನ್ನುವುದು ಮತ್ತಷ್ಟು ಒಳ್ಳೆಯದು. ಈ ಆಹಾರಗಳು ಹೃದಯದ ಆರೋಗ್ಯವನ್ನು ಕಾಪಾಡಿ ಹೃದಯಾಘಾತವಾಗದಂತೆ ತಡೆಯುವುದು....
ಒತ್ತಡ ಹಾಗೂ ದೇಹಕ್ಕೆ ಬೇಕಾದ ವ್ಯಾಯಾಮ ಮಾಡಲು ಸಮಯವಿಲ್ಲದೆ ಇರುವುದು ಇಂದಿನ ದಿನಗಳಲ್ಲಿ ಜನರ ದೊಡ್ಡ ಸಮಸ್ಯೆಯಾಗಿದೆ. ಇದರಿಂದಾಗಿ ದೇಹವನ್ನು ಹಲವಾರು ರೋಗಗಳು ಕಾಡುತ್ತದೆ. ಪ್ರಮುಖವಾಗಿ ಅನಾರೋಗ್ಯಕರ ಆಹಾರದಿಂದಾಗಿ ಕೊಬ್ಬು ಹೆಚ್ಚಾಗುತ್ತದೆ. ಇದು ಹೃದಯಘಾತ ಹಾಗೂ ಇತರ ಕಾಯಿಲೆಗಳಿಗೆ ರಹದಾರಿಯಾಗುವುದು. ಹೃದಯಾಘಾತದ 7 ಲಕ್ಷಣಗಳು-ಯಾವುದಕ್ಕೂ ಎಚ್ಚರಿಕೆಯಿಂದಿರಿ!
ಅಪಧಮನಿಗಳಲ್ಲಿ ತಡೆಯಾಗುವುದರಿಂದ ಸರಿಯಾಗಿ ರಕ್ತಸಂಚಾರವಾಗದೆ ಹೃದಯಾಘಾತ ಉಂಟಾಗುತ್ತದೆ. ಈ ಲೇಖನದಲ್ಲಿ ಹೃದಯಾಘಾತವನ್ನು ತಡೆಯುವಂತಹ ಕೆಲವೊಂದು ಆಹಾರಗಳ ಬಗ್ಗೆ ನಿಮಗೆ ತಿಳಿಸಿಕೊಡಲಿದ್ದೇವೆ. ಈ ಆಹಾರಗಳು ಹೃದಯವನ್ನು ಕಾಪಾಡುತ್ತದೆ. ಈ ಆಹಾರಗಳು ಅಪಧನಿಮಗಳನ್ನು ಸ್ವಚ್ಛಗೊಳಿಸಿ ಯಾವುದೇ ರೀತಿಯ ತಡೆಯಾಗದಂತೆ ನೋಡಿಕೊಳ್ಳುತ್ತದೆ. ಹಲವಾರು ರೀತಿಯ ಹಣ್ಣುಗಳು ಹಾಗೂ ತರಕಾರಿಗಳು ಹೃದಯದ ಆರೋಗ್ಯವನ್ನು ಕಾಪಾಡುವುದು. ಥಟ್ಟನೇ ಕಾಡುವ 'ಹೃದಯಾಘಾತ'! ತಿಳಿಯಲೇಬೇಕಾದ ಸತ್ಯ ಸಂಗತಿ
ನೈಸರ್ಗಿಕವಾಗಿ ಹಣ್ಣುಗಳು ಹಾಗೂ ತರಕಾರಿಗಳನ್ನು ತಿನ್ನುವುದು ಮತ್ತಷ್ಟು ಒಳ್ಳೆಯದು. ಈ ಆಹಾರಗಳು ಹೃದಯದ ಆರೋಗ್ಯವನ್ನು ಕಾಪಾಡಿ ಹೃದಯಾಘಾತವಾಗದಂತೆ ತಡೆಯುವುದು. ಏನು ತಿನ್ನುತ್ತೇವೆ ಮತ್ತು ಏನು ಕುಡಿಯುತ್ತೇವೆ ಎನ್ನುವುದು ತುಂಬಾ ಮುಖ್ಯವಾಗಿರುತ್ತದೆ. ಇದರಿಂದ ದೇಹಕ್ಕೆ ಹೆಚ್ಚಿನ ಪೋಷಕಾಂಶಗಳು ಸಿಗುವುದು. ಹೃದಯಾಘಾತವನ್ನು ತಡೆಯುವಂತಹ ಕೆಲವೊಂದು ಆಹಾರಗಳ ಬಗ್ಗೆ ತಿಳಿದುಕೊಳ್ಳಿ.....

ಸಾಲ್ಮನ್ ಮೀನು
ಸಾಲ್ಮನ್ ಮೀನಿನಲ್ಲಿ ಆರೋಗ್ಯಕರ ಕೊಬ್ಬಿನಾಮ್ಲವಿದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವಲ್ಲಿ ಪ್ರಮುಖ ಪಾತ್ರ ನಿಭಾಯಿಸುತ್ತದೆ ಮತ್ತು ಉರಿಯೂತವನ್ನು ತಡೆಯುತ್ತದೆ. ಹೃದಯಾಘಾತಕ್ಕೆ ಕೊಲೆಸ್ಟ್ರಾಲ್ ಮತ್ತು ಉರಿಯೂತ ಪ್ರಮುಖ ಕಾರಣವಾಗಿದೆ.

ಕಿತ್ತಳೆ ಜ್ಯೂಸ್
ಕಿತ್ತಳೆ ಜ್ಯೂಸ್ ನಲ್ಲಿ ವಿಟಮಿನ್ ಸಿ ಮತ್ತು ಆ್ಯಂಟಿ ಆಕ್ಸಿಡೆಂಟ್ ಇದೆ. ರಕ್ತನಾಳಗಳು ಹಾನಿಗೊಳಗಾಗುವುದನ್ನು ಇದು ತಡೆಯುತ್ತದೆ ಹಾಗೂ ರಕ್ತದೊತ್ತಡವನ್ನು ಸಾಮಾನ್ಯವಾಗಿಡುವುದು. ದಿನಕ್ಕೆ ಎರಡು ಲೋಟ ಕಿತ್ತಳೆ ಜ್ಯೂಸ್ ಕುಡಿದರೆ ಹೃದಯಾಘಾತದಿಂದ ಪಾರಾಗಬಹುದು ಎಂದು ಅಧ್ಯಯನಗಳು ಹೇಳಿವೆ.

ಬೀಜಗಳು
ಬೀಜಗಳು ತುಂಬಾ ಆರೋಗ್ಯಕಾರಿ ಆಹಾರವಾಗಿದೆ. ಇದು ಕೊಬ್ಬಿನಾಮ್ಲಗಳು, ಅಪರ್ಯಾಪ್ತ ಕೊಬ್ಬು ಮತ್ತು ಒಮೆಗಾ3 ಕೊಬ್ಬಿನಾಮ್ಲವು ಬೀಜಗಳಲ್ಲಿ ಇದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕೊಲೆಸ್ಟ್ರಾಲ್ ಮಟ್ಟವು ಕಡಿಮೆಯಾಗುವುದು ಮಾತ್ರವಲ್ಲದೆ ಗಂಟು ಹಾಗೂ ಹೃದಯದ ಆರೋಗ್ಯವು ಚೆನ್ನಾಗಿರುವುದು.

ಅರಿಶಿನ
ಅರಿಶಿನದಲ್ಲಿ ತುಂಬಾ ಬಲಿಷ್ಠವಾಗಿರುವಂತಹ ಉರಿಯೂತ ಶಮನಕಾರಿ ಗುಣವಾದ ಸಿರ್ಕುಮಿನ್ ಲಭ್ಯವಿದ್ದು, ಇದು ಉರಿಯೂತವನ್ನು ಕಡಿಮೆ ಮಾಡಿ ಅತಿಯಾಗಿ ಕೊಬ್ಬು ಶೇಖರಣೆಯಾಗದಂತೆ ನೋಡಿಕೊಳ್ಳುವುದು. ಅರಿಶಿನವನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಹೃದಯಾಘಾತವನ್ನು ತಡೆಯಬಹುದು.

ಗ್ರೀನ್ ಟೀ
ಹೃದಯಾಘಾತವನ್ನು ತಡೆಯುವಂತಹ ಮತ್ತೊಂದು ಪ್ರಮುಖವಾಗಿರುವ ಆಹಾರವೆಂದರೆ ಅದು ಗ್ರೀನ್ ಟೀ. ಗ್ರೀನ್ ಟೀಯಲ್ಲಿರುವ ಕಾಟೆಚಿನ್ ಎನ್ನುವ ಅಂಶವು ಬಲಶಾಲಿ ಆ್ಯಂಟಿಆಕ್ಸಿಡೆಂಟ್ ಆಗಿದ್ದು, ಇದು ಹೃದಯವನ್ನು ಕಾಪಾಡುವುದು. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಚಯಾಪಚಾಯ ಕ್ರಿಯೆಯನ್ನು ವೃದ್ಧಿಸುವುದು. ದಿನಕ್ಕೆ ಎರಡು ಕಪ್ ಗ್ರೀನ್ ಟೀ ಕುಡಿಯುವುದು ಉತ್ತಮ ಫಲಿತಾಂಶ ನೀಡುವುದು.



Click it and Unblock the Notifications
